ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸೇವಾ ಮನೋಭಾವ ರೂಡಿಸಿಕೊಳ್ಳಬೇಕು : ಡಾ. ವಿ ಬಸವರಾಜ

by | 08/09/23 | ಆರೋಗ್ಯ


ಹಿರಿಯೂರು :
ಇಂದಿನ ಜಗತ್ತಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ವಿಫಲವಾದ ಉದ್ಯೋಗವಕಾಶಗಳಿದ್ದು, ಉತ್ತಮ ಕೌಶಲ್ಯದ ಮುಖಾಂತರ ನೀವುಗಳು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕೆಲಸ ಪಡೆದುಕೊಳ್ಳಬಹುದಾಗಿದೆ, ಈ ನಿಟ್ಟಿನಲ್ಲಿ ನಮ್ಮ ಮೆಡಿಕಲ್ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸೇವಾ ಮನೋಭಾವವನ್ನು ರೂಡಿಸಿಕೊಳ್ಳಬೇಕು ಎಂಬುದಾಗಿ ಜ್ಞಾನಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ವಿ ಬಸವರಾಜ ಹೇಳಿದರು.
ನಗರದ ಜ್ಞಾನಭಾರತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ನ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದಾದಿಯರ ವೃತ್ತಿ ಅತ್ಯಂತ ಗೌರವಾನ್ವಿತ ವೃತ್ತಿಯಾಗಿದ್ದು, ಈ ವೃತ್ತಿಗೆ ಹೋಗುವ ನೀವು ತಾಳ್ಮೆ ಸಂಯಮದಂತಹ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಸಮಾಜ ತಾಯಿಯ ನಂತರದ ಸ್ಥಾನವನ್ನು ದಾದಿಯರಿಗೆ ನೀಡುತ್ತಿದೆ ಅಂತಹ ಪವಿತ್ರ ವೃತ್ತಿಗೆ ನ್ಯಾಯ ಒದಗಿಸಲು ನಿಸ್ವಾರ್ಥ ಮನೋಭಾವ ಮುಖ್ಯ ಕರೋನಾದಂತಹ ಭೀಕರ ರೋಗ ಬಂದಂತಹ ಸಂದರ್ಭದಲ್ಲಿ ಸಂಬಂಧಗಳನ್ನು ಮನುಷ್ಯ ಮರೆತಿರುವಾಗ ಬಂಧುವಿನಂತೆ ರೋಗಿಗಳನ್ನು ಆರೈಕೆ ಮಾಡಿದವರು ದಾದಿಯರು ಎಂದರಲ್ಲದೆ,
ಮಹಾಯುದ್ಧಗಳು ಸಂಭವಿಸಿದಾಗ ಗಾಯಾಳು ಸೈನಿಕರನ್ನ ಶುಶ್ರೂಷೆ ಮಾಡಿದವರು ದಾದಿಯರು ಆದ್ದರಿಂದ ನಿಮ್ಮ ವೃತ್ತಿ ಸಮಾಜದ ಬಹುಮುಖ್ಯ ಭಾಗವಾಗಿದ್ದು, ಡಿವಿಜಿಯವರು ತಮ್ಮ ಕಗ್ಗದಲ್ಲಿ ಹೇಳುವಂತೆ ಕಲ್ಲು ಸಕ್ಕರೆಯಾಗು ದೀನ ದುರ್ಬಲರಿಗೆ ಎನ್ನುವ ಮಾತು ದಾದಿಯರಿಗೆ ಅತ್ಯಂತ ಪ್ರಸ್ತುತವಾಗಿದೆ ಎಂಬುದಾಗಿ ಹೇಳಿದರು.
ನೊಂದವರ ಪಾಲಿನ ಆಶಾಕಿರಣ ನೀವಾಗಬೇಕು ನೀವುಗಳು ನಿಮ್ಮ ಸೇವೆಯನ್ನು ಹೆಸರು ಕೀರ್ತಿ ಸುದ್ದಿಗಾಗಿ ಮಾಡಬೇಡಿ ಸದ್ದಿಲ್ಲದೇ ಸೇವೆ ಮಾಡುವ ಗುಣ ಬೆಳೆಸಿಕೊಳ್ಳಿ ಭವಿಷ್ಯದಲ್ಲಿ ಆರೋಗ್ಯ ಕ್ಷೇತ್ರದ ಸ್ತಂಭಗಳಾದ ನೀವುಗಳು ಸಂಕಷ್ಟದಲ್ಲಿ ಇರುವ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ರೋಗಗ್ರಸ್ತ ಸಮಾಜವನ್ನು ಸ್ವಸ್ಥ ಆರೋಗ್ಯಯುಕ್ತ ಸಮಾಜವನ್ನಾಗಿಸುವ ಗುರಿಯನ್ನು ಇಟ್ಟುಕೊಳ್ಳಿ ಎಂಬುದಾಗಿ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಿಇಡಿ ಕಾಲೇಜಿನ ಪ್ರಾಚಾರ್ಯರಾದ ಎನ್.ಧನಂಜಯ್, ಹಿರಿಯ ಉಪನ್ಯಾಸಕರಾದ ಎಂ.ಬಸವರಾಜ್, ಪ್ಯಾರಾ ಮೆಡಿಕಲ್ ವಿಭಾಗದ ಮುಖ್ಯಸ್ಥರಾದ ಗಿರೀಶ್, ವ್ಯವಸ್ಥಾಪಕರಾದ ದೊರೇಶ್. ನಾಗರತ್ನ, ಮಹಮದ್, ಲೀಲಾ, ಉಮ್ರಾಜ್, ಅಂಬಿಕಾ, ರವಿಕುಮಾರ್, ನಾಗೇಶ್, ಆದಿತ್ಯ ಉಪಸ್ಥಿತರಿದ್ದರು.
ಆರಂಭದಲ್ಲಿ ಚಂದ್ರಕಲಾ ಪ್ರಾರ್ಥಿಸಿದರು, ವಿದ್ಯಾರ್ಥಿಗಳಾದ ಲಿಖಿತ,ಪ್ರಿಯ ಸ್ವಾಗತಿಸಿದರು ಮಂಜುನಾಥ್ ವರದರಾಜ್ ಕಾರ್ಯಕ್ರಮ ನಿರೂಪಿಸಿದರು, ಶಕುಂತಲಾ ಪ್ರಾರ್ಥಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page