ಚಳ್ಳಕೆರೆ ಜ.23.ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕೆಂದು ಡಿವೈಎಸ್ಪಿ ರಾಜಣ್ಣ ಹೇಳಿದರು. ನಗರದ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ನಗರದ ವಿವಿಧ ರಸ್ತೆಗಳಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಾಥಾದಲ್ಲಿ ಶಿಸ್ತುಬದ್ಧವಾಗಿ ಬೈಕ್ನಲ್ಲಿ ಹೆಲ್ಮೆಟ್ ಧರಿಸಿ ಜನರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆಯಿತು.
ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚೆ ಅಪಘಾತದಲ್ಲಿ ಹೆಲ್ಮೆಟ್ ಇಲ್ಲದೆಯೇ ಬೈಕ್ ಸವಾರರು ಸಾವು-ನೋವು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಕಾರು ಚಾಲನೆ ಮಾಡುವಾಗ ಸೀಟು ಬೆಲ್ಟ್ ಧರಿಸದೇ ವಾಹನ ಚಲಾಯಿಸಿದ್ದಕ್ಕೆ ಹಲವು ಅಪಘಾತಗಳು ನಡೆದಿವೆ. ಈ ಬಗ್ಗೆ ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಪಿ ಐ ದೇಸಾಯಿ ಮಾತನಾಡಿ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘನೆ ನಿಯಮ ಪಾಲನೆ ಮಾಡದಿದ್ದರೆ ದಂಡದ ವಿಧಿಸಲಾಗುವುದು ಎಂದು ತಿಳಿಸಿದರು. ಬೈಕ್ ಜಾಥ ಕಾರ್ಯಕ್ರಮದಲ್ಲಿ ಪಿಎಸ್ ಐ ಗಳಾದ ಸತೀಶ್ ನಾಯ್ಕ.ಶಿವರಾಜ್. ಧರೆಪ್ಪ ಪೋಲಿಸ್ ಇಲಾಖೆ ಸಿಬ್ಬಂದಿಗಳಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments