ವಿಜೃಂಭಣೆಯಿಂದ ಬೋಸೆದೇವರಹಟ್ಟಿ ಗ್ರಾಮಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆಡದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ.

by | 13/03/24 | ಸುದ್ದಿ

*


ನಾಯಕನಹಟ್ಟಿ: : ಮಾ.12. ಸಮೀಪದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದಲ್ಲಿ ಮಂಗಳವಾರ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

ಮಂಗಳವಾರ ಗ್ರಾಮಸ್ಥರು ರಥೋತ್ಸವದ ಪ್ರಯುಕ್ತ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳ ನೆರವೇರಿಸಲಾಯಿತು.

ಬೆಳಗ್ಗೆ ಕಳಸ ಪೂಜೆ ನೆರವೇರಿಸಿದ ಭಕ್ತರು ಧ್ವಜ ಹಾಗೂ ನಾನಾ ಬಣ್ಣಗಳ ಹೂಗಳಿಂದ ರಥವನ್ನು ವಿಶೇಷವಾಗಿ ಅಲಂಕರಿಸಿದ್ದರು.


ಗ್ರಾಮದ ಯಜಮಾನ ಬೋರಯ್ಯ ರವರ ಮನೆಯಿಂದ ರಥೋತ್ಸವಕ್ಕೆ ಬಲಿ ಅನ್ನ ತರಲಾಯಿತು ಕಾಸು ಮೀಸಲು ಮೊಸರು ತುಂಬಾ ಜಿನಿಗೆ ಹಾಲು ತಂದು ಶ್ರೀ ವೀರಾಂಜನೇಯ ಸ್ವಾಮಿ ರಥಕ್ಕೆ ಎಡೆ ಹಾಕಲಾಯಿತು.

ಇನ್ನೂ ರಥೋತ್ಸವಕ್ಕ ಮುನ್ನ ಮುಕ್ತಿ ಬಾವುಟ ಹಾರಾಜು ಪ್ರಕ್ರಿಯೆ ನಡೆಯಿತು.
ಮುಕ್ತಿ ಬಾವುಟವನ್ನು ಗ್ರಾಮದ ಯುವ ಮುಖಂಡ ಬಿ.ಒ. ಮಂಜುನಾಥ್ 34. ಸಾವಿರ ರೂ.ಗಳಿಗೆ ಮುಕ್ತಿ ಬಾವುಟವನ್ನು ಪಡೆದುಕೊಂಡಿರು.
ನಂತರ ಮಹಾ ಮಂಗಳಾರತಿ ಮಾಡಿ ಗ್ರಾಮಸ್ಥರು ರಥೋತ್ಸವಕ್ಕೆ
ಚಾಲನೆಯನ್ನು ನೀಡಿದರು.


ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದ ರಥೋತ್ಸವದಲ್ಲಿ ನೂರಾರು ಸಂಖ್ಯೆಯಲ್ಲಿನ ಭಕ್ತರು ಭಾಗವಹಿಸಿ ಭಕ್ತಿಯನ್ನು ಸಂಪರ್ಕಿಸಿದ್ದರು.

ರಥ ಸಂಚರಿಸುವ ದಾರಿ ಯುದ್ಧಕ್ಕೂ ಭಕ್ತರು ಬಾಳೆಹಣ್ಣು ಮಂಡಕ್ಕಿ ಎರಚುತ್ತಿದ್ದರು. ರಥೋತ್ಸವದಲ್ಲಿ ಡೊಳ್ಳು ಹಾಗೂ ನಂದಿಕೋಲು ಕುಣಿತ ಗಮನ ಸೆಳೆದವು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿನ್ನಬೋಸಯ್ಯ, ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ಹೋಬಳಿ ಅಧ್ಯಕ್ಷ ಜಿ. ಬಿ. ಮುದಿಯಪ್ಪ. ಪಟ್ಟಣ ಪಂಚಾಯತಿ ಸದಸ್ಯ ಡಿ. ಓಬಯ್ಯ ದಾಸ್, ವೈ.ಓ ಮಂಜು (ಗೂಳಿ), ಎಸ್ ಟಿ ಬಸವರಾಜ್, ಎನ್ ಬಿ ಹಳ್ಳಿ ಮೇಷ್ಟ್ರು, ವೈ ಬಿ ಯಾರ್ರಿಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಎಸ್ ಪಿ ನಾಗರಾಜ್, ಡಿ ಬಿ ಬೋರಯ್ಯ, ಸೇರಿದಂತೆ ಬೋಸದೇವರಹಟ್ಟಿ ಸಮಸ್ತ ಊರಿನ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page