ವಿಕಲಚೇತನರು ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು- ಕೆ.ವಿ. ರಾಜಣ್ಣ

by | 13/03/23 | ಆರೋಗ್ಯ

ಚಿತ್ರದುರ್ಗ ಮಾ. 13 :
ವಿಕಲಚೇತನರು ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡು, ಅವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಮಾಜಿ ಆಯುಕ್ತ ಹಾಗೂ ನರೇಂದ್ರ ಫೌಂಡೇಷನ್‍ನ ಅಧ್ಯಕ್ಷ ಕೆ.ವಿ ರಾಜಣ್ಣ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ನರೇದ್ರ ಫೌಂಡೇಶನ್, ಕೇರರ್ಸ್ ವಲ್ರ್ಡ್‍ವೈಡ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪುನಶ್ಚೇತನ ಕಾರ್ಯಕರ್ತರಿಗೆ “ವಿಕಲಚೇತನರ ಮತ್ತು ಆರೈಕೆದಾರರ ಸಮಗ್ರ ಪುನಶ್ವೇತನ” ದ ಬಗ್ಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರ ಪೋಷಕರು ವಿಕಲಚೇತನರಿಗೆ ಮಾದರಿಯಾಗಬೇಕು ಮತ್ತು ಆತ್ಮವಿಶ್ವಾಸ ವೃದ್ದಿಗೆ ವಿವಿಧ ರೀತಿಯ ಸಲಹೆಗಳನ್ನು ಅವರಿಗೆ ಕೊಡಬೇಕು. ವಿಕಲಚೇತನರಿಗೆ ಸರ್ಕಾರದಿಂದ ವಿವಿಧ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ವಿಕಲಚೇತನರು ಅಧ್ಯಯನದಲ್ಲಿ ವಿಜ್ಞಾನ ಮತ್ತು ಗಣಿತದ ಕಡೆ ಹೆಚ್ಚಿನ ಒಲವು ತೋರಿಸಿದಲ್ಲಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಅಲ್ಲದೆ ವಿಕಲಚೇತನರು ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳÀ್ಳಬೇಕು, ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣವನ್ನು ತಪ್ಪದೆ ಪಡೆದುಕೊಳ್ಳಬೇಕು, ತಮ್ಮ ಹಕ್ಕುಗಳನ್ನು ಪ್ರಬಲವಾಗಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೆ.ವಿ. ರಾಜಣ್ಣ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ವಿಕಲಚೇತನರ ಪುನಶ್ಚೇತನ ಮತ್ತು ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಅಂಗವಿಕಲತೆವಾರು ಒಂದು ಪಟ್ಟಿಯನ್ನು ಸಿದ್ದಪಡಿಸಿಕೊಂಡು ಯಾವ ವಿಕಲಚೇತನರಿಗೆ ಯಾವ ಸೌಲಭ್ಯ ನೀಡಬೇಕು ಅವರ ಅಗತ್ಯತೆ ಬಗ್ಗೆ ಮಾಹಿತಿ ಪಡೆದು, ಅದರಂತೆ ಕಾರ್ಯ ನಿರ್ವಹಿಸಬೆಕು, ಶಿಕ್ಷಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ, ಅವರು ಮುಖ್ಯವಾಹಿನಿಗೆ ಬರುವಂತೆ ಮಾಡಬೇಕು. ಇಲಾಖೆ ವತಿಯಿಂದ ಸೌಲಭ್ಯಗಳನ್ನು ಪಡೆದುಕೊಂಡ ವಿಕಲಚೇತನ ಫಲಾನುಭವಿಗಳ ಪಟ್ಟಿಯನ್ನು ಮಾಡಿಕೊಂಡಿರಬೇಕು. ಮತದಾನ ನಮ್ಮ ಹಕ್ಕು ಆಗಿರುವುದರಿಂದ ವಿಕಲಚೇತನರು ಚುನಾವಣೆ ಸಂದರ್ಭದಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ವಿಕಲಚೇತನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ನಟೇಶ ವಿಶೇಷ ಉಪನ್ಯಾಸ ನೀಡಿ, ವಿಕಲಚೇತನರನ್ನು ಯಾರು ಪೋಷಣೆ ಮಾಡುತ್ತಾರೋ ಅವರೇ ಆರೈಕೆದಾರರು, ಆರೈಕೆದಾರರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸರ್ಕಾರದಿಂದ ಅವರನ್ನು ಗುರುತಿಸಿ ಅವರಿಗೆ ಬೆಂಬಲ ನೀಡಬೇಕು ಹಾಗೂ ಆರೋಗ್ಯದ ಸೇವೆ ಒದಗಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ನರೇಂದ್ರ ಫೌಂಡೇಶನ್ ನ ಕಾರ್ಯಕ್ರಮ ಸಂಯೋಜಕ ಕೆ.ಎನ್. ಸುದೀಂದ್ರ ಕುಮಾರ್ ಉಪಸ್ಥಿತರಿದ್ದರು. ನರಸಿಂಹಮೂರ್ತಿ ಸ್ವಾಗತಿಸಿದರು, ಜಿ.ಹರಿಪ್ರಸಾದ್ ನಿರೂಪಿಸಿದರು. ಮೈಲಾರಪ್ಪ ವಂದಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page