ರೈತರ ಖಾತೆಗಳಲ್ಲಿನ ಹಣವನ್ನು ಸಾಲಕ್ಕೆ ಜಮಾ ಮಾಡಿದರೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ತಹಶೀಲ್ದಾರ್ ರೆಹಾನ್ ಪಾಷ.

by | 02/01/24 | ಜನಧ್ವನಿ


ಚಳ್ಳಕೆರೆ: ನಗರದ ತಾಲೂಕು ಕಚೇರಿಯಲ್ಲಿ ತಹಸಿಲ್ದಾರ್ ರೆಹನ್ ಪಾಷಾ ನೇತೃತ್ವದಲ್ಲಿ ರೈತರ ಹಾಗೂ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಯಿತು.

ಈ ವೇಳೆ ಮಾತಾಡಿದ ರೈತ ಮುಖಂಡ ರೆಡ್ಡಿ ಹಳ್ಳಿ ವೀರಣ್ಣ ತಾಲೂಕಿನಲ್ಲಿ ಮಳೆ ಬಾರದೆ ಬರಗಾಲದ ಪರಿಸ್ಥಿತಿ ಆವರಿಸಿದ್ದು ಸರ್ಕಾರವೇ ಚಳ್ಳಕೆರೆ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದರು ಸಹ ಬ್ಯಾಂಕ್ ಅಧಿಕಾರಿಗಳು ರೈತರ ಬೆಳೆ ಸಾಲಗಳಿಗೆ ನೋಟಿಸ್ ಜಾರಿ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.


ಮುಂದುವರೆದು ಮಾತನಾಡುತ್ತಾ ರೈತರ ಖಾತೆಗಳಿಗೆ ಸರ್ಕಾರದ ಯೋಜನೆಗಳ ಹಣ ಬಂದಿದ್ದರು ಆ ಹಣವನ್ನು ಸಾಲದ ಖಾತೆಗೆ ಜಮಗೊಳಿಸಿ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾರೆ ಇದರಿಂದಾಗಿ ರೈತರು ತಮ್ಮ ಜೀವನವನ್ನು ನಡೆಸಲು ಕಷ್ಟಕರವಾಗುತ್ತಿದೆ ರೈತ ಮಹಿಳೆಯರು ತಮ್ಮ ದಿನ ನಿತ್ಯದ ಜೀವನವನ್ನು ಸಾಗಿಸಲು ಖಾಸಗಿ ಸಂಸ್ಥೆಗಳ ಸಂಘಗಳಲ್ಲಿ ಸಾಲವನ್ನು ಪಡೆದಿರುತ್ತಾರೆ ಆ ಹಣವು ಖಾತೆಗಳಿಗೆ ಜಮಾ ಆಗುತ್ತಿದ್ದಂತೆ ಆ ಹಣವನ್ನು ಸಹ ಸಾಲಕ್ಕೆ ಜಮೆ ಮಾಡಿಕೊಳ್ಳುವುದು ಸರಿಯಲ್ಲ ಇಂತಹ ಕ್ರಮಗಳನ್ನು ಬ್ಯಾಂಕ್ ಅಧಿಕಾರಿಗಳು ಇನ್ನು ಮುಂದೆ ಅನುಸರಿಸಕೂಡದು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬ್ಯಾಂಕುಗಳ ಮುಂದೆ ರೈತರು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ತಿಪ್ಪಾರೆಡ್ಡಿ ಮಾತನಾಡಿ ನಗರದಲ್ಲಿ ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಜಾತಿ ಪ್ರಮಾಣ ಪತ್ರ ಪಹಣಿ ಪಡೆಯಲು ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು ಇದಕ್ಕೆ ತಾಲೂಕು ಆಡಳಿತ ಕಡಿವಾಣ ಹಾಕಬೇಕು ಎಫ್ ಐ ಡಿ ಮಾಡಿಸಲು ಹೋದಾಗ ಪಿತ್ರಾರ್ಜಿತ ಪಹಣಿಗಳಲ್ಲಿ ಬದಲಾವಣೆ ಆಗದಿದ್ದ ಸಂದರ್ಭದಲ್ಲಿ ಲೋಪದೋಷಗಳು ಕಂಡುಬಂದಿರುವುದರಿಂದ ಎಫ್ ಐ ಡಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ತ್ವರಿತ ಗತಿಯಲ್ಲಿ ಇಂತಹ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ರೆಹಾನ್ ಪಾಷಾ ಮಾತನಾಡಿ ತಾಲೂಕಿನಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬ್ಯಾಂಕ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬರುವುದು ಅಥವಾ ಪೋಸ್ಟ್ಗಳ ಮೂಲಕ ಕಳುಹಿಸುವುದು ಮಾಡಬಾರದು ಈ ರೀತಿಯಾಗಿ ಕಂಡುಬಂದರೆ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ರೈತರು ಬೆಳೆ ಪರಿಹಾರ ಪಡೆಯಲು ತಕ್ಷಣವೇ ಎಫ್ ಐ ಡಿ ಮಾಡಿಸಬೇಕು ಎಫ್ ಐ ಡಿ ಮಾಡಿಸಿದಲ್ಲಿ ಸರ್ಕಾರ ಘೋಷಣೆ ಮಾಡಿರುವ 2000 ಬರ ಪರಿಹಾರ ಹಣವು ನೇರವಾಗಿ ಖಾತೆಗೆ ಜಮಾ ಆಗಲಿದೆ ತಕ್ಷಣವೇ ಎಫ್ ಐ ಡಿ ಮಾಡಿಸಿ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳಬೇಕು ಈಗಾಗಲೇ ತಾಲೂಕಿನಲ್ಲಿ ಸುಮಾರು 75,000 ರೈತರು ಎಫ್ ಐಡಿ ಮಾಡಿಸಿದ್ದು ಬಾಕಿ ಉಳಿದಿರುವ ರೈತರು ಕೂಡಲೇ ಎಫ್ ಐ ಡಿ ಮಾಡಿಸಿ ಅನುಕೂಲ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿದ ಬ್ಯಾಂಕ್ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು

ಈ ವೇಳೆ ರೈತ ಮುಖಂಡರಾದ ಸುರೇಶ್ ರಾಜಣ್ಣ ಶ್ರೀಕಂಠ ಮೂರ್ತಿ ಹನುಮಂತಪ್ಪ ತಿಪ್ಪಾರೆಡ್ಡಿ ಯರ್ರಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page