ಹಿರಿಯೂರು :
ಮಹಿಳಾ ದಿನಾಚರಣೆಯ ದಿನದಂದು ಸಾಧಕ ಮಹಿಳೆಯರಿಗೆ ಸನ್ಮಾನಿಸಿ, ಗೌರವಿಸಿ, ಹೊಗಳಿ ಮಾತನಾಡಿದರೆ ಸಾಲದು, ವರ್ಷದ ಉಳಿದ ಎಲ್ಲಾ ದಿನಗಳಲ್ಲೂ ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಶೋಷಣೆಯನ್ನು ನಿಲ್ಲುವ ರೀತಿಯಲ್ಲಿ ಸಮಾಜ ಬದಲಾಗಬೇಕು ಎಂಬುದಾಗಿ ಉಪನ್ಯಾಸಕಿ ಶ್ರೀಮತಿ ಗಂಗಮ್ಮ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ತಮ್ಮ ಸಾಮರ್ಥ್ಯವನ್ನು ತೋರಿಸುವ ಮೂಲಕ ಮೇಲುಗೈ ಸಾಧಿಸಿದ್ದು, ಸರ್ಕಾರ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ಕಲ್ಪಿಸುವ ಜೊತೆಗೆ ಮಹಿಳೆಯರಿಗೆ ಉತ್ತಮ ಶಿಕ್ಷಣವನ್ನು ನೀಡುವ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂಬುದಾಗಿ ಹೇಳಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಮಾತನಾಡಿ, ಸಮಾಜದ ಎಲ್ಲಾ ಮಹಿಳೆಯರು ಶಿಕ್ಷಣವಂತರಾಗುವ ಮೂಲಕ ತಮ್ಮ ಮೇಲಾಗುವ ದೌರ್ಜನ್ಯ ಹಾಗೂ ಶೋಷಣೆಗಳನ್ನು ಮೆಟ್ಟಿ ನಿಂತು ಸಮಾಜದ ಮುಖ್ಯವಾಹಿನಿಗೆ ಬರಬೇಕು, ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂತಹ ಕಾರ್ಯಕ್ರಮಗಳು ಮಹಿಳೆಯರಿಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಿವೆ ಎಂಬುದಾಗಿ ಹೇಳಿದರು.
ಶಿಕ್ಷಕ ಉಮೇಶ್ ಯಾದವ್ ಮಾತನಾಡಿ, ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ ಎಂಬಂತೆ ಮಹಿಳೆಯರನ್ನು ಗೌರವಿಸುವ ಸ್ಥಳದಲ್ಲಿ ದೇವತೆಗಳು ನೆಲೆಸುತ್ತಾರೆ, ಎಂದು ಹೇಳಲಾಗುತ್ತದೆ, ದಿನದ 24 ಗಂಟೆಗಳೂ ಸಹ ಸಂಬಳವಿಲ್ಲದೆ, ರಜೆಯಿಲ್ಲದೆ ಕೆಲಸ ನಿರ್ವಹಿಸುವ ಏಕೈಕ ವ್ಯಕ್ತಿ ಎಂದರೆ ಅದು ಗೃಹಿಣಿಯರು ಮಾತ್ರ, ಅಂತಹ ಮಹಿಳೆಯರಿಗೆ ಉತ್ತಮ ಅವಕಾಶಗಳು ಸಿಗಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ಶಿಕ್ಷಕರಾದ ಉಮೇಶ್ ಯಾದವ್, ಶಿವರಾಜ್, ಶಿಕ್ಷಕಿಯರುಗಳಾದ ವಸಂತಾ, ಗಂಗಮ್ಮ, ನಂದಿನಿ, ರಂಜಿತಾ, ಹೇಮಲತಾ, ಸಬೀಹಾ, ಮುಬೀನಾ, ತಿಪ್ಪಮ್ಮ, ಮುಸ್ಕಾನ್, ದಿವ್ಯಾ, ನೇತ್ರಾವತಿ, ಜಯಸುಧಾ, ಖುಷುಬು ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments