ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

by | 26/05/24 | ಸುದ್ದಿ


ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು ನಾಡಿಗೆ ವಿಸ್ತೃತ ವಾಗಿ ಪರಿಚಯಿಸಬೇಕಾದ ಅಗತ್ಯ ಇದೆ’ ಎಂದು ಅಂಬೇಡ್ಕರ್ ವಾದಿ ಚಿಂತಕ ಡಾ.ಹುಲಿಕುಂಟೆ ಮೂರ್ತಿ ಹೇಳಿದರು.
ಚಿತ್ರದುರ್ಗ ನಗರದ ಪತ್ರಕರ್ತರ ‘ಭವನದಲ್ಲಿ ‘ಭಾನುವಾರ ಬಿಕೆ-ಕೆಬಿ ಬಳಗ ಮತ್ತು ಲಂಕೇಶ್ ವಿಚಾರ ವೇದಿಕೆಯಿಂದ ಆಯೋಜಿಸಿದ್ದ ‘ಲಕ್ಕೂರು ಆನಂದ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಯುವ ಬರಹಗಾರ ಆನಂದ್ ತನ್ನ ವಯಸ್ಸಿಗೆ ಸಾಹಿತ್ಯ, ಸಂಶೋಧನೆ, ಕಾವ್ಯದಲ್ಲಿ ಮಾಡಿರುವ ಕೆಲಸವನ್ನು ದಶಕಗಳ ಕಾಲ ಬದುಕಿರುವ ಕವಿ, ಸಾಹಿತಿಗಳು ಮಾಡಿ ತೋರಿಸಲಿ. ಆನಂದ್ ಬದುಕಿನ ದಾರಿ ಒಂದಿತ್ತು. ಅದನ್ನು ಗ್ರಹಿಸದೇ ಚಾರಿತ್ರ್ಯಹರಣ ಮಾಡುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಆನಂದ್‌ರಂತ ಪ್ರತಿ‘ಯನ್ನು ಬಿತ್ತು ಬೆಳೆಯುವುದು ನಮಗೆ ಗೊತ್ತಿದೆ’ ಎಂದರು.
ಪ್ರಾಧ್ಯಾಪಕ ವಿ.ಎಲ್.ನರಸಿಂಹಮೂರ್ತಿ ಮಾತನಾಡಿ‘ಪ್ರತಿಯೊಬ್ಬ ಬರಹಗಾರ ನಾರ್ಸಿಸ್ಟ್ ಆಗಿರುತ್ತಾನೆ. ಆನಂದ್ ಕೂಡಾ ಮಹತ್ವಾ ಕಾಂಕ್ಷಿಯಾಗಿದ್ದ. ಶೋಷಿತ ಸಾಮಾಜಿಕ ಹಿನ್ನೆಲೆಯ ಆನಂದ್‌ಗೆ ನನ್ನ ಬರಹಗಳನ್ನು ಗುರುತಿಸಬೇಕು. ಮೆಚ್ಚುಗೆ ಸೂಚಿಸಬೇಕು ಅನ್ನುವ ಮನೋಧೋರಣೆ ಇತ್ತು. ಇದು ತಪ್ಪಲ್ಲ. ಆತ ಮಾಡಿರುವ ಕಾವ್ಯ, ಸಂಶೋಧನೆ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ’ ಎಂದರು.
ಆಧುನಿಕ ರಂಗಕರ್ಮಿ ಕೆ.ಪಿ.ಲಕ್ಷ್ಮಣ್ ಮಾತನಾಡಿ‘ಹಳ್ಳಿಯ ಜಾತಿ ವ್ಯವಸ್ಥೆ ತನಗೆ ಅನವಾದ ಜಾತಿಗಳು ಹೀಗೆ ವರ್ತಿಸಬೇಕು, ನಡೆದುಕೊಳ್ಳಬೇಕು ಎಂದು ನಿರ್ದೇಶಿಸುತ್ತದೆ. ಈ ಜಾತಿಯ ವಿಕಾರ ಈಗ ಕನ್ನಡ ಸಾಂಸ್ಕೃತಿಕ ಲೋಕಕ್ಕೂ ವಿಸ್ತರಿಸಿದೆ. ಆನಂದ್‌ರ ಸಾವಿನ ಸುತ್ತ ವ್ಯಕ್ತವಾದ ಅಭಿಪ್ರಾಯಗಳು ಇದನ್ನು ಹೇಳುತ್ತಿವೆ. ಇದು ಬದಲಾಗಬೇಕು’ ಎಂದು ಹೇಳಿದರು.
ಕನ್ನಡ ಪುಸ್ತಕ ಪ್ರಾಕಾರದ ಸದಸ್ಯ ಡಾ.ರವಿಕುಮಾರ್ ನೀಹಾ ಮಾತನಾಡಿ‘ಆನಂದ್ ಅದ್ಭುತ ಜೀವನ ಪ್ರೀತಿಯ ಗೆಳೆಯ. ಸದಾ ಕಾವ್ಯ, ಕಾದಂಬರಿಗಳು ಕುರಿತು ಮಾತನಾಡುತ್ತಿದ್ದ. ಮಾತಂಗ ಮಹಿಳಾ ಸಂಸ್ಕೃತಿ ಕುರಿತು ಅದ್ಭುತ ಪುಸ್ತಕ ಬರೆದಿದ್ದ. ಹೊಸ ಸಂಶೋ‘ನಾ ಮಾದರಿಗಳನ್ನು ಹುಡುಕುತ್ತಿದ್ದ. ಆತನ ಸಂಶೋಧನೆಯ ದಾರಿ, ಅಧ್ಯಯನ ಮಾಡುವ ಪ್ರಕ್ರಿಯೆ ವಿಭಿನ್ನವಾಗಿತ್ತು’ ಎಂದರು.
ತುಮಕೂರು ವಿವಿ ಪ್ರಾಧ್ಯಾಪಕ ಡಾ.ಬಗ್ಗನಡು ನಾಗಭೂಷಣ ಮಾತನಾಡಿ‘ಆನಂದ್ ಚಿಕ್ಕವಯಸ್ಸಿನಲ್ಲೇ ತೀವ್ರತರವಾಗಿ ಬದುಕಿದ ಬರಹಗಾರ. ಆನಂದ್‌ರ ಬದುಕಿನ ಮೌಲ್ಯಮಾಪನ ಮಾಡುವವರು ನ್ಯಾಯಾಧೀಶರ ಸ್ಥಾನದಲ್ಲೇನೂ ಇರುವುದಿಲ್ಲ. ಮುಂದೊಂದು ದಿನ ಅವರೂ ಮೌಲ್ಯಮಾಪನಕ್ಕೆ ಒಳಗಾಗುತ್ತಾರೆ. ವ್ಯಕ್ತಿಯ ಸಾವನ್ನು ಬಯಸುವವರು ಮತ್ತು ಸಂಭ್ರಮಿಸುವವರಿಗಿಂತ ಸಾವನ್ನು ಅಗೌರವಿಸುವವರು ಅಪಾಯಕಾರಿಗಳು’ ಎಂದರು.
ಸಾಮಾಜಿಕ ಹೋರಾಟಗಾರ ಕೊಟ್ಟ ಶಂಕರ್ ಕೋಡಿಹಳ್ಳಿ ಸಂತೋಷ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಗತಿಪರ ಚಿಂತಕ ಜೆ.ಯಾದವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಜಡೇಕುಂಟೆ ಮಂಜುನಾಥ್, ಹೊಳೆಯಪ್ಪ ಸಾಕ್ಯ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page