ಹಿರಿಯೂರು ಜ.14 ಬಡವರಿಗೆ ವಸತಿ ಯೋಜನೆಗೆ ಮನೆಕಟ್ಟಿಕೊಳ್ಳಲು ಬಿಲ್ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿ ಲೋಕಾಯುಕ್ತರ ಬಲೆಗೆ. ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ತಾಲೂಕು ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಆರೋಪಿ.
ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪಾಂಡುರಂಗಪ್ಪ ಅವರಿಗೆ ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಗೆ ಬಿಲ್ ಮಂಜೂರು ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ
0 Comments