ಹಿರಿಯೂರು :
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಆರೋಗ್ಯಕರವಾದ ವಾತಾವರಣವನ್ನು ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗುತ್ತದೆ ಎಂಬುದಾಗಿ ಬೆಂಗಳೂರು ಮಹಾಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಫಾದರ್ ಫ್ರಾನ್ಸಿಸ್ ಹೇಳಿದರು.
ನಗರದ ಅಸಂಶನ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉತ್ತಮ ಶಾಲಾಪರಿಸರ, ಉತ್ತಮ ಶಿಕ್ಷಕರು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಅಸಂಶನ್ ಶಿಕ್ಷಣ ಸಂಸ್ಥೆಯಂತಹ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವುದು ನಿಜಕ್ಕೂ ನಿಮ್ಮ ಅದೃಷ್ಟವಾಗಿದ್ದು, ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಕೊಡಿಸುತ್ತಿರುವ ನಿಮ್ಮ ಪೋಷಕರಿಗೆ ಮಕ್ಕಳೇ ನೀವು ಧನ್ಯವಾದಗಳನ್ನು ಹೇಳಬೇಕು ಎಂಬುದಾಗಿ ಅವರು ಹೇಳಿದರು.
ವಿದ್ಯಾರ್ಥಿ ಜೀವನದ ಸಮಯ ಅತ್ಯಂತ ಅಮೂಲ್ಯವಾದ ಸಮಯವಾಗಿದ್ದು, ಈ ಸಮಯವನ್ನು ವ್ಯರ್ಥ ಮಾಡದೇ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಭ್ಯಾಸ ಮಾಡುವ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಮುಂದಾಗಬೇಕು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಂದ ಮಾರ್ಗದರ್ಶನ ಪಡೆದು ಸಾಧನೆಯತ್ತ ಸಾಗಬೇಕು ಎಂದರಲ್ಲದೆ,
ಶಿಕ್ಷಣಸಂಸ್ಥೆಯಲ್ಲಿ ಮಕ್ಕಳಿಗೆ ಬೋಧಿಸುವ ಶಿಕ್ಷಕರು ಮೂರು ಮುಖ್ಯ ವಿಚಾರಗಳನ್ನು ನೆನಪಿನಲ್ಲಿಡಬೇಕು, ಶಿಕ್ಷಕರು ತಾವು ಬೋಧಿಸುತ್ತಿರುವ ಶಾಲೆ, ಬೋಧಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಬೋಧಿಸುವ ವಿಷಯವನ್ನು ಪ್ರೀತಿಸುವ ಮೂಲಕ ವಿದ್ಯಾರ್ಥಿ ಕೇಂದ್ರಿತವಾದ ಬೋಧನೆಯನ್ನು ಮಾಡಿ, ಶಿಕ್ಷಣಸಂಸ್ಥೆಯ ಹೆಸರನ್ನು ಿನ್ನು ಎತ್ತರಕ್ಕೆ ಬೆಳೆಸಬೇಕಿದೆ ಎಂಬುದಾಗಿ ಹೇಳಿದರು.
ಎಂಸಿಇಎಸ್ ಶಿವಮೊಗ್ಗ ಕೇಂದ್ರದ ಶಿಕ್ಷಣ ಕಾರ್ಯದರ್ಶಿಗಳಾದ ಫಾದರ್ ವೀರೇಶ್ ವಿ ಮೊರಾಸ್ ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ನೀಡುವ ಗುಣಮಟ್ಟದ ಶಿಕ್ಷಣ ಈ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಮೌಲ್ಯದ ಬದುಕನ್ನು ಬಾಳಲು ಶಿಕ್ಷಣವೇ ನಮಗೆ ದಾರಿದೀಪವಾಗಿದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ನಾಗೇಂದ್ರ ನಾಯ್ಕ್, ತಾಲ್ಲೂಕು ಪತ್ರಕರ್ತರಸಂಘದ ಅಧ್ಯಕ್ಷರಾದ ಆಲೂರುಹನುಮಂತರಾಯಪ್ಪ, ನಗರಸಭೆ ಸದಸ್ಯೆ ಮೊದಲಮೇರಿ, ಸಂತ ಅನ್ನಮ್ಮ ಕಾಂನ್ವೆಂಟ್ ಶಾಲೆಯ ಸುಪೀರಿಯರ್ ಗಳಾದ ಸಿಸ್ಟರ್ ಎಲ್ಸಮ್ಮ, ಸಿಸ್ಟರ್ ಮೆಟ್ಟಿ, ಇವರುಗಳನ್ನು ಅಸಂಶನ್ ಶಿಕ್ಷಣಸಂಸ್ಥೆ ವತಿಯಿಂದ ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಮಹಾಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಫಾದರ್ ಫ್ರಾನ್ಸಿಸ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಸಿಇಎಸ್ ಶಿವಮೊಗ್ಗ ಕೇಂದ್ರ ಶಿಕ್ಷಣ ಕಾರ್ಯದರ್ಶಿ ಫಾದರ್ ವೀರೇಶ್ ವಿ ಮೊರಾಸ್, ಅಸಂಶನ್ ಶಿಕ್ಷಣಸಂಸ್ಥೆಯ ವ್ಯವಸ್ಥಾಪಕರಾದ ಫಾದರ್ ಫ್ರಾಂಕ್ಲಿನ್ ಡಿಸೋಜ ಮತ್ತು ಅಸಂಶನ್ ಇಂಗ್ಲೀಷ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾ ಯರಾದ ಫಾದರ್ ನೆಲ್ಸನ್ ಡಿಸೋಜಾ, ಕನ್ನಡ ಪ್ರೌಢಶಾಲೆ ಮುಖ್ಯೋಪಾಧ್ಯಾ ಯರಾದ ಹೆನ್ರಿ ಕ್ರಾಸ್, ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾ ಯಿನಿ ಸಿಸ್ಟರ್ ಮಾರ್ತಾ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾ ಯರಾದ ಸಿಸ್ಟರ್ ವೆರೋನಿಕಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಆರಂಭದಲ್ಲಿ ಫಾದರ್ ಫ್ರಾಂಕ್ಲಿನ್ ಡಿಸೋಜ ಎಲ್ಲರನ್ನು ಸ್ವಾಗತಿಸಿದರು. ಕೊನೆಯಲ್ಲಿ ಶಿಕ್ಷಕ ಜನಾರ್ಧನ್ ವಂದಿಸಿದರು. ಶಿಕ್ಷಕರಾದ ಮೈಲು ಸ್ವಾಮಿ, ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments