ಹಿರಿಯೂರು:
ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನದಿ ತುಂಬಾ ನೀರು ಹರಿದು ಬರುತ್ತಿದ್ದು ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 3800 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುವ ಮೂಲಕ ಪ್ರಸಕ್ತ ಸಾಲಿನಲ್ಲಿ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ
ವಾಣಿವಿಲಾಸ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದಾದ್ಯಂತ ಉತ್ತಮ ಹದ ಮಳೆಯಾಗಿದ್ದು ಮುಂದೆ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಹರಿಯುವುದನ್ನು ಸ್ಥಗಿತ ಮಾಡಲಾಗಿದೆ. ಹಾಗಾಗಿ ಯಾವುದೇ ನೀರನ್ನು ಡ್ಯಾಂ ನಿಂದ ಹೊರಬಿಡುತ್ತಿಲ್ಲ. ಇಂದಿನ ನೀರಿನ ಮಟ್ಟ 112 ಅಡಿ ಇದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments