ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

by | 26/05/24 | ಸುದ್ದಿ


ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು ನಾಡಿಗೆ ವಿಸ್ತೃತ ವಾಗಿ ಪರಿಚಯಿಸಬೇಕಾದ ಅಗತ್ಯ ಇದೆ’ ಎಂದು ಅಂಬೇಡ್ಕರ್ ವಾದಿ ಚಿಂತಕ ಡಾ.ಹುಲಿಕುಂಟೆ ಮೂರ್ತಿ ಹೇಳಿದರು.
ಚಿತ್ರದುರ್ಗ ನಗರದ ಪತ್ರಕರ್ತರ ‘ಭವನದಲ್ಲಿ ‘ಭಾನುವಾರ ಬಿಕೆ-ಕೆಬಿ ಬಳಗ ಮತ್ತು ಲಂಕೇಶ್ ವಿಚಾರ ವೇದಿಕೆಯಿಂದ ಆಯೋಜಿಸಿದ್ದ ‘ಲಕ್ಕೂರು ಆನಂದ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಯುವ ಬರಹಗಾರ ಆನಂದ್ ತನ್ನ ವಯಸ್ಸಿಗೆ ಸಾಹಿತ್ಯ, ಸಂಶೋಧನೆ, ಕಾವ್ಯದಲ್ಲಿ ಮಾಡಿರುವ ಕೆಲಸವನ್ನು ದಶಕಗಳ ಕಾಲ ಬದುಕಿರುವ ಕವಿ, ಸಾಹಿತಿಗಳು ಮಾಡಿ ತೋರಿಸಲಿ. ಆನಂದ್ ಬದುಕಿನ ದಾರಿ ಒಂದಿತ್ತು. ಅದನ್ನು ಗ್ರಹಿಸದೇ ಚಾರಿತ್ರ್ಯಹರಣ ಮಾಡುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಆನಂದ್‌ರಂತ ಪ್ರತಿ‘ಯನ್ನು ಬಿತ್ತು ಬೆಳೆಯುವುದು ನಮಗೆ ಗೊತ್ತಿದೆ’ ಎಂದರು.
ಪ್ರಾಧ್ಯಾಪಕ ವಿ.ಎಲ್.ನರಸಿಂಹಮೂರ್ತಿ ಮಾತನಾಡಿ‘ಪ್ರತಿಯೊಬ್ಬ ಬರಹಗಾರ ನಾರ್ಸಿಸ್ಟ್ ಆಗಿರುತ್ತಾನೆ. ಆನಂದ್ ಕೂಡಾ ಮಹತ್ವಾ ಕಾಂಕ್ಷಿಯಾಗಿದ್ದ. ಶೋಷಿತ ಸಾಮಾಜಿಕ ಹಿನ್ನೆಲೆಯ ಆನಂದ್‌ಗೆ ನನ್ನ ಬರಹಗಳನ್ನು ಗುರುತಿಸಬೇಕು. ಮೆಚ್ಚುಗೆ ಸೂಚಿಸಬೇಕು ಅನ್ನುವ ಮನೋಧೋರಣೆ ಇತ್ತು. ಇದು ತಪ್ಪಲ್ಲ. ಆತ ಮಾಡಿರುವ ಕಾವ್ಯ, ಸಂಶೋಧನೆ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ’ ಎಂದರು.
ಆಧುನಿಕ ರಂಗಕರ್ಮಿ ಕೆ.ಪಿ.ಲಕ್ಷ್ಮಣ್ ಮಾತನಾಡಿ‘ಹಳ್ಳಿಯ ಜಾತಿ ವ್ಯವಸ್ಥೆ ತನಗೆ ಅನವಾದ ಜಾತಿಗಳು ಹೀಗೆ ವರ್ತಿಸಬೇಕು, ನಡೆದುಕೊಳ್ಳಬೇಕು ಎಂದು ನಿರ್ದೇಶಿಸುತ್ತದೆ. ಈ ಜಾತಿಯ ವಿಕಾರ ಈಗ ಕನ್ನಡ ಸಾಂಸ್ಕೃತಿಕ ಲೋಕಕ್ಕೂ ವಿಸ್ತರಿಸಿದೆ. ಆನಂದ್‌ರ ಸಾವಿನ ಸುತ್ತ ವ್ಯಕ್ತವಾದ ಅಭಿಪ್ರಾಯಗಳು ಇದನ್ನು ಹೇಳುತ್ತಿವೆ. ಇದು ಬದಲಾಗಬೇಕು’ ಎಂದು ಹೇಳಿದರು.
ಕನ್ನಡ ಪುಸ್ತಕ ಪ್ರಾಕಾರದ ಸದಸ್ಯ ಡಾ.ರವಿಕುಮಾರ್ ನೀಹಾ ಮಾತನಾಡಿ‘ಆನಂದ್ ಅದ್ಭುತ ಜೀವನ ಪ್ರೀತಿಯ ಗೆಳೆಯ. ಸದಾ ಕಾವ್ಯ, ಕಾದಂಬರಿಗಳು ಕುರಿತು ಮಾತನಾಡುತ್ತಿದ್ದ. ಮಾತಂಗ ಮಹಿಳಾ ಸಂಸ್ಕೃತಿ ಕುರಿತು ಅದ್ಭುತ ಪುಸ್ತಕ ಬರೆದಿದ್ದ. ಹೊಸ ಸಂಶೋ‘ನಾ ಮಾದರಿಗಳನ್ನು ಹುಡುಕುತ್ತಿದ್ದ. ಆತನ ಸಂಶೋಧನೆಯ ದಾರಿ, ಅಧ್ಯಯನ ಮಾಡುವ ಪ್ರಕ್ರಿಯೆ ವಿಭಿನ್ನವಾಗಿತ್ತು’ ಎಂದರು.
ತುಮಕೂರು ವಿವಿ ಪ್ರಾಧ್ಯಾಪಕ ಡಾ.ಬಗ್ಗನಡು ನಾಗಭೂಷಣ ಮಾತನಾಡಿ‘ಆನಂದ್ ಚಿಕ್ಕವಯಸ್ಸಿನಲ್ಲೇ ತೀವ್ರತರವಾಗಿ ಬದುಕಿದ ಬರಹಗಾರ. ಆನಂದ್‌ರ ಬದುಕಿನ ಮೌಲ್ಯಮಾಪನ ಮಾಡುವವರು ನ್ಯಾಯಾಧೀಶರ ಸ್ಥಾನದಲ್ಲೇನೂ ಇರುವುದಿಲ್ಲ. ಮುಂದೊಂದು ದಿನ ಅವರೂ ಮೌಲ್ಯಮಾಪನಕ್ಕೆ ಒಳಗಾಗುತ್ತಾರೆ. ವ್ಯಕ್ತಿಯ ಸಾವನ್ನು ಬಯಸುವವರು ಮತ್ತು ಸಂಭ್ರಮಿಸುವವರಿಗಿಂತ ಸಾವನ್ನು ಅಗೌರವಿಸುವವರು ಅಪಾಯಕಾರಿಗಳು’ ಎಂದರು.
ಸಾಮಾಜಿಕ ಹೋರಾಟಗಾರ ಕೊಟ್ಟ ಶಂಕರ್ ಕೋಡಿಹಳ್ಳಿ ಸಂತೋಷ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಗತಿಪರ ಚಿಂತಕ ಜೆ.ಯಾದವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಜಡೇಕುಂಟೆ ಮಂಜುನಾಥ್, ಹೊಳೆಯಪ್ಪ ಸಾಕ್ಯ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page