ಚಳ್ಳಕೆರೆ ಡಿ.16
ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಜನಪರ ಕಾರ್ಯಕ್ರಮ ಇದಾಗಿದ್ದು, ದೇಶದ ಎಲ್ಲಾ ನಾಗರೀಕರಿಗೂ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮಹತ್ವವನ್ನು ಜನರಿಗೆ ತಿಳಿಸುವುದೇ ಈ ಕಾರ್ಯಕ್ರಮದ ಮೂಲಉದ್ದೇಶವಾಗಿದೆ ಎಂಬುದಾಗಿ ಆರ್ಥಿಕ ಸಾಕ್ಷರತಾ ಸಂಯೋಜಕರಾದ ಎಸ್.ಕೆ.ಮಧುಸೂದನ್ ಹೇಳಿದರು.
ತಾಲ್ಲೂಕಿನ ಗೋಪನಹಳ್ಳಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ದೇಶದ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನಜಾಗೃತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅನುವು ಮಾಡಿಕೊಡಲಾಯಿತು. ಇದೇ ವೇಳೆ ಗ್ರಾಮಸ್ಥರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆದೇಶ ಪ್ರತಿಪತ್ರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಬಾರ್ಡ್ ವಿಭಾಗೀಯ ವ್ಯವಸ್ಥಾಪರಾದ ಕವಿತಾ ಶಶಿಧರ್, ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಾದ ಸುಧಾ, ಐಸಿಐಸಿಐ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕರುಗಳು,ಸೇರಿದಂತೆ ಅನೇಕ ಗಣ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.
![](https://janadhwani.in/wp-content/uploads/2023/12/IMG-20231216-WA0268.jpg)
![](https://janadhwani.in/wp-content/uploads/2023/12/IMG-20231216-WA02151.jpg)
0 Comments