ಲಂಚ ಪ್ರಕರಣ : ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಇಇ ಲೋಕಾಯುಕ್ತ ಬಲೆಗೆ

by | 28/02/23 | ಕ್ರೈಂ

ಕೊಪ್ಪಳ ಫೆಬ್ರವರಿ 28 (ಕರ್ನಾಟಕ ವಾರ್ತೆ): ಕೊಪ್ಪಳ ಪಂಚಾಯತ ರಾಜ್ ಎಂಜಿನಿಯರಿಂಗ್ ವಿಭಾಗ ಕಛೇರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಸೈಯ್ಯದ್ ಫಜಲ್ ಅವರು ತಮ್ಮ ಕಚೇರಿಯ ಕೊಠಡಿಯಲ್ಲಿ ಲಂಚದ ಹಣ 15,000 ಪಡೆದುಕೊಂಡು ಲೋಕಾಯುಕ್ತ ಟ್ರ‍್ಯಾಪ್‌ಗೆ ಒಳಪಟ್ಟಿರುತ್ತಾರೆ.
ಕುಕನೂರು ತಾಲೂಕ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಂಪೌಂಡ್ ನಿರ್ಮಾಣ ಕಾಮಗಾರಿ ಅಂದಾಜು ಮೊತ್ತ ರೂ. 5,00,000 ಹಾಗೂ ಮಂಗಳೂರ ದಿಂದ ಬೇವೂರ ರಸ್ತೆಯ ಸುಧಾರಣೆ (ಕಿ.ಮೀ. 0 ದಿಂದ ಕಿ.ಮೀ 2.25) ಕಾಮಗಾರಿ ಅಂದಾಜು ಮೊತ್ತ ರೂ 4,50,000 ತುಂಡುಗುತ್ತಿಗೆ ಕಾಮಗಾರಿ ಬಿಲ್ಲು ಮಂಜೂರಾತಿ ಮಾಡಲು ಗುತ್ತಿಗೆದಾರರಿಗೆ 25,000 ಸಾವಿರ ರೂ.ಗಳಿಗೆ ಲಂಚದ ಬೇಡಿಕೆ ಇಟ್ಟಿದ್ದು, ಪರ‍್ಯಾಧಿದಾರರು ಚೌಕಾಸಿ ಮಾಡಲಾಗಿ 15,000 ರೂಪಾಯಿ ಕೊಡು ಅಂತ ಲಂಚ ಹಣಕ್ಕೆ ಒತ್ತಾಯಿಸಿದ ಬಗ್ಗೆ ನೀಡಿದ ದೂರಿನ ಸಾರಾಂಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಠಾಣೆ ಗುನೆ ನಂ: 02/2023 ಕಲಂ: 7(ಎ) ಭ್ರಷ್ಟಾಚಾರ, ಪ್ರತಿಬಂಧಕ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018) .ರೀತ್ಯ ಪಿ.ಐ ಗಿರೀಶ ರೋಡಕರ ಅವರು ಪ್ರಕರಣ ದಾಖಲಿಸಿ, ಟ್ರ‍್ಯಾಪ್‌ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅದರಂತೆ ಫೆ.27ರ ಸಾಯಂಕಾಲ 4:20 ಗಂಟೆ ಸುಮಾರಿಗೆ ದೂರುದಾರರಿಂದ ಆಪಾದಿತ ಅಧಿಕಾರಿ ಸೈಯ್ಯದ್ ಫಾಜಲ್ ಅವರು ಹಣ ಪಡೆಯುವಾಗ ಟ್ರ‍್ಯಾಪ್‌ಗೆ ಒಳಗಾಗಿದ್ದು, ಅಪಾದಿತ ಅಧಿಕಾರಿಯಿಂದ ಲಂಚದ ಹಣ ಜಫ್ತು ಮಾಡಿಕೊಂಡು ತನಿಖೆಯನ್ನು ಮುಂದುವರೆಸಲಾಗಿರುತ್ತದೆ.
ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರಾದ ಸಲೀಂಪಾಷಾ ಅವರ ನೇತೃತ್ವದಲ್ಲಿ ಪಿ.ಐ ಗಿರೀಶ ರೋಡ್ಕರ್, ಪಿ.ಐ ಚಂದ್ರಪ್ಪ ಈಟಿ., ಪಿ.ಐ ಸಂತೋಷ ರಾಠೋಡ, ಸಿಹೆಚ್‌ಸಿ ಸಿದ್ದಯ್ಯ, ಸಿಹೆಚ್‌ಸಿ ರಾಮಣ್ಣ, ಸಿಹೆಚ್‌ಸಿ ಬಸವರಾಜ, ಸಿಪಿಸಿ ರಂಗನಾಥ, ಸಿಪಿಸಿ ನಾಗಪ್ಪ, ಮಪಿಸಿ ತಾರಾಮತಿ, ಮಪಿಸಿ ಶೈಲಜಾ,, ಎಪಿಸಿ ಆನಂದಕುಮಾರ, ಎಪಿಸಿ ಗುರು ದೇಶಪಾಂಡೆ, ಎಹೆಚ್‌ಸಿ ರಾಜು ಅವರು ದಾಳಿ ನಡೆಸಿದ್ದರು ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page