ಚಿತ್ರದುರ್ಗ ಮಾ. 13 :
ವಿಕಲಚೇತನರು ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡು, ಅವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಮಾಜಿ ಆಯುಕ್ತ ಹಾಗೂ ನರೇಂದ್ರ ಫೌಂಡೇಷನ್ನ ಅಧ್ಯಕ್ಷ ಕೆ.ವಿ ರಾಜಣ್ಣ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ನರೇದ್ರ ಫೌಂಡೇಶನ್, ಕೇರರ್ಸ್ ವಲ್ರ್ಡ್ವೈಡ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪುನಶ್ಚೇತನ ಕಾರ್ಯಕರ್ತರಿಗೆ “ವಿಕಲಚೇತನರ ಮತ್ತು ಆರೈಕೆದಾರರ ಸಮಗ್ರ ಪುನಶ್ವೇತನ” ದ ಬಗ್ಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರ ಪೋಷಕರು ವಿಕಲಚೇತನರಿಗೆ ಮಾದರಿಯಾಗಬೇಕು ಮತ್ತು ಆತ್ಮವಿಶ್ವಾಸ ವೃದ್ದಿಗೆ ವಿವಿಧ ರೀತಿಯ ಸಲಹೆಗಳನ್ನು ಅವರಿಗೆ ಕೊಡಬೇಕು. ವಿಕಲಚೇತನರಿಗೆ ಸರ್ಕಾರದಿಂದ ವಿವಿಧ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ವಿಕಲಚೇತನರು ಅಧ್ಯಯನದಲ್ಲಿ ವಿಜ್ಞಾನ ಮತ್ತು ಗಣಿತದ ಕಡೆ ಹೆಚ್ಚಿನ ಒಲವು ತೋರಿಸಿದಲ್ಲಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಅಲ್ಲದೆ ವಿಕಲಚೇತನರು ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳÀ್ಳಬೇಕು, ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣವನ್ನು ತಪ್ಪದೆ ಪಡೆದುಕೊಳ್ಳಬೇಕು, ತಮ್ಮ ಹಕ್ಕುಗಳನ್ನು ಪ್ರಬಲವಾಗಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೆ.ವಿ. ರಾಜಣ್ಣ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ವಿಕಲಚೇತನರ ಪುನಶ್ಚೇತನ ಮತ್ತು ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಅಂಗವಿಕಲತೆವಾರು ಒಂದು ಪಟ್ಟಿಯನ್ನು ಸಿದ್ದಪಡಿಸಿಕೊಂಡು ಯಾವ ವಿಕಲಚೇತನರಿಗೆ ಯಾವ ಸೌಲಭ್ಯ ನೀಡಬೇಕು ಅವರ ಅಗತ್ಯತೆ ಬಗ್ಗೆ ಮಾಹಿತಿ ಪಡೆದು, ಅದರಂತೆ ಕಾರ್ಯ ನಿರ್ವಹಿಸಬೆಕು, ಶಿಕ್ಷಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ, ಅವರು ಮುಖ್ಯವಾಹಿನಿಗೆ ಬರುವಂತೆ ಮಾಡಬೇಕು. ಇಲಾಖೆ ವತಿಯಿಂದ ಸೌಲಭ್ಯಗಳನ್ನು ಪಡೆದುಕೊಂಡ ವಿಕಲಚೇತನ ಫಲಾನುಭವಿಗಳ ಪಟ್ಟಿಯನ್ನು ಮಾಡಿಕೊಂಡಿರಬೇಕು. ಮತದಾನ ನಮ್ಮ ಹಕ್ಕು ಆಗಿರುವುದರಿಂದ ವಿಕಲಚೇತನರು ಚುನಾವಣೆ ಸಂದರ್ಭದಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ವಿಕಲಚೇತನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ನಟೇಶ ವಿಶೇಷ ಉಪನ್ಯಾಸ ನೀಡಿ, ವಿಕಲಚೇತನರನ್ನು ಯಾರು ಪೋಷಣೆ ಮಾಡುತ್ತಾರೋ ಅವರೇ ಆರೈಕೆದಾರರು, ಆರೈಕೆದಾರರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸರ್ಕಾರದಿಂದ ಅವರನ್ನು ಗುರುತಿಸಿ ಅವರಿಗೆ ಬೆಂಬಲ ನೀಡಬೇಕು ಹಾಗೂ ಆರೋಗ್ಯದ ಸೇವೆ ಒದಗಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ನರೇಂದ್ರ ಫೌಂಡೇಶನ್ ನ ಕಾರ್ಯಕ್ರಮ ಸಂಯೋಜಕ ಕೆ.ಎನ್. ಸುದೀಂದ್ರ ಕುಮಾರ್ ಉಪಸ್ಥಿತರಿದ್ದರು. ನರಸಿಂಹಮೂರ್ತಿ ಸ್ವಾಗತಿಸಿದರು, ಜಿ.ಹರಿಪ್ರಸಾದ್ ನಿರೂಪಿಸಿದರು. ಮೈಲಾರಪ್ಪ ವಂದಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments