ವಿದ್ಯಾರ್ಥಿಗಳು ಕ್ರೀಡೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿ ತಾಲೂಕಿನ ಕೀರ್ತಿ ಪತಾಕೆ ಹಾರಿಸಿ: ಶಾಸಕ ಟಿ ರಘುಮೂರ್ತಿ

by | 14/09/23 | ಕ್ರೇಡೆ

ಚಳ್ಳಕೆರೆ: ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು

ನಗರದ ಬಿ ಎಂ ಜಿ ಎಚ್ ಎಸ್ ಶಾಲಾ ಆವರಣದಲ್ಲಿ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಧ್ವಜಾರೋಹಣ ನೆರವೇರಿಸಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ತಾಲೂಕಿನ ಅಶ್ವಿನಿ ಎಂಬ ಕ್ರೀಡಾಪಟು ಕಳೆದ ವರ್ಷ 600 ಮೀಟರ್ ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ್ದರು ಅಶ್ವಿನಿ ಮತ್ತು ಶ್ವೇತಾ ಎಂಬ ಕ್ರೀಡಾಪಟುಗಳು ಹ್ಯಾಂಡ್ ವಾಲ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದರು ಸೊಬೇಸ್ಟರ್ ಕ್ಯಾಂಪ್ ಎಂಬ ವಿಭಾಗದಲ್ಲಿ ಸೃಷ್ಟಿ ಮತ್ತು ಸ್ಪಂದನ ಎಂಬ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಈಗಾಗಲೇ ಒಂದು ಲಕ್ಷ ವಿದ್ಯಾರ್ಥಿ ವೇತನವನ್ನು ಪಡೆಯುತ್ತಿದ್ದಾರೆ ತಾಲೂಕಿನ ಇಂತಹ ಪ್ರತಿಭೆಗಳನ್ನು ಸ್ಪೂರ್ತಿಯಾಗಿಸಿಕೊಂಡು ಇಂದು ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಜಯಗಳಿಸಿ ಜಿಲ್ಲಾ ,ರಾಜ್ಯ, ಹಾಗೂ ರಾಷ್ಟ್ರಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತರುವಂತಾಗಬೇಕು ಎಂದು ಆಶಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ ಕ್ರೀಡಾಕೂಟವನ್ನು ವಲಯ ಮಟ್ಟದಲ್ಲಿ ಯಶಸ್ವಿಯಾಗಿ ನಡೆಸಿದ್ದು ಇಂದಿನಿಂದ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆಗೊಂಡಿದೆ ಈ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ 6 ತಂಡ ಪ್ರಾಥಮಿಕ ವಿಭಾಗದಲ್ಲಿ ಬಾಲಕ ಬಾಲಕಿಯರ 8 ತಂಡಗಳು ಭಾಗವಹಿಸುತ್ತಿವೆ ಹೀಗಾಗಿ ಎಲ್ಲಾ ಕ್ರೀಡೆಗಳು ಯಶಸ್ವಿಯಾಗಿ ಜರುಗಲು ಕ್ರೀಡಾಪಟುಗಳು ಹಾಗೂ ಶಾಲೆಗಳ ದೈಹಿಕ ಶಿಕ್ಷಕರು ಸಹಕರಿಸಬೇಕು ತೀರ್ಪುಗಾರರ ತೀರ್ಪನ್ನು ಒಮ್ಮತದಿಂದ ಸ್ವೀಕರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಕ್ರೀಡಾಪಟುಗಳಿಗೆ ಕ್ರೀಡೆಗಳಲ್ಲಿ ಕೇವಲ ಗೆಲುವೊಂದೇ ಮಾನದಂಡವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಅತ್ಯಂತ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ನಗರಸಭೆ ಸದಸ್ಯರಾದ ಕವಿತಾ ಬೋರಯ್ಯ ಸುಮಾ ಭರಮಯ್ಯ ನಗರಸಭೆ ಪೌರಾಯುಕ್ತ ಸಿ ಚಂದ್ರಪ್ಪ ಓಬಣ್ಣ ಸಿದ್ದಲಿಂಗಪ್ಪ ಸುರೇಶ್ ವೀರೇಶ್ ರಾಜಣ್ಣ ಗುರುಮೂರ್ತಿ ರಾಜಕುಮಾರ್ ಈರಣ್ಣ ಸರಸ್ವತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page