ವಿದ್ಯಾರ್ಥಿಗಳಿಗೆ ಗುಣಮಟ್ಟದಶಿಕ್ಷಣದ ಜೊತೆಗೆಮನೆಯಲ್ಲಿ ಆರೋಗ್ಯಕರವಾದವಾತಾವರಣವನ್ನು ಕಲ್ಪಿಸಿಕೊಡಬೇಕು ಬೆಂಗಳೂರುಧರ್ಮಕ್ಷೇತ್ರದಗುರುಶ್ರೇಷ್ಠ ಫಾದರ್ ಫ್ರಾನ್ಸಿಸ್

by | 29/11/23 | ಸುದ್ದಿ


ಹಿರಿಯೂರು :
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಆರೋಗ್ಯಕರವಾದ ವಾತಾವರಣವನ್ನು ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗುತ್ತದೆ ಎಂಬುದಾಗಿ ಬೆಂಗಳೂರು ಮಹಾಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಫಾದರ್ ಫ್ರಾನ್ಸಿಸ್ ಹೇಳಿದರು.
ನಗರದ ಅಸಂಶನ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉತ್ತಮ ಶಾಲಾಪರಿಸರ, ಉತ್ತಮ ಶಿಕ್ಷಕರು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಅಸಂಶನ್ ಶಿಕ್ಷಣ ಸಂಸ್ಥೆಯಂತಹ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವುದು ನಿಜಕ್ಕೂ ನಿಮ್ಮ ಅದೃಷ್ಟವಾಗಿದ್ದು, ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಕೊಡಿಸುತ್ತಿರುವ ನಿಮ್ಮ ಪೋಷಕರಿಗೆ ಮಕ್ಕಳೇ ನೀವು ಧನ್ಯವಾದಗಳನ್ನು ಹೇಳಬೇಕು ಎಂಬುದಾಗಿ ಅವರು ಹೇಳಿದರು.
ವಿದ್ಯಾರ್ಥಿ ಜೀವನದ ಸಮಯ ಅತ್ಯಂತ ಅಮೂಲ್ಯವಾದ ಸಮಯವಾಗಿದ್ದು, ಈ ಸಮಯವನ್ನು ವ್ಯರ್ಥ ಮಾಡದೇ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಭ್ಯಾಸ ಮಾಡುವ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಮುಂದಾಗಬೇಕು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಂದ ಮಾರ್ಗದರ್ಶನ ಪಡೆದು ಸಾಧನೆಯತ್ತ ಸಾಗಬೇಕು ಎಂದರಲ್ಲದೆ,
ಶಿಕ್ಷಣಸಂಸ್ಥೆಯಲ್ಲಿ ಮಕ್ಕಳಿಗೆ ಬೋಧಿಸುವ ಶಿಕ್ಷಕರು ಮೂರು ಮುಖ್ಯ ವಿಚಾರಗಳನ್ನು ನೆನಪಿನಲ್ಲಿಡಬೇಕು, ಶಿಕ್ಷಕರು ತಾವು ಬೋಧಿಸುತ್ತಿರುವ ಶಾಲೆ, ಬೋಧಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಬೋಧಿಸುವ ವಿಷಯವನ್ನು ಪ್ರೀತಿಸುವ ಮೂಲಕ ವಿದ್ಯಾರ್ಥಿ ಕೇಂದ್ರಿತವಾದ ಬೋಧನೆಯನ್ನು ಮಾಡಿ, ಶಿಕ್ಷಣಸಂಸ್ಥೆಯ ಹೆಸರನ್ನು ಿನ್ನು ಎತ್ತರಕ್ಕೆ ಬೆಳೆಸಬೇಕಿದೆ ಎಂಬುದಾಗಿ ಹೇಳಿದರು.
ಎಂಸಿಇಎಸ್ ಶಿವಮೊಗ್ಗ ಕೇಂದ್ರದ ಶಿಕ್ಷಣ ಕಾರ್ಯದರ್ಶಿಗಳಾದ ಫಾದರ್ ವೀರೇಶ್ ವಿ ಮೊರಾಸ್ ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ನೀಡುವ ಗುಣಮಟ್ಟದ ಶಿಕ್ಷಣ ಈ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಮೌಲ್ಯದ ಬದುಕನ್ನು ಬಾಳಲು ಶಿಕ್ಷಣವೇ ನಮಗೆ ದಾರಿದೀಪವಾಗಿದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ನಾಗೇಂದ್ರ ನಾಯ್ಕ್, ತಾಲ್ಲೂಕು ಪತ್ರಕರ್ತರಸಂಘದ ಅಧ್ಯಕ್ಷರಾದ ಆಲೂರುಹನುಮಂತರಾಯಪ್ಪ, ನಗರಸಭೆ ಸದಸ್ಯೆ ಮೊದಲಮೇರಿ, ಸಂತ ಅನ್ನಮ್ಮ ಕಾಂನ್ವೆಂಟ್ ಶಾಲೆಯ ಸುಪೀರಿಯರ್ ಗಳಾದ ಸಿಸ್ಟರ್ ಎಲ್ಸಮ್ಮ, ಸಿಸ್ಟರ್ ಮೆಟ್ಟಿ, ಇವರುಗಳನ್ನು ಅಸಂಶನ್ ಶಿಕ್ಷಣಸಂಸ್ಥೆ ವತಿಯಿಂದ ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಮಹಾಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಫಾದರ್ ಫ್ರಾನ್ಸಿಸ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಸಿಇಎಸ್ ಶಿವಮೊಗ್ಗ ಕೇಂದ್ರ ಶಿಕ್ಷಣ ಕಾರ್ಯದರ್ಶಿ ಫಾದರ್ ವೀರೇಶ್ ವಿ ಮೊರಾಸ್, ಅಸಂಶನ್ ಶಿಕ್ಷಣಸಂಸ್ಥೆಯ ವ್ಯವಸ್ಥಾಪಕರಾದ ಫಾದರ್ ಫ್ರಾಂಕ್ಲಿನ್ ಡಿಸೋಜ ಮತ್ತು ಅಸಂಶನ್ ಇಂಗ್ಲೀಷ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾ ಯರಾದ ಫಾದರ್ ನೆಲ್ಸನ್ ಡಿಸೋಜಾ, ಕನ್ನಡ ಪ್ರೌಢಶಾಲೆ ಮುಖ್ಯೋಪಾಧ್ಯಾ ಯರಾದ ಹೆನ್ರಿ ಕ್ರಾಸ್, ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾ ಯಿನಿ ಸಿಸ್ಟರ್ ಮಾರ್ತಾ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾ ಯರಾದ ಸಿಸ್ಟರ್ ವೆರೋನಿಕಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಆರಂಭದಲ್ಲಿ ಫಾದರ್ ಫ್ರಾಂಕ್ಲಿನ್ ಡಿಸೋಜ ಎಲ್ಲರನ್ನು ಸ್ವಾಗತಿಸಿದರು. ಕೊನೆಯಲ್ಲಿ ಶಿಕ್ಷಕ ಜನಾರ್ಧನ್ ವಂದಿಸಿದರು. ಶಿಕ್ಷಕರಾದ ಮೈಲು ಸ್ವಾಮಿ, ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page