ಲಂಚ ಪಡೆಯುತ್ತಿದ್ದ ಭರಮಸಾಗರ ಗ್ರಾಮ ಪಂಚಾಯಿತಿ ಪಿಡಿಒ ಶಿವಪ್ಪ ಲೋಕಾಯುಕ್ತ ಬಲೆಗೆ.

by | 16/12/23 | ಕ್ರೈಂ


ಚಿತ್ರದುರ್ಗ, ಡಿ.16 : ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಭರಮಸಾಗರ ಗ್ರಾಮ ಪಂಚಾಯಿತಿ ಪಿಡಿಒ ಶಿವಪ್ಪ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಭರಮಸಾಗರ ವಾಸಿ ಬಿ.ಎನ್. ಕುಮಾರಸ್ವಾಮಿ ಇವರ ತಾಯಿಯವರು ಗ್ರಾಮದಲ್ಲಿ 1965ರಲ್ಲಿ ಒಂದು ಮನೆಯನ್ನು ಖರೀದಿಸಿದ್ದು, ಅವರು 1993ರಲ್ಲಿ ಮರಣ ಹೊಂದಿ.ಮನೆಯನ್ನು ತನ್ನ ಮತ್ತು ತನ್ನ ಅಣ್ಣಂದಿರುಗಳ ಹೆಸರಿಗೆ ಖಾತೆ ಬದಲಾವಣೆ ಮಾಡಿಸಿಕೊಳ್ಳುವ ಸಲುವಾಗಿ ಗ್ರಾಮ ಪಂಚಾಯತಿ ಪಿಡಿಒ ಶಿವಪ್ಪ ಅವರು ಹೊಳಲ್ಕೆರೆ , ಸ್ಟ್ಯಾಂಪ್‌ವೆಂಡರ್ ಕಲ್ಲೇಶ್ ಅವರ ಮುಖಾಂತರ ಅವರ ಖಾತೆ ಬದಲಾವಣೆ ಮಾಡಿಕೊಡಲು ರೂ.50,000/-ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ.

ಪಿಡಿಒ ವಿರುದ್ಧ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು (ಶನಿವಾರ) ಬಿ.ಎನ್. ಕುಮಾರಸ್ವಾಮಿ ಅವರಿಂದ ರೂ. 40,000/-ಗಳ ಲಂಚದ ಹಣವನ್ನು ಪಡೆಯುವಾಗ ಅಧಿಕಾರಿಗಳು ಪಿಡಿಒ ಶಿವಪ್ಪ ಮತ್ತು ಸ್ಟಾಂಪ್ ವೆಂಡರ್ ಕಲ್ಲೇಶ್ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ.

ಮುಂದಿನ ತನಿಖೆಯನ್ನು ಆರ್. ವಸಂತ ಕುಮಾರ್, ಪೊಲೀಸ್ ನಿರೀಕ್ಷಕರು ಇವರು ಕೈಗೊಂಡಿದ್ದು ಅಧೀಕ್ಷಕರಾದ ಎನ್. ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ಪೊಲೀಸ್ ಉಪಾಧೀಕ್ಷಕರಾದ ಎನ್. ಮೃತ್ಯುಂಜಯ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಲೋಕಾಯುಕ್ತ ಕಛೇರಿಯ, ಪೊಲೀಸ್ ನಿರೀಕ್ಷಕರುಗಳಾದ ಶ್ರೀಮತಿ ವೈ.ಎಸ್. ಶಿಲ್ಪಾ, ಬಿ. ಮಂಜುನಾಥ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಜಿ.ಎಂ.ತಿಪ್ಪೇಸ್ವಾಮಿ, ಸಿ.ಹೆಚ್.ಸಿ. ಹೆಚ್. ಶ್ರೀನಿವಾಸ, ಸಿ.ಹೆಚ್.ಸಿ., ಶ್ರೀಮತಿ ಎಸ್.ಆರ್.ಪುಷ್ಪ, ಮ.ಹೆಚ್.ಸಿ., ಎಲ್.ಜಿ.ಸತೀಶ, ಸಿಪಿಸಿ, ಜಿ.ಎನ್. ಸಂತೋಷ್ ಕುಮಾರ್, ಸಿಪಿಸಿ., ಎಸ್. ರಾಜೇಶ್, ಸಿಪಿಸಿ, ಮಂಜುನಾಥ, ಸಿಪಿಸಿ, ಮಹಲಿಂಗಪ್ಪ, ಸಿಪಿಸಿ, ಕೆ.ಟಿ. ಮಾರುತಿ, ಸಿಪಿಸಿ, ಆರ್.ವೆಂಕಟೇಶ್ ಕುಮಾರ್, ಎಪಿಸಿ, ಟಿ.ವಿ.ಸಂತೋಷ್, ಎಪಿಸಿ, ಡಿ.ಮಾರುತಿ, ಎಪಿಸಿ ಮತ್ತು ಎನ್.ಎಲ್.ಶ್ರೀಪತಿ, ಎಪಿಸಿ ಹಾಗೂ ಕಲೋ, ಶಿವಮೊಗ್ಗ ಠಾಣೆಯ ಸಿಬ್ಬಂದಿಗಳಾದ ಜಿ. ಸುರೇಂದ್ರ, ಸಿ.ಹೆಚ್.ಸಿ., ಪ್ರಶಾಂತ್ ಕುಮಾರ್, ಸಿಪಿಸಿ, ಶ್ರೀ ರಘುನಾಯ್ಕ, ಸಿಪಿಸಿ ಮತ್ತು ತರುಣ್‌ಕುಮಾರ್, ಎಪಿಸಿ ಇವರುಗಳು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page