ರೈತರ ಖಾತೆಗೆ ಬೆಳೆ ಪರಿಹಾರ ಕೆಲವೇ ದಿನಗಳು ಬಾಕಿ-ಎಫ್ ಐ ಡಿ ಮಾಡಿಸಲ ಮುಂದಾಗದ ರೈತರು.

by | 13/12/23 | ಜನಧ್ವನಿ


ಚಳ್ಳಕೆರೆಡಿ13. ರಾಜ್ಯ ಸರಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ ಮಾಡಲು ಇನ್ನು ಕೆಲವೇ ದಿನಗಳು ಬಾಕಿದ್ದರೂ ಸಹ ಕೆಲ ರೈತರು ಎಫ್ ಐಡಿ ಮಾಡಿಸಲು ಮುಂದೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೌದು ಚಳ್ಳಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದು ಒಂದು ರೀತಿಯ ಸಮಾಧಾನವಾದರೂ, ಪಹಣಿಗಳ ದಾಖಲೆಯನ್ನು ಫ್ರೂಟ್ಸ್ (ಫಾರ್ಮರ್ ರಿಜಿಸ್ಪ್ರೇಶನ್ ಆಂಡ್ ಯುನಿಫೈಡ್ ಬೆನಿಫಿಷರಿ ಇನ್ಫರ್ಮೇಶನ್ ಸಿಸ್ಟಮ್) ತಂತ್ರಾಂಶದಲ್ಲಿ ಎಫ್ಐಡಿ (ಫಾರ್ಮರ್ಸ್ ಐಡೆಂಟಿಫಿಕೇಶನ್ ಡಾಕ್ಯುಮೆಂಟ್) ಮೂಲಕ ರೈತರ ಖಾತೆಗೆ ನೇರ ಹಣ ಹಾಕಲಾಗುವುದು ಎಂದು ಕೃಷಿ , ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ಪ್ರಚಾರ ಹಾಗೂ ಮನೆ ಮುಂದೆಯೇ ಎಫ್ ಐಡಿ ಮಾಡಿಕೊಂಡುತ್ತೇವೆ ಎಂದು ರೈತರ ಮನವೊಲಿಸಿದರೂ ಸಹ ಶೇ 100 ರಷ್ಟು ಗುರಿಮುಟ್ಟಲು ಸಾಧ್ಯವಾಗುತ್ತಿಲ್ಲ ಇತ್ತ ಸರಕಾರ ಯವೊಬ್ಬ ರೈತರು ಬೆಳೆ ನಷ್ಟ ಪರಿಹಾರದಿಂದ ವಂಚಿತರಾಗದಂತೆ ಪ್ರತಿ ಯೊಬ್ಬ ರೈತರಿಗೆ ಎಫ್ ಐಡಿ ಮಾಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ ರೈತರು ಮುಂದೆ ಬಾರದೇ ಇರುವುದು ಅಧಿಕಾರಿಗಳಿಗೆ ಚಿಂತೆಗೀಡು ಮಾಡಿದೆ.

ಚಳ್ಳಕೆರೆ ತಾಲ್ಲೂಕಿನಾದ್ಯಾಂತ ಒಟ್ಟು 123177 ಜಮೀನುಗಳಿದ್ದು ಅದರಲ್ಲಿ 92372 ಜಮೀನುಗಳು ಮಾತ್ರ ಪೂಟ್ಸ್ ತಂತ್ರಾಂಶದಲ್ಲಿ ನೊಂದಾಣಿಯಾಗಿರುತ್ತವೆ, ಇನ್ನುಳಿದ 31966 ಜಮೀನುಗಳು ತಂತ್ರಾಂಶದಲ್ಲಿ ನೊಂದಾಣಿಯಾಗಿರುವುದಿಲ್ಲ ಶೇ 74.29 ಮಾತ್ರ ರೈತರು ಎಫ್ ಐ ಡಿ ನೊಂದಾಯಿಸಿಕೊಂಡಿದ್ದಾರೆ. . ಸರಕಾರದಿಂದ ರೈತರಿಗೆ ನೀಡುವ ಬರ ಪರಿಹಾರದ ಹಣವು ಸ್ವತಃ ಅನ್ನದಾತರ ಖಾತೆಗೆ ಜಮೆ ಆಗುವುದರಿಂದ ಸೂಕ್ತ ದಾಖಲೆ ಸಲ್ಲಿಸುವ ಮೂಲಕ ಎಫ್ಐಡಿ ಮಾಡಿಸುವಂತೆ ಹಳ್ಳಿಗಳಲ್ಲಿ ವ್ಯಾಪಕ ಪ್ರಚಾರ ಮಾಡಲಾಗಿದೆ. ಆದರೂ, ರೈತರು ಎಫ್.ಐ.ಡಿ ಮಾಡಿಸಲು ಇಚ್ಚಾ ಶಕ್ತಿ ತೋರುತ್ತಿಲ್ಲ.


ಎಫ್ ಐಡಿ ಗುರಿಮುಟ್ಟಲು ಹಲವು ತೊಡಕುಗಳು.

ತಾತ ಮುತ್ತಾಂದಿರ ಹೆಸರಿಗಿರುವ ಜಮೀನುಗಳು ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆ ಆಗದೆ ಇರುವುದು, ಇತ್ತೀಚೆಗೆ ಮರಣ ಹೊಂದಿರುವವರು ಹಾಗೂ ಪಹಣಿ ವರ್ಗಾವಣೆ ಆಗಿರುವವರ ಕೆಲ ತಾಂತ್ರಿಕ ಕಾರಣದಿಂದ ಹಾಗೂ ಜಮೀನು ಹೊಂದಿದ ರೈತರು ಭೂಮಿ ಪಾಳ ಬಿಟ್ಟು ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಉದ್ಯೋಗ ಮಾಡಲು ಹೋಗಿರುವ ಸಾಕಷ್ಟು ರೈತರು ಎಫ್ಐಡಿ ಮಾಡಿಸಲು ಮುಂದೆ ಬಾರದೆ ಇರುವುದು ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪಡಿತರ ಚೀಟಿ ರದ್ದಾಗುವ ಭೀತಿ.
ಸರಕಾರ ನೀಡುವ ಎರಡು ಸಾವಿರ ರೂ ಪರಿಹಾರಕ್ಕೆ ವರ್ಷದ ಕೂಳು ಕಳೆದು ಕೊಳ್ಳಬೇಕೆ ಎಂಬ ಮಾತುಗಳು ಸಹ ರೈತರಿಂದ ಕೇಳಿ ಬರುತ್ತಿವೆ ಸುಮಾರು 7 ಎಕರೆ ಭೂಮಿ ಮೇಲಿದ್ದರೈತರ ಪಡಿತರ ಚೀಟಿಗಳು ರದ್ದಾಗುತ್ತವೆ ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ, ಉಚಿತ ಆರೋಗ್ಯ ಚಿಕಿತ್ಸೆಗೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದಲೂ ಸಹ ರೈತರು ಎಫ್ ಐ ಡಿ ಹಾಗೂ ಪಿಎಂ ಕಿಸಾನ್ ಗೆ ಆಧಾರ್ ಲಿಂಕ್ ಮಾಡಲು ರೈತರು ಮುಂದೆ ಬರದೆ ಬೆಳೆ ಪರಿಹಾರ ಹಾಗೂ ಬೆಳೆ ವಿಮೆಯೂ ಬೇಡ ಎಂದು ಕೆಲ ರೈತರು ಎಫ್ಐಡಿ ಹಾಗೂ ಪಿಎಂ ಕಿಸಾನ್ ಯೋಜನೆಗೆ ಆಧಾರ್ ಲಿಂಕ್ ಮಾಡಲು ರೈತರು ಇಚ್ಚಾಶಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page