ಹಿರಿಯೂರು:
ತಾಲ್ಲೂಕಿನ ಐಮಂಗಲ ಹೋಬಳಿಯ ಶ್ರೀಕ್ಷೇತ್ರ ವದ್ಧಿಕೆರೆ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೋಮವಾರ ವೈಭವದಿಂದ ನೆರವೇರಿತು.ಸಿದ್ದೇಶ್ವರನ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿತ್ತು.
ಭಕ್ತರು ದೇವರಿಗೆ ಅರ್ಪಿಸಿದ್ದ ದೊಡ್ಡ ದೊಡ್ಡ ಹೋವಿನ ಹಾರಗಳು ಹಾಗೂ ಹಲವು ರೀತಿಯ ಹೂಗಳಿಂದ ರಥವನ್ನು ಸಿಂಗಾರಗೊಳಿಸಲಾಗಿತ್ತು. ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮುಖಾಂತರ ಕರೆತಂದು ರಥದಲ್ಲಿ ಪ್ರತಿಷ್ಟಾಪಿಸಲಾಯಿತು.
ಮೆರವಣಿಗೆಯುದ್ದಕ್ಕೂ ವೀರಗಾಸೆ, ನೃತ್ಯ, ಕಹಳೆ ಮಂಗಳವಾದ್ಯಗಳು ಮೊಳಗಿದವು. ರಥಕ್ಕೆ ಹಾಗೂ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ರಥಕ್ಕೆ ಬಲಿದಾನದ ಪೂಜೆ ಸಲ್ಲಿಸಿದ ನಂತರ ರಥೋತ್ಸವ ಪ್ರಾರಂಭವಾಯಿತು.
ಭಕ್ತರು ಬಾಳೆ ಹಣ್ಣು, ಉತ್ತುತ್ತಿಹಣ್ಣು ರಥಕ್ಕೆ ಎಸೆದು ಭಕ್ತಿಭಾವ ಮೆರೆದರು. ಬಿರು ಬಿಸಿಲಿನಲ್ಲಿಯೂ ಸಹ ಭಕ್ತರು ಬಿಸಿಲಿನ ತಾಪ ಲೆಕ್ಕಿಸದೆ ಜಾತ್ರೆಯ ಸಡಗರದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಚಿತ್ರದುರ್ಗ, ಬಳ್ಳಾರಿ, ತುಮಕೂರು ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಟೋ, ಟ್ಯಾಕ್ಟರ್, ಬಸ್, ಕಾರು, ಎತ್ತಿನ ಗಾಡಿ ಸೇರಿದಂತೆ ಇನ್ನಿತರ ವಾಹನಗಳಲ್ಲಿ ಬಂದು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ತಹಶೀಲ್ದಾರ್ ರಾಜೇಶ್ ಕುಮಾರ್, ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಮುಜುರಾಯಿ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments