ಲೇನ್‍ಡಿಸಿಪ್ಲೀನ್ ಅನುಷ್ಠಾನ: ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ ಲೇನ್ ಡಿಸಿಪ್ಲೀನ್ ನಿಯಮ ಉಲ್ಲಂಘಿಸಿದರೆ ರೂ.500 ದಂಡ

by | 14/03/23 | ಜನಧ್ವನಿ


ಚಿತ್ರದುರ್ಗ ಮಾ 14:
ಚಿತ್ರದುರ್ಗದ ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.
ಡಿ.ಜಿ ಮತ್ತು ಐ.ಜಿ.ಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ ನಂಬರ್ ಪ್ಲೇಟ್ ರೆಕಾಗ್ನೇಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರಾಯೋಗಾರ್ಥವಾಗಿ ಚಿತ್ರದುರ್ಗ, ದಾವಣಗೆರೆ, ಹಾವೇರಿಗಳಲ್ಲಿ ಕಾರ್ಯಾರಂಭ ಮಾಡಿದ್ದು, ಅದರಂತೆ ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳನ್ನು ಅಳವಡಿಸಿದ್ದು, ಮಾರ್ಚ್ 12 ರಿಂದ ಕಾರ್ಯನಿರ್ವಹಿಸುತ್ತಿರುತ್ತವೆ.
ಹೆದ್ದಾರಿಯ ಬಲಭಾಗದ ರಸ್ತೆಯನ್ನು ವೇಗವಾಗಿ ಚಲಿಸುವ ವಾಹನಗಳಿಗೆ ಮೀಸಲಿರಿಸಲಾಗಿದೆ. ಭಾರೀ ವಾಹನಗಳನ್ನು ಬಲಭಾಗದ ರಸ್ತೆಯಲ್ಲಿ ಚಲಿಸುವಂತಿಲ್ಲ. ವಾಹನಗಳು ವೇಗಕ್ಕನುಸಾರವಾಗಿ ರಸ್ತೆಯ ಎಡ ಮತ್ತು ಮಧ್ಯದ ಮಾರ್ಗವನ್ನು ಬಳಸುವುದು. ಈ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ನಿಯಮ ಉಲ್ಲಂಘಿಸಿದ ಸ್ಥಳದಿಂದ ಮುಂದೆ ಬರುವ ಟೋಲ್‍ಗಳಲ್ಲಿ ರೂ.500 ದಂಡ ವಿಧಿಸಲಾಗುವುದು.
ಒಂದು ವೇಳೆ ಟೋಲ್‍ನಲ್ಲಿ ದಂಡ ಕಟ್ಟಲು ತಪ್ಪಿಸಿಕೊಳ್ಳಲು ಬೇರೆ ಮಾರ್ಗ ಬಳಸಿ ಹೋದರೂ ಸಹ ಮುಂದಿನ ದಿನಗಳಲ್ಲಿ ಯಾವುದೇ ಟೋಲ್ ದಾಟುವ ಸಂದರ್ಭದಲ್ಲಿ ಅಥವಾ ಈ ತಂತ್ರಾಂಶವು ಸಾರಿಗೆ ಇಲಾಖೆಯ ತಂತ್ರಾಂಶದೊಂದಿಗೆ ಸಂಯೋಜನೆ ಹೊಂದಿರುವುದರಿಂದ ವಾಹನಕ್ಕೆ ಸಂಬಂಧಿಸಿದಂತೆ ಯಾವುದೇ ಕೆಲಸ ಕಾರ್ಯಗಳಿಗೆ ಆರ್‍ಟಿಓ ಕಚೇರಿಗೆ ಹೋದಾಗ ದಂಡ ವಿಧಿಸಲಾಗುವುದು.
ಭಾರೀ ವಾಹನಗಳನ್ನು ಚಾಲನೆ ಮಾಡುವ ಚಾಲಕರು ಲೇನ್ ಡಿಸಿಪ್ಲೀನ್ ನಿಯಮದಂತೆ ವಾಹನಗಳನ್ನು ಚಾಲನೆ ಮಾಡುವ ಮೂಲಕ ಸುರಕ್ಷಿತವಾಗಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಕೋರಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page