ಚಳ್ಳಕೆರೆ: ವಿಜ್ಞಾನದ ವಿದ್ಯಾರ್ಥಿಗಳು ವಿಜ್ಞಾನದ ವಿಷಯದಲ್ಲಿ ಸಾಧನೆ ಮಾಡಲು ಸಿವಿ ರಾಮನ್ ರವರ ಆದರ್ಶಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಎಂಡಿ ಲತೀಫ್ ಸಾಬ್ ಅಭಿಪ್ರಾಯಪಟ್ಟರು.
ನಗರದ ಶ್ರೀ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಿವಿ ರಾಮನ್ ರವರು ತಮಗೆ ವಿಜ್ಞಾನದಲ್ಲಿ ಆಸಕ್ತಿ ಇದ್ದುದರಿಂದ ಹೆಚ್ಚಿನ ವೇತನದ ಕೆಲಸವನ್ನು ಬಿಟ್ಟು ವಿಜ್ಞಾನದ ವಿಷಯದಲ್ಲಿ ಏನಾದರೂ ಸಾಧನೆ ಮಾಡಲೇಬೇಕು ಎಂಬ ಹಂಬಲದಿಂದ ಹಗಲು ರಾತ್ರಿ ಕಷ್ಟಪಟ್ಟು ಬೆಳಕಿನ ಚದುರುವಿಕೆ ಎಂಬ ವಿಷಯದಲ್ಲಿ ಮಹತ್ವದ ಸಾಧನೆ ಮಾಡಿ ನೊಬೆಲ್ ಪ್ರಶಸ್ತಿ ಪಡೆದು ಸಾಧನೆ ಮಾಡಿದರು ಎಂದು ತಿಳಿಸಿದರು.
ಸಿವಿ ರಾಮನ್ ರವರಿಗೆ ತಮಗೆ ಇರುವ ಅಲ್ಪ ಸೌಲಭ್ಯಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಇಂದಿನ ವಿದ್ಯಾರ್ಥಿಗಳಿಗೆ ಅಪಾರ ತಂತ್ರಜ್ಞಾನದ ನೆರವಿನ ಅವಕಾಶವಿರುವುದರಿಂದ ವಿಜ್ಞಾನ ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಸಂಶೋಧನೆಗಳನ್ನು ಕೈಗೊಂಡು ದೇಶಕ್ಕೆ ಉತ್ತಮ ಕೊಡುಗೆ ನೀಡುವತ್ತ ಗಮನಹರಿಸಬೇಕು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಐಐಎಸ್ಸಿ ಬಾರ್ಕ್ ನಂತಹ ಸಂಸ್ಥೆಗಳು ತಲೆ ಎತ್ತಿದ್ದು ತಾಲೂಕು ಸೈನ್ಸ್ ಸಿಟಿಯಾಗಿ ಮಾರ್ಪಟ್ಟಿದೆ ಇಂತಹ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬೇಕು ವಿದ್ಯಾರ್ಥಿಗಳು ಮೊದಲು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಂಡು ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಂದ ಹೊರ ಬಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಹೇಮಂತ್ ರಾಜ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಗಂಟೆ ಹೊಡಿ ಸಂಬಳ ತೆಗೆದುಕೋ ಎಂಬ ಮನೋಭಾವ ನಿರ್ಮಾಣವಾಗಿದೆ ಇದರಿಂದ ಹೊರಬಂದು ಶಿಕ್ಷಕರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜನರಲ್ಲಿ ಪರಿಸರ ಜಾಗೃತಿ ವಿಜ್ಞಾನ ಜಾಗೃತಿ ಆಶುಭಾಷಣ ಸ್ಪರ್ಧೆ ಚರ್ಚಾ ಸ್ಪರ್ಧೆ ಶಾಲೆಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವ ಮೂಲಕ ಸಾರ್ವಜನಿಕರಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ ನಾಯಕ, ರವಿಕುಮಾರ್, ದೊರೆಸ್ವಾಮಿ, ವಿಶ್ವನಾಥ, ಕಲ್ಲೇಶ್, ಶಾಮಸುಂದರ್, ಸೇರಿದಂತೆ ಪ್ರಶಿಕ್ಷಣ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
![](https://janadhwani.in/wp-content/uploads/2024/02/IMG-20240228-WA0157.jpg)
0 Comments