ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾಳುಮಾಡುತ್ತಿರುವ ಗೂಳಿಯನ್ನು ಹೊರಗೆ ಸಾಗಿಸುವಂತೆ ಗ್ರಾಮಸ್ಥರ ಅಳಲು.

by | 30/10/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ದೇವರ ಹೆಸರಿನಲ್ಲಿ ಬಿಟ್ಟ ಗೂಳಿ(ಬಸವ) ರೈತರ ಬೆಳೆಗಳನ್ನು ನಾಶ ಮಾಡುತ್ತಿದ್ದು ಕೂಡಲೆ ಇದನ್ನು ಹಿಡಿದು ಬೇರೆ ಕಡೆ ಸಾಗಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಹೌದ ಇದು ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮಯಕ್ಕೆ ಯೋವುದೋ ಊರಿಂದ ದೇವರ ಗೂಳಿಯನ್ನು ತಂದು ಬಿಟ್ಟುಹೋಗಿರುವುದರಿಂದ ರೈತರ ಬೆಳೆಗಳನ್ನು ಹಾಳು ಮಾಡುತ್ಡಿಯಲು ಹೋದರೆ ಮೇಲೆ ಎರಗುತ್ತದೆ. ಈಗಾಗಲೆ ರೈತರು ಇತ್ತನೆ ಮಾಡಿದ ಬೆಳೆಗಳಿಗೆ ಮಳೆಯಿಲ್ಲದೆ ಬೆಳೆ ಹೊಣಗಲು ಪ್ರಾರಂಭಿಸಿದ್ದು ಹಾಕಿದ ಬಂಡವಾಳ ಕೈ ಸೇರದೆ ಸಾಲದ ಸುಳಿಗೆ ಸಿಲುಕುವಂತೆ ಮಾಡಿದ್ದು. ಇದರ ಬೆನ್ನೇಲೆ ಕಳೆದ ಸುಮಾರು ಎರಡು ತಿಂಗಳಿಂದ ಯಾರೋ ಬಿಟ್ಟುಹೋದ ಬಸವ ರಾತ್ರಿ ವೇಳೆ ರೈತರ ಜಮೀನುಗಳಿಗೆ ನುಗ್ಗಿ ಮೆಕ್ಕೆಜೋಳ, ತರಕಾರಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳನ್ನು ತಿಂದು ನಾಷ ಮಾಡುತ್ತಿದೆ.


ಗ್ರಾಮಸ್ಥರಿಗೆ ವಿಪರೀತ ತೊಂದರೆ ನೀಡುತ್ತಿದೆ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಗೂಳಿಯನ್ನು ನಿಯಂತ್ರಿಸಬೇಕು ಎಂದು ರೈತ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ತಹಶಿಲ್ದಾರ್ ರೆಹಾನ್ ಪಾಷಾ ರವರಿಗೆ ಒತ್ತಾಯಿಸಿದರು.


ತಹಶೀಲ್ದಾರ್ ರೆಹಾನ್ ಪಾಷಾ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಬುಡಕಟ್ಟು ಜನರು ದೇವರ ಎತ್ತುಗಳನ್ನು ಹಾರೈಕೆ ಮಾಡುವುದು ಸರ್ವೇಸಾಮಾನ್ಯವಾಗಿದೆ ಇಂತಹ ಗೂಳಿಗಳು ದೇವರ ಎತ್ತುಗಳ ಜೊತೆ ಒಡನಾಟ ಬೆಳೆಸಿಕೊಂಡರೆ ಇಂತಹ ಸಮಸ್ಯೆಗಳು ಉದ್ಭವಿಸುವುದಿಲ್ಲ ಒಂಟಿಯಾಗಿ ಓಡಾಡುವಾಗ ಸಾರ್ವಜನಿಕರು ಇಂತಹ ಗೂಳಿಗಳಿಗೆ ತೊಂದರೆ ಮಾಡಿದಾಗ ಮಾತ್ರ ಅವು ತಿರುಗಿ ಬೀಳುತ್ತವೆ ಅಪರ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಈ ಸಮಸ್ಯೆಯ ಬಗ್ಗೆ ದೂರವಾಣಿ ಮೂಲಕ ಚರ್ಚಿಸಿದ್ದು ಅರಣ್ಯ ಇಲಾಖೆ, ಪಶುಸಂಗೋಪನೆ ಹಾಗೂ ಕಂದಾಯ ಇಲಾಖೆ ಮೂಲಕ ಗೂಳಿಯನ್ನು ಸಾಗಿಸಲಾಗುವುದು ಇದರಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ತಿಳಿಸಿದರು.
ಪಶು ಇಲಾಖೆ ಅಧಿಕಾರಿ ರೇವಣ್ಣ ಮಾತನಾಡಿ ದೇವರ ಎತ್ತುಗಳಿಗೆ ಅಥವಾ ಸಾಕುವ ಪಶುಗಳಿಗೆ ಅರವಳಿಕೆ ಮದ್ದು ನೀಡಲು ಬರುವುದಿಲ್ಲ ಕೇವಲ ಕಾಡುಪ್ರಾಣಿಗಳಿಗೆ ಮಾತ್ರ ಅದನ್ನು ಉಪಯೋಗಿಸಲು ಕಾನೂನಿನಲ್ಲಿ ಅವಕಾಶವಿದೆ ಗ್ರಾಮಸ್ಥರು ಸಹಕಾರ ನೀಡಿದರೆ ಪಶು ಇಲಾಖೆಯಿಂದ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಬೇರೆಡೆ ಸಾಗಿಸಲು ಏರ್ಪಾಡು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಕಾರ್ತಿಕ್ ಬಸವರಾಜ್ ತಿಪ್ಪೇಸ್ವಾಮಿ ತಿಮ್ಮ ರೆಡ್ಡಿ ಗಂಗಾಧರ ಹನುಮಂತ್ ರೆಡ್ಡಿ ಪ್ರಶಾಂತ ರೆಡ್ಡಿ ಚಂದ್ರಣ್ಣ ಮಂಜುನಾಥ ಶಿವಮೂರ್ತಿ ರಾಜಣ್ಣ ಕೃಷ್ಣಮೂರ್ತಿ ನಿಂಗಣ್ಣ ಈರಣ್ಣ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page