ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಲಿ ಎಂದು ಬಿಜೆಪಿ‌ ಸಂಸದ ಹಾಗೂ ಶಾಸಕರಿಗೆ ಸಿ.ಎಂ.ಸಿದ್ದರಾಮಯ್ಯ ತಿರುಗೇಟು.

by | 02/11/23 | ಕರ್ನಾಟಕ

ಕೊಪ್ಪಳ ನ.2 ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ಇಂದು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ:

ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಸಿದರೆ ಉತ್ತಮ.
ಕೇಂದ್ರ ಸರ್ಕಾರಕ್ಕೆ 17,900 ಕೋಟಿ ರೂ. ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದೇವೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ, ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ.

ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಭೀಕರ ಬರಗಾಲ ಇರುವುದರಿಂದ ಜನರ, ರೈತರ ಸಮಸ್ಯೆಗಳನ್ನು ಕೇಳಿ ಸಕಾಲದಲ್ಲಿ ಸ್ಪಂದಿಸಬೇಕೆಂದು ಪ್ರತಿ ಶಾಸಕರಿಗೆ, ಸಚಿವರಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದೇನೆ.

ರಾಜ್ಯ ಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು ರೂ.900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ.
ಈ ಹಿಂದೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು.

ನಾವು ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದೆವು. ಅದನ್ನು ಈಡೇರಿಸಿದ್ದೇವೆ. ಹಿಂದಿನ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನ ಮಾಡಿ ನುಡಿದಂತೆ ನಡೆದಿದ್ದೇವೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page