ಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಮಾಹಿತಿ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ

by | 13/02/23 | ಆರೋಗ್ಯ

ಚಿತ್ರದುರ್ಗ ಫೆ.13
ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ಫಾಸ್ಟ್ ಟ್ರ್ಯಾಕ್ ಒಪಿಡಿ ರಿಜಿಸ್ಟ್ರೇಷನ್ ಸೌಲಭ್ಯ” ಕಲ್ಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.
ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ ವೀಕ್ಷಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಮತ್ತು ಹೊಳಲ್ಕೆರೆ, ಹೊಸದುರ್ಗ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫಾಸ್ಟ್ ಟ್ರ್ಯಾಕ್ ಒಪಿಡಿ ಕೌಂಟರ್ ತೆರೆಯಲಾಗಿದ್ದು, ಸದ್ಯದಲ್ಲಿಯೇ ಮೊಳಕಾಲ್ಮುರು, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಆರಂಭಿಸಲಾಗುವುದು. ಈ ಸೌಲಭ್ಯದಿಂದ ತುರ್ತಾಗಿ ಒಪಿಡಿ ಚೀಟಿ ಪಡೆಯಬಹುದು ಎಂದು ಹೇಳಿದರು.
ಆಯುμÁ್ಮನ್ ಭಾರತ್ ಡಿಜಿಟಲ್ ಮಿಷನ್ (ಎಬಿಡಿಎಂ) ವತಿಯಿಂದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್‍ಎಚ್‍ಎ) ಇ–ಹಾಸ್ಪಿಟಲ್ ಸಹಯೋಗದಲ್ಲಿ ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ ಕಲ್ಪಿಸಿರುವುದರಿಂದ ಹೊರರೋಗಿ ವಿಭಾಗದಲ್ಲಿ ವೈದ್ಯಕೀಯ ಸೇವೆ ಪಡೆಯಲು ಇನ್ನು ಮುಂದೆ ರೋಗಿಗಳು ಸರದಿಯಲ್ಲಿ ನಿಂತು ನೋಂದಣಿ ಚೀಟಿ ಪಡೆಯುವುದು ತಪ್ಪಲಿದೆ. ಫಾಸ್ಟ್ ಟ್ರ್ಯಾಕ್ ಕೌಂಟರ್‍ನಲ್ಲಿ ಕ್ಯೂಆರ್ ಕೋಡ್ ಅನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ತಕ್ಷಣವೇ ಒಪಿಡಿ ಟೋಕನ್ ನಂಬರ್ ಲಭ್ಯವಾಗಲಿದೆ ಎಂದರು.
ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ನೋಂದಣಿ ಚೀಟಿ ಪಡೆಯುವುದು ಕಡ್ಡಾಯವಾಗಿದ್ದು, ಈ ನೋಂದಣಿ ಚೀಟಿ ಪಡೆಯಲು ರೋಗಿಗಳು ಸರದಿಯಲ್ಲಿ ನಿಲ್ಲಬೇಕಿತ್ತು. ಇದರಿಂದ ತುರ್ತಾಗಿ ವೈದ್ಯರನ್ನು ಕಾಣಲು ಸಾಧ್ಯವಾಗುತ್ತಿರಲಿಲ್ಲ ಜೊತೆಗೆ ನೋಂದಣಿ ಚೀಟಿ ಮಾಡಿಸುವಾಗ ರೋಗಿಯ ಹೆಸರು, ತಂದೆಯ ಹೆಸರು, ಲಿಂಗ, ವಯಸ್ಸು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಹೇಳಿದ ನಂತರ ಹೊರರೋಗಿ ವಿಭಾಗದ ಚೀಟಿಯನ್ನು ಕೊಡುತ್ತಿದ್ದರು. ಈ ಪ್ರಕ್ರಿಯೆಗೆ ಬಹಳಷ್ಟು ಸಮಯ ತೆಗೆದುಕೊಳ್ಳುತ್ತಿತ್ತು. ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ ಕಲ್ಪಿಸಿರುವುದರಿಂದ ತ್ವರಿತವಾಗಿ ಒಪಿಡಿ ಟೋಕನ್ ಪಡೆಯಬಹುದಾಗಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ: ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯದ ಸಾರ್ವಜನಿಕರಿಗೆ ಸಮರ್ಪಕವಾದ ಮಾಹಿತಿ ಇಲ್ಲದ ಕಾರಣ ಇಂದಿಗೂ ಅನೇಕ ಮಂದಿ ಸರದಿಯಲ್ಲಿ ನಿಂತೇ ಒಪಿಡಿ ಚೀಟಿ ಪಡೆಯುತ್ತಿದ್ದಾರೆ. ಸಂಬಂಧಿಸಿದ ಸಿಬ್ಬಂದಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಇದರ ಬಗ್ಗೆ ಮಾಹಿತಿ ಶಿಕ್ಷಣ ನೀಡಲು ಸಾರ್ವಜನಿಕ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಿದರು.
ಇಕಾ ಕೇರ್/ಎಬಿಎಚ್‍ಎ ಆ್ಯಪ್: ‘ಮೊಬೈಲ್‍ನ ಪ್ಲೇ ಸ್ಟೋರ್‍ನಲ್ಲಿ ಇಕಾ ಕೇರ್ (Eka care app) ಅಥವಾ ಎಬಿಎಚ್‍ಎ (ABHA app) ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ನಂತರ ಹೆಸರು, ಜನ್ಮದಿನಾಂಕ, ಲಿಂಗ, ವಿಳಾಸವನ್ನು ನಮೂದಿಸಬೇಕು. ನಂತರ ಎಬಿಎಚ್‍ಎ ಪೆÇ್ರಫೈಲ್ ಸಿದ್ಧವಾಗುತ್ತದೆ. ಅಲ್ಲಿ ಕುಟುಂಬದ ಇತರ ಸದಸ್ಯರ ಹೆಸರು ಮತ್ತು ವಿವರ ನಮೂದಿಸಬಹುದು. ನಂತರ ವೈದ್ಯರಿಗೆ ತೋರಿಸಿಕೊಳ್ಳಬೇಕಾದ ದಿನ ಜಿಲ್ಲಾಸ್ಪತ್ರೆಯ ಫಾಸ್ಟ್ ಟ್ರ್ಯಾಕ್ ಒಪಿಡಿ ಕೌಂಟರ್‍ಗೆ ಬಂದು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ ಸಾಕು, ತಕ್ಷಣವೇ ಟೋಕನ್ ನಂಬರ್ ದೊರೆಯುತ್ತದೆ’ ಎನ್ನುತ್ತಾರೆ ಇ–ಆಸ್ಪತ್ರೆ ಜಿಲ್ಲಾ ಸಂಯೋಜಕ ತಿಪ್ಪೇಸ್ವಾಮಿ.
‘ಕೌಂಟರ್‍ನಲ್ಲಿರುವ ಸಿಬ್ಬಂದಿ ಟೋಕನ್ ನಂಬರ್ ಜೊತೆಗೆ ತೋರಿಸಿಕೊಳ್ಳಬೇಕಾದ ವಿಭಾಗ ಮತ್ತು ವೈದ್ಯರ ಹೆಸರು ನಮೂದಿಸಿ ಚೀಟಿ ಕೊಡುತ್ತಾರೆ. ಕೌಂಟರ್ ಮುಂಭಾಗ ಇರುವ ಪರದೆಯಲ್ಲಿ ರೋಗಿಯ ವಿವರ ಪ್ರದರ್ಶನವಾಗುತ್ತದೆ. ಕೌಂಟರ್‍ನಲ್ಲಿ ಕಂಪ್ಯೂಟರ್, ಪ್ರಿಂಟರ್ ಸೌಲಭ್ಯವಿದೆ’ ಎಂದು ತಿಪ್ಪೇಸ್ವಾಮಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ಇ-ಆಸ್ಪತ್ರೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಚಂದ್ರಶೇಖರ್ ಕಾಂಬ್ಳಿಮಠ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page