ಹಿರಿಯೂರು :
ತಾಲೂಕಿನ ನೀರಾವರಿ ಅಚ್ಚುಕಟ್ಟು ಪ್ರದೇಶಕ್ಕೆ 50 ದಿನಗಳ ಹಿಂದೆ ನೀರನ್ನು ಹರಿಸಲಾಗಿತ್ತು, ಈ ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಮಾವು, ಸಪೋಟ, ರಾಗಿ, ತರಕಾರಿ, ಬೆಳೆಗಳಿಗೆ ಅತಿ ಹೆಚ್ಚು ನೀರು ಬೇಕಾಗಿರುತ್ತದೆ ಎಂಬುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ವಾಣಿವಿಲಾಸ ಜಲಾಶಯದಿಂದ ಅಚ್ಚುಕಟ್ಟು ಭಾಗಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ವಿಶ್ವೇಶ್ವರ ಜಲ ನಿಗಮದ ಸಹಾಯಕ ಕಾರ್ಯ ಪಾಲಕ ಅಭಿಯಂತರ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ನಂತರ ಅವರು ಮಾತನಾಡಿದರು.
ಅಂತರ್ಜಲ ಕುಸಿತದಿಂದ ಗ್ರಾಮೀಣ ಭಾಗದ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಅಭಾವ ಉಂಟಾಗಿದೆ, ಆದ್ದರಿಂದ ತಾವುಗಳು ತುರ್ತಾಗಿ ವಾಣಿವಿಲಾಸ ಜಲಾಶಯದಿಂದ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸಬೇಕು ಎಂಬುದಾಗಿ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆಲೂರು ಸಿದ್ಧರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ರಂಗಸ್ವಾಮಿ, ನಾಗರಾಜಪ್ಪ, ಚಂದ್ರಪ್ಪ, ದೇವೇಂದ್ರಪ್ಪ ,ಕೆಂಚಪ್ಪ, ಇಂಡೀಸ್ ಕಟ್ಟೆ ರಾಜಣ್ಣ, ಸಿದ್ದಪ್ಪ, ಆರ್.ಕೆ.ಗೌಡ್ರು, ಶ್ರೀನಿವಾಸ್ ಸೇರಿದಂತೆ ಅನೇಕ ರೈತಮುಖಂಡರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments