ಚಳ್ಳಕೆರೆ ಜನಧ್ವನಿ ವಾರ್ತೆ ಜೂ 15.
ನರೇಗಾ ಯೋಜನೆಯಡಿ ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಪಂ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆಗೆ ನರೇಗಾ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ ಇದನ್ನೇ ಬಂಡವಾಳ ಮಾಡಿಕೊಂಡು ಜನಪ್ರತಿನಿಧಿಗಳು ಬಿಲ್ಲಿಗಾಗಿ ಕಾಮಗಾರಿ ಎಂಬAತೆ ಮಾಡಿ ಕಳಪೆ ಕಾಮಗಾರಿಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ2022-23 ನೇ ಸಾಲಿನಲ್ಲಿ ಮಹತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನಯಡಿಯಲ್ಲಿ 1.40 ಲಕ್ಷ ರೂ ವೆಚ್ಚದಲ್ಲಿ ಮಳೆ ನೀರು ವ್ಯರ್ಥವಾಗದ ಮೇಲ್ಚಾವಣಿಯ ನೀರನ್ನು ಸಂಗ್ರಹಿಸಲು ಮಳೆ ನೀರು ಕೊಯ್ಲು ಕಾಮಗಾರಿಯನ್ನು ಮಾಡಲಾಗಿದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾಮಗಾರಿಯನ್ನು ಬಿಲ್ಲಿಗಾಗಿ ಕಾಮಗಾರಿಯನ್ನು ಮಾಡಿದ್ದು ಮಳೆ ನೀರು ಮಾತ್ರ ಸಂಗ್ರಹವಾಗುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯಡಿಯಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.
ಏನು ಇದು ಮಳೆ ನೀರು ಕೊಯ್ಲು?
ಮಳೆ ನೀರು ಸಂಗ್ರಹಿಸುವ, ಅಂತರ್ಜಲದ ಮಟ್ಟ ಹೆಚ್ಚಿಸುವ ಮತ್ತು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಮತ್ತು ಮಳೆ ನೀರಿನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಜನೆ ಸಹಾಯಕವಾಗಲಿದೆ. ನರೇಗಾ ಯೋಜನೆಯಡಿ ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಪಂ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಸಲು ಜಿಪಂ ನರೇಗಾ ಯೋಜನಡೆಯಡಿ ಜಾರಿಗೆ ತರಲಾಗಿದೆ.
ಮಳೆಗಾಲದಲ್ಲಿ ಶಾಲಾ ಕಟ್ಟಡದ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು ಜತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ
ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಜನಪ್ರತಿನಿಧಿಗಳು ಶಿಥಿಲವಾದ ಶಾಲಾ ಹೆಚ್ಚಿನ ಕಟ್ಟಡಕ್ಕೆ ಮಳೆನೀರು ಕೊಯ್ಲು ಮಾಡಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆಕೈಗೊಳೆದುಕೊಂಡಿದ್ದಾರಾ ಅಧಿಕಾರಿಗಳು? ಕಾಮಗಾರಿ ನಿರ್ಮಾಣದ ಬೋರ್ಡ್ ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು. ಮೇಲ್ಚಾವಣಿಯ ಮಳೆ ನೀರು ಸಂಗ್ರಹಿಸಿದ ಪೈಪ್ ಲೈನ್ ಸರಿಯಾಗಿ ಅಳವಡಿಸದೆ, ಅಂದಾಜು ಮೊತ್ತ 1.40 ಲಕ್ಷ ರೂ ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡೆಯಲು ಕಾಮಗಾರಿ ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನೋದೆ ನಮ್ಮ ಜನಧ್ವನಿ ಡಿಜಿಟಲ್ ಮೀಡಿಯಾದ ಕಳಕಳಿ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆನೀರು ಕೊಯ್ಲು ಕಾಮಗಾರಿಯನ್ನು ಸರಿಪಡಿಸುವರೇ ಕಾದು ನೋಡ ಬೇಕಿದೆ.
0 Comments