ಹಿರಿಯೂರು :
ಈಗಾಗಲೇ ಬೇಸಿಗೆ ಕಾಲ ಆರಂಭವಾಗಿದ್ದು, ತಾಲೂಕಿನ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ದಾಳಿಂಬೆ, ಪಪ್ಪಾಯ, ಬಾಳೆ ನೀರಿಲ್ಲದೆ ಒಣಗುತ್ತಿವೆ, ಆದ್ದರಿಂದ ತಕ್ಷಣ ವಾಣಿವಿಲಾಸ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಎಡ ಮತ್ತು ಬಲ ನಾಲೆಗಳ ಮೂಲಕ ನೀರು ಹರಿಸಬೇಕು ಎಂಬುದಾಗಿ ಜಿಲ್ಲಾ ರೈತಸಂಘದ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದರು.
ನಗರದ ವಿಶ್ವೇಶ್ವರಯ್ಯ ಜಲನಿಗಮದ ಉಪವಿಭಾಗದ ಕಚೇರಿ ಮುಂಭಾಗದಲ್ಲಿ ಮಂಗಳವಾರದಂದು ವಾಣಿವಿಲಾಸ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಎಡ ಮತ್ತು ಬಲ ನಾಲೆಗಳ ಮೂಲಕ ನೀರು ಹರಿಸಬೇಕೆಂದು ಒತ್ತಾಯಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷರಾದ ಬ್ಯಾಡರಹಳ್ಳಿ ಶಿವಕುಮಾರ್, ರೈತ ಮುಖಂಡರುಗಳಾದ ಆರ್.ಚೇತನ್, ತಿಪ್ಪೇಸ್ವಾಮಿ, ಗಿರೀಶ್, ಅನ್ಸರ್ ಅಲಿ, ಲಕ್ಷ್ಮೀಕಾಂತ್, ಕೆ.ಸೋಮಸುಂದರಂ, ಹನುಮಂತರಾಯಪ್ಪ, ಕಲ್ಪನಾ, ಮಂಜುಳಾ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments