ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಪತ್ರ

by | 14/02/23 | ಪ್ರತಿಭಟನೆ

ಹಿರಿಯೂರು ಫೆ.14 :
ತಾಲ್ಲೂಕಿನ ಹರಿಯಬ್ಬೆಯ ಕೆಪಿಟಿಸಿಎಲ್ ನಿಂದ ಹಿರಿಯೂರು ಎಸ್.ಆರ್.ಎಸ್ ರವರೆಗೆ ಬೃಹತ್ ಕಾಮಗಾರಿ ಅಡಿಯಲ್ಲಿ ಬರುವ ರೈತರ ಜಮೀನುಗಳಿಗೆ ಸೋಲಾರ್ ಕಂಪನಿಯವರು ಸೂಕ್ತಪರಿಹಾರ ನೀಡಬೇಕು ಎಂಬುದಾಗಿ ತಾಲ್ಲೂಕು ರೈತಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರೈತಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಕೆಪಿಟಿಸಿಎಲ್ ಹರಿಯಬ್ಬೆಯಿಂದ ಹಿರಿಯೂರು ಎಸ್.ಆರ್.ಎಸ್ ರವರೆಗೆ ಬೃಹತ್ ಕಾಮಗಾರಿ ಅಡಿಯಲ್ಲಿ ಬರುವ ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಪತ್ರ ಅರ್ಪಿಸಿ ಅವರು ಮಾತನಾಡಿದರು.
ನವದೆಹಲಿ ಮೂಲದ ಸೋಲಾರ್ ಕಂಪನಿಯವರು ವಿದ್ಯುತ್ ಉತ್ಪಾದಿಸಿ, ಸರ್ಕಾರಕ್ಕೆ ನೀಡುವ ಕಾಮಗಾರಿಯು ಪ್ರಗತಿಯಲ್ಲಿದ್ದು, ಇದರ ಅಡಿಯಲ್ಲಿ ಬರುವ ರೈತರಿಗೆ ಯಾವುದೇ ನೋಟೀಸ್ ನೀಡದೇ ಬೆಳೆ ಪರಿಹಾರ ಮತ್ತು ಭೂ ಪರಿಹಾರದ ಬಗ್ಗೆ ಮಾಹಿತಿ ನೀಡದೇ ರೈತರನ್ನು ಬಂಧಿಸಿ, ಕಾಮಗಾರಿ ಮಾಡಲು ಮುಂದಾಗಿರುತ್ತಾರೆ,
ತಾವುಗಳು, ಕ್ಷೇತ್ರದ ಶಾಸಕರು, ಡಿವೈಎಸ್.ಪಿ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ರೈತರೊಂದಿಗೆ ಕಳೆದ ವರ್ಷ ಅಕ್ಟೋಬರ್ 6 ರಂದು ಶಾಸಕರ ಕಚೇರಿಯಲ್ಲಿ ಪರಿಹಾರದ ಬಗ್ಗೆ ಸಭೆ ನಡೆಸುವ ಸಂದರ್ಭದಲ್ಲಿ ಸರ್ಕಾರದಿಂದ ಬೆಳೆ ಪರಿಹಾರ 19.5 ಕೋಟಿ ಮತ್ತು ಕಾರಿಡಾರ್ ಭೂ ಪರಿಹಾರವಾಗಿ 3 ಕೋಟಿ 17.5 ಲಕ್ಷ ರೂಗಳು ಬಂದಿರುತ್ತದೆ ಎಂದು ಮಾಹಿತಿ ನೀಡಿರುತ್ತೀರಿ,
ಅದಕ್ಕೆ ರೈತರು ಒಪ್ಪದೆ ನಮ್ಮ ತಾಲ್ಲೂಕಿನಲ್ಲಿ ಬೇರೆ ಬೇರೆ ಭಾಗದಲ್ಲಿ ಈಗಾಗಲೇ ಕೆಪಿಟಿಸಿಎಲ್ ನವರು ಹೆಚ್ಚಿನ ಪರಿಹಾರ ಕೊಟ್ಟಿರುತ್ತಾರೆ, ಅದೇ ರೀತಿ ಪರಿಹಾರವನ್ನು ನಮಗೂ ಕೊಡಿ ಎಂದು ರೈತರು ಒತ್ತಾಯಿಸಿದರಲ್ಲದೆ, ಫೆಬ್ರವರಿ 10 ರಂದು ಕಾಮಗಾರಿ ನಡೆಸಲು ಕೈಕೋರ್ಟ್ ಆದೇಶ ಮಾಡಿದೆ ಎಂದು ತಾವುಗಳು ಅಡ್ಡಿಪಡಿಸಬಾರದು ಎಂದು ಹೇಳಿ ರೈತರನ್ನು ಬಂಧಿಸಿ ಕಾಮಗಾರಿ ನಡೆಸಲು ಮುಂದಾಗಿರುತ್ತಾರೆ,
ಈ ಕಾಮಗಾರಿಯು ಖಾಸಗಿ ಕಂಪನಿಯವರದಾಗಿದ್ದು, ರೈತರಿಗೆ ಸೂಕ್ತ ಪರಿಹಾರ ಮತ್ತು ತಾವುಗಳು ಸೂಚಿಸಿರುವ ಪರಿಹಾರವನ್ನು ಕೊಡಿಸಿ, ಕಾಮಗಾರಿಯನ್ನು ಮುಂದುವರೆಸಬಹುದು, ಅಲ್ಲಿಯವರೆಗೂ ಕಾಮಗಾರಿಯನ್ನು ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂಬುದಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತಮುಖಂಡರುಗಳಾದ ಗೋವಿಂದಪ್ಪ, ಕಾಂತರಾಜು, ನಿಂಗಪ್ಪ, ಶೇಖರ್, ಶಿವಣ್ಣ, ತಿಪ್ಪೇಸ್ವಾಮಿ, ಮಹಂತೇಶ್, ಪರಶುರಾಮ್, ಕೃಷ್ಣಪ್ಪ, ಚಂದ್ರಣ್ಣ, ತಿಮ್ಮಣ್ಣ, ಈರಣ್ಣ, ಬಂಡೆಪ್ಪ ಮೋಹನ ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page