ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಮತೋಲನ ಆಹಾರ ಸೇವನೆ ಮಾಡಬೇಕು.ಸೊಪ್ಪು,ತರಕಾರಿ ಹೆಚ್ಚು ತಿನ್ನಬೇಕು ತಾಪಂ ಇಒ ಶಶಿಧರ್.

by | 23/11/23 | ಆರೋಗ್ಯ


ಚಳ್ಳಕೆರೆ ಬನ.23
ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತೆ ಪೋಷಣೆ ಮಾಡುವ ಉದ್ದೇಶದಿಂದ ಪಂಚಾಯಿತಿಗೊಂದು ಶಿಶು ಪಾಲನ ಕೇಂದ್ರ ಕೂಸಿನ ಮನೆ ತೆರೆಯಲಾಗುತ್ತಿದೆ ಎಂದು ತಾಪಂ ಇಒ ಶಶಿಧರ್ ಹೇಳಿದರು.
ನಗರದ ಬಾಪೂಜಿ ಪಿಯು ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕೂಸಿನ ಮನೆಯಲ್ಲಿ ಚಿಕ್ಕ ಮಕ್ಕಳ ಆರೈಕೆ ಮಾಡಲು 10 ಜನರನ್ನು ಆಯ್ಕೆ ಮಾಡಿಕೊಂಡಿದ್ದು,ನ.23ರಿಂದ 29ರವರೆಗೆ ತರಬೇತಿ ನೀಡಲಾಗುತ್ತದೆ ಎಂದರು.
ರಕ್ತ ಹೀನತೆಯಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಅದ್ದರಿಂದ ಯಾವ ಆಹಾರ ಸೇವನೆ ಮಾಡಬೇಕು. ಯಾವುದು ತಿನ್ನಬಾರದು ಎಂದು ಮಕ್ಕಳು ತಿಳಿಯುವ ಮೂಲಕ ತಮ್ಮ ಕುಟುಂಬಗಳಿಗೆ ತಿಳಿಸಬೇಕು. ಅಪೌಷ್ಟಿಕತೆ ಹೋಗಲಾಡಿಸಲು ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಮತೋಲನ ಆಹಾರ ಸೇವನೆ ಮಾಡಬೇಕು.ಸೊಪ್ಪು,ತರಕಾರಿ ಹೆಚ್ಚು ತಿನ್ನಬೇಕು. ರಕ್ತ ಹೀನತೆ ಹೋಗಲಾಡಿಸಲು ಮೊಟ್ಟೆ ಸೇವಿಸಬೇಕು ಎಂದರು.
ಸಿಡಿಪಿಒ ಹರಿಪ್ರಸಾದ್ ಮಾತನಾಡಿ,ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಎಗ್ ರೈಸ್, ಪಾನಿಪೂರಿ, ಗೋಬಿ ತಿಂದು ಆರೋಗ್ಯ ಹಾಳು ಮಾಡಿಕೊಳ್ಳದೆ, ಮನೆಯಲ್ಲಿ ಸೊಪ್ಪು,ತರಕಾರಿ ಸೇವಿಸಿದಲ್ಲಿ ದೇಹ ಸದೃಢವಾಗುವುದರಿಂದ ಏಕಾಗ್ರತೆಯಿಂದ ಶಿಕ್ಷಣ ಪಡೆಯಲು ಸಹಕಾರಿಯಾಗುವುದು.ಇನ್ನೂ ಕಾಲೇಜಿಗೆ ಬರುವುದು ಶಿಕ್ಷಣ ಪಡೆಯಲು ದು ಬಿಟ್ಟು ಪ್ರೀತಿ-ಪ್ರೇಮದ ವಿಷಯಗಳ ಕಡೆ ಗಮನ ಕೊಡಬಾರದು ಎಂದರು.
ಬಾಲ್ಯ ವಿವಾಹ ತಪ್ಪಿಸಲು ವಿದ್ಯಾರ್ಥಿಗಳು ಇಂಥ ವಿಷಯಗಳು ನಿಮ್ಮ ಗಮನಕ್ಕೆ 112 ಇಲ್ಲವೇ 1098ಕ್ಕೆ ತಿಳಿಸಿದರೆ ಬಾಲ್ಯ ವಿವಾಹ ತಡೆಯಲಾಗುವುದು ಎಂದರು.
ಟಿಎಚ್‌ಒ ಡಾ.ಎನ್.ಕಾಶಿ ಮಾತನಾಡಿ, ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಮಾಡಲು ಸರಕಾರ ಯೋಜನೆ ರೂಪಿಸಿದ್ದು, ಮಕ್ಕಳು ದೈಹಿಕವಾಹಿ ಸದೃಢ ಮತ್ತು ರಕ್ತ ಪ್ರಮಾಣ ಹೆಚ್ಚಿಸಿಕೊಳ್ಳಲು ಪಾಲಕ್ ಸೊಪ್ಪು, ಬೆಲ್ಲ, ಶೇಂಗಾ, ರಾಗಿ ಮುದ್ದೆ, ಮೊಳಕೆ ಕಾಳು, ಕರಿಬೇವು ಸೇವಿಸಬೇಕು. 11ಗ್ರಾಂಗಿಂತ ರಕ್ತ ಕಡಿಮೆ ಇರಬಾರದು ಎಂದರು.
ಮೊಳಕಾಲ್ಮುರು ಸಿಡಿಪಿಒ ನವೀನ್‌ಕುಮಾರ್, ತಾಪಂ ಸಹಾಯಕ ನಿರ್ದೇಶಕ ಸಂಪತ್‌ಕುಮಾರ್, ಆರೋಗ್ಯ ಇಲಾಖೆಯ ಬಿ.ಎಸ್.ತಿಪ್ಪೇಸ್ವಾಮಿ, ಉಪನ್ಯಾಸಕ ಜಗದೀಶ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಮಕ್ಕಳಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page