ಹಿರಿಯೂರು:
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿ ದೆಹಲಿಯಲ್ಲಿ ಆಡಳಿತ ನಡೆಸಬೇಕಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅತ್ಯಂತ ಜವಬ್ದಾರಿಯಿಂದ ಚುನಾವಣೆ ಎದುರಿಸುವ ಮೂಲಕ ನಮ್ಮಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕರೆ ನೀಡಿದರು.
ಮಂಗಳವಾರ ತಾಲ್ಲೂಕು ಕಾಂಗ್ರೆಸ್ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಎಲ್ಲೆಡೆ ಕಾಂಗ್ರೆಸ್ ಪಕ್ಷದ ಅಲೆ ಇದ್ದು, ಏಪ್ರಿಲ್ 5 ರಿಂದ ಖಂಡೇನಹಳ್ಳಿ ಭಾಗದಿಂದ ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತೇವೆ. ಪಕ್ಷದ ಗ್ಯಾರಂಟಿ ಯೋಜನೆಗಳನ್ನು ತಿಳಿಸಿ ಅವುಗಳನ್ನು ಮತಗಳನ್ನಾಗಿ ಪರಿವರ್ತಿಸಬೇಕು ಎಂಬುದಾಗಿ ಅವರು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಚಿತ್ರದುರ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ 100 ಕಿ.ಮೀ ದೂರ ಇರುವ ಅಜ್ಜಂಪುರ ತಾಲ್ಲೂಕಿನ ನಾನು ಬೇಕೋ? 500 ಕಿ.ಮೀ ದೂರದಿಂದ ಬಂದು ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬೇಕೋ? ಎಂಬುದನ್ನು ಮತದಾರರು ನಿರ್ಧರಿಸಲಿ ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು.
ನನ್ನನ್ನು ಮೂಡಿಗೆರೆಚಂದ್ರಪ್ಪ ಎನ್ನುತ್ತಿದ್ದಾರೆ. ನಾನು ಚಿತ್ರದುರ್ಗಕ್ಕೆ ಹೊಂದಿಕೊಂಡಿರುವ ಅಜ್ಜಂಪುರ ತಾಲ್ಲೂಕಿನವನು. ಭದ್ರಾಮೇಲ್ದಂಡೆ ಯೋಜನೆಯ ಕೆಳಭಾಗದ ಊರಿನಲ್ಲಿ ಹುಟ್ಟಿದವನು. ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿ ಆಕಸ್ಮಿಕ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಬಿಜೆಪಿ ಅಭ್ಯರ್ಥಿಯ ರಾಜಕೀಯ ಬದುಕು ಆರಂಭಿಸಿದ್ದ ಪ್ರದೇಶದ ಭಾಷೆ ಬೇರೆ, ಇಲ್ಲಿನ ಭಾಷೆ ಬೇರೆ. ಇಲ್ಲಿನ ಭಾಷೆ ಅವರಿಗೆ ಅರ್ಥವಾಗುವುದಿಲ್ಲ. ಅವರಿಗೆ ಸಂಸದರಾಗುವ ಅರ್ಹತೆ ಇರಬಹುದು. ಆದರೆ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳ ಪರಿಚಯ ಇರಬೇಕಲ್ಲವೇ? ಎಂಬುದಾಗಿ ಚಂದ್ರಪ್ಪ ಪ್ರಶ್ನಿಸಿದರು.
ನಾನು ಹಿಂದಿನ ಹತ್ತು ವರ್ಷಗಳಿಂದ ನಿಮ್ಮ ಮನೆಯ ಮಗನಂತೆ ಕೆಲಸಮಾಡಿಕೊಂಡು ಬಂದಿದ್ದೇನೆ. ನನ್ನ ರಾಜಕೀಯ ಬದುಕಿನಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಭ್ರಷ್ಟಚಾರ, ಜಾತಿ ತಾರತಮ್ಯ ಆರೋಪಗಳಿಲ್ಲ. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸುತ್ತಿದ್ದು, ಪಕ್ಷದಕಾರ್ಯಕರ್ತರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿರೋಧ ಪಕ್ಷದವರಿಗೆ ನಮ್ಮ ಶಕ್ತಿ ತೋರಿಸಬೇಕು ಎಂಬುದಾಗಿ ಅವರು ಹೇಳಿದರಲ್ಲದೆ,
ಈ ಹಿಂದೆ ಲೋಕಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ಈ ನಂಬಿಕೆಯಿಂದ ಹೈಕಮಾಂಡ್ ಟಿಕೇಟ್ ನೀಡಿದ್ದು, ಮತ್ತೊಮ್ಮೆ ತಮ್ಮ ಸೇವೆ ಮಾಡಲು ಅವಕಾಶ ನೀಡಬೇಕು ಎಂಬುದಾಗಿ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಡಿ.ಟಿ. ಶ್ರೀನಿವಾಸ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಮಾಜಿ ಶಾಸಕ ಎ.ವಿ.ಉಮಾಪತಿ, ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ , ಕೆಪಿಸಿಸಿ ಸದಸ್ಯರಾದ ವಿಜಯ್ ಕುಮಾರ್, ಕೆ.ಎಂ. ಅಮೃತೇಶ್ವರಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲ್ಲಟ್ಟಿ ತಿಪ್ಪೇಸ್ವಾಮಿ, ರಮೇಶ್ ಖಾದಿ, ಈರಲಿಂಗೇಗೌಡ , ಜಿ. ಎಸ್.ಮಂಜುನಾಥ್ , ಶಶಿಕಲಾಸುರೇಶ್ ಬಾಬು, ನಾಗೇಂದ್ರನಾಯ್ಕ, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಟಿ. ಚಂದ್ರಶೇಖರ್, ಯತೀಶ್, ಕಂದೀಕೆರೆ ಸುರೇಶ್ ಬಾಬು, ಕಲ್ಲಟ್ಟಿ ಹರೀಶ್, ಕೆ.ರಂಗಸ್ವಾಮಿ, ಶಿವಣ್ಣ, ಮಹಡಿ ಶಿವಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments