ವಿಠಲನಗರದಲ್ಲಿ ಕಳ್ಳತನ ಯತ್ನ ವಿಫಲ- ಪೋಲಿಸ್ ಅಧಿಕಾರಿಗಳು ಭೇಟಿ ಪರಿಶೀಲನೆ.

by | 16/05/24 | ಕ್ರೈಂ


ಚಳ್ಳಕೆರೆ ಮೇ.16 ನಗರದಲ್ಲಿ ಸರಣಿ ಕಳ್ಳತನ
ನಗರದ ಜನತೆಯ ನಿದ್ದೆ ಕೆಡಿಸುವಂತೆ ಮಾಡಿದೆ. ಹೌದು ಇದು ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯಲ್ಲಿ ಮನೆಗಳ್ಳತನ ಪ್ರಕರಣ ಮಾಸುವ ಮುನ್ನವೇ ವಿಠಲನಗರದ ಗ್ರಾಮಲೆಕ್ಕಾಧಿಕಾರಿ ಹರೀಶ್ ಮನೆಗೆ ಗುರುವಾರ ಬೆಳಗಿನ ಜಾಬ 2 ಗಂಟೆ ಸುಮಾರಿನಲ್ಲಿ ಗೇಟ್ ಬೀಗ ಮುರಿದು ಒಳ ನುಗ್ಗಿದ್ದಾರೆ ಗೇಟ್ ಶಬ್ದವಾದ ತಕ್ಷಣ ಎಚ್ಚರಗೊಂಡು ಕೂಗಿದ ತಕ್ಷಣ ಕಳ್ಳರು ಓಡಿ ಹೋಗಿದ್ದಾರೆ ಅಕ್ಕಪಕ್ಕದವರ ಸಮಯ ಪ್ರಜ್ಞೆಯಿಂದ ಕಳ್ಳತನ ತಪ್ಪಿದಂತಾಗಿದೆ. ಇತ್ತೀಚೆಗೆ ನಗರದಲ್ಲಿ ಆಸ್ಪತ್ರೆ. ಬಸ್ ನಿಲ್ದಾಣ. ಸಾರಿಗೆ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆ ನಿಲ್ಲಿಸಿದ್ದ ಬೈಕ್ ಕಳ್ಳತನ.ಮೊಬೈಲ್ ಕಳ್ಳತನಗಳ ಹಾವಳಿ ಹೆಚ್ಚಾಗಿದ್ದು ನಾಗರೀಕರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ನಗರದ ನೆಹರು ವೃತ್ತ. ಪೋಲಿಸ್ ಠಾಣೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿ ಕ್ಯಾಮರಗಳ ನಿರ್ವಹಣೆ ಇಲ್ಲದೆ ಸಿಸಿ ಕ್ಯಾಮರಗಳು ಕಣ್ಣು ಮುಚ್ಚಿಕೊಂಡಿರುವುದರಿಂದ ಕಳ್ಳತನ ಮಾಡಿದರೂ ಯಾರಿಗೂ ಗೊತ್ತಾಗಲ್ಲ ಅಂತ ಕಳ್ಳರು ಕಳ್ಳತನ ಕೆಲಸವನ್ನ ಮುಂದುವರಿಸಿದ್ದಾರೆ.
ನಗರಸಭೆವತಿಂದ ನೆಹರು ವೃತ್ತ. ಸೇರಿದಂತೆ ವಿವಿಧ ಕಡೆ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿತ್ತು.. ಇದೆ ಸಿಸಿಟಿವಿಗಳಿಂದ ಸಾಕಷ್ಟು ಅಪರಾಧ ಪ್ರಕರಗಳು ತಡೆಗಟ್ಟಲು ಪೊಲೀಸರಿಗೆ ಅನುಕೂಲ ಆಗ್ತಾಯಿತ್ತು.. ಕಳ್ಳರನ್ನ ಕ್ಷಣಾರ್ಧದಲ್ಲೇ ಲಾಕ್ ಮಾಡಲಾಗುತ್ತಿತ್ತು.. ಆದ್ರೆ ಸಿಸಿ ಕ್ಯಾಮರಗಳ ನಿರ್ವಹಣೆ ಮಾಡದೆ ನಿರ್ಲಕ್ಷ್ಯಕ್ಕೆ ಒಳಗಾಗಿ ಲಕ್ಷಾಂತರ ರೂ. ಮೌಲ್ಯದ ಸಿಸಿಟಿವಿ ಕ್ಯಾಮರಗಳು ಬಂದ್ ಆಗಿ ಸುಮಾರು ಹತ್ತು ವರ್ಷಗಳು ಕಳೆದರೂ ದುರಸ್ಥಿ ಮಾಡಿಸಲು ಮುಂದಾಗದೆ ಇರುವುದು ವಿಪರ್ಯಾಸವಾಗಿದೆ.
ಪರಶುರಾಂಪು ಹೋಬಳಿ ಕೇಂದ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಸಿ ಸಿ ಕ್ಯಾಮರ ಅಳವಡಿಸಲಾಗಿದ್ದು ನಗರದಲ್ಲಿ ಅಳವಡಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಕಾಡುತ್ತಿದೆ. ಈಗಲಾದರೂ ಚಳ್ಳಕೆರೆ ನಗರದಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಿ ಸಿ ಕ್ಯಾಮರ ಅಳವಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page