ವಿದ್ಯಾರ್ಥಿಗಳಿಗೆ ವರದಾನವಾಗ ಬೇಕಿದ್ದ ನರೇಗಾ ಮಳೆ ನೀರುಕೊಯ್ಲು ಗುತ್ತಿಗೆದಾರನಿಗೆ ವರದಾನವಾಗಿದೆ ಹಳ್ಳ ಹಿಡಿದ ಮಳೆ ನೀರು ಕೊಯ್ಲು.

by | 15/06/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ 15.
ನರೇಗಾ ಯೋಜನೆಯಡಿ ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಪಂ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆಗೆ ನರೇಗಾ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ ಇದನ್ನೇ ಬಂಡವಾಳ ಮಾಡಿಕೊಂಡು ಜನಪ್ರತಿನಿಧಿಗಳು ಬಿಲ್ಲಿಗಾಗಿ ಕಾಮಗಾರಿ ಎಂಬAತೆ ಮಾಡಿ ಕಳಪೆ ಕಾಮಗಾರಿಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ2022-23 ನೇ ಸಾಲಿನಲ್ಲಿ ಮಹತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನಯಡಿಯಲ್ಲಿ 1.40 ಲಕ್ಷ ರೂ ವೆಚ್ಚದಲ್ಲಿ ಮಳೆ ನೀರು ವ್ಯರ್ಥವಾಗದ ಮೇಲ್ಚಾವಣಿಯ ನೀರನ್ನು ಸಂಗ್ರಹಿಸಲು ಮಳೆ ನೀರು ಕೊಯ್ಲು ಕಾಮಗಾರಿಯನ್ನು ಮಾಡಲಾಗಿದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾಮಗಾರಿಯನ್ನು ಬಿಲ್ಲಿಗಾಗಿ ಕಾಮಗಾರಿಯನ್ನು ಮಾಡಿದ್ದು ಮಳೆ ನೀರು ಮಾತ್ರ ಸಂಗ್ರಹವಾಗುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯಡಿಯಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.
ಏನು ಇದು ಮಳೆ ನೀರು ಕೊಯ್ಲು?


ಮಳೆ ನೀರು ಸಂಗ್ರಹಿಸುವ, ಅಂತರ್ಜಲದ ಮಟ್ಟ ಹೆಚ್ಚಿಸುವ ಮತ್ತು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಮತ್ತು ಮಳೆ ನೀರಿನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಜನೆ ಸಹಾಯಕವಾಗಲಿದೆ. ನರೇಗಾ ಯೋಜನೆಯಡಿ ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಪಂ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಸಲು ಜಿಪಂ ನರೇಗಾ ಯೋಜನಡೆಯಡಿ ಜಾರಿಗೆ ತರಲಾಗಿದೆ.
ಮಳೆಗಾಲದಲ್ಲಿ ಶಾಲಾ ಕಟ್ಟಡದ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು ಜತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ
ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಜನಪ್ರತಿನಿಧಿಗಳು ಶಿಥಿಲವಾದ ಶಾಲಾ ಹೆಚ್ಚಿನ ಕಟ್ಟಡಕ್ಕೆ ಮಳೆನೀರು ಕೊಯ್ಲು ಮಾಡಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆಕೈಗೊಳೆದುಕೊಂಡಿದ್ದಾರಾ ಅಧಿಕಾರಿಗಳು? ಕಾಮಗಾರಿ ನಿರ್ಮಾಣದ ಬೋರ್ಡ್ ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು. ಮೇಲ್ಚಾವಣಿಯ ಮಳೆ ನೀರು ಸಂಗ್ರಹಿಸಿದ ಪೈಪ್ ಲೈನ್ ಸರಿಯಾಗಿ ಅಳವಡಿಸದೆ, ಅಂದಾಜು ಮೊತ್ತ 1.40 ಲಕ್ಷ ರೂ ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡೆಯಲು ಕಾಮಗಾರಿ ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನೋದೆ ನಮ್ಮ ಜನಧ್ವನಿ ಡಿಜಿಟಲ್ ಮೀಡಿಯಾದ ಕಳಕಳಿ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆನೀರು ಕೊಯ್ಲು ಕಾಮಗಾರಿಯನ್ನು ಸರಿಪಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page