ಚಳ್ಳಕೆರೆ: ವಿದ್ಯಾರ್ಥಿಗಳು ತಂತ್ರಜ್ಞಾನದ ಜ್ಞಾನವನ್ನು ಪಡೆದು ದೇಶ ವಿದೇಶಗಳಲ್ಲಿ ಉತ್ತಮ ಸಾಧನೆ ಮಾಡುವತ್ತ ಗಮನಹರಿಸಬೇಕಿದೆ ಎಂದು ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಎಂ ಬೆನಲ್ ಕಿವಿಮಾತು ಹೇಳಿದರು.
ನಗರದ ಎಚ್ ಪಿ ಪಿ ಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಥರ್ವ- 2ಕೆ 24 ಒಂದು ದಿನದ ರಾಜ್ಯಮಟ್ಟದ ಐಟಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿತಿದ್ದೇವೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ತಿಳಿದುಕೊಂಡಿದ್ದೇವೆ ಎಂಬ ಅತಿಯಾದ ಆತ್ಮವಿಶ್ವಾಸದಿಂದ ಹೊರ ಬಂದು ನಿಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಇಂದಿನ ದಿನಗಳಲ್ಲಿ ವಿಶ್ವವು ತನ್ನದೇ ಆದ ಪ್ರತ್ಯೇಕ ಸ್ಪರ್ಧಾತ್ಮಕ ಯುಗವೊಂದನ್ನು ಸೃಷ್ಟಿಸಿಕೊಂಡಿದೆ ನಾವು ತಂತ್ರಜ್ಞಾನದೊಂದಿಗೆ ಸ್ಪರ್ಧೆ ಮಾಡಬೇಕಿರುವುದರಿಂದ ಪ್ರತಿ ದಿನ ತಂತ್ರಜ್ಞಾನದಲ್ಲಿ ಹೊಸ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕಿದೆ ಭಾರತ ದೇಶ ತಂತ್ರಜ್ಞಾನದ ವಿಷಯದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದು ಇಂದು ಗ್ರಾಮೀಣ ಪ್ರದೇಶದ ಅವಿದ್ಯಾವಂತ ಜನರು ಸಹ ಮೊಬೈಲ್ ತಂತ್ರಜ್ಞಾನವನ್ನು ಕಲಿತುಕೊಂಡು ವ್ಯವಹಾರವನ್ನು ನಡೆಸುವ ಮಟ್ಟಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಮನುಷ್ಯನ ಒಂದು ಅವಿಭಾಜ್ಯ ಅಂಗವಾಗಿ ಬೆಳೆದು ನಿಂತಿದೆ ಆದರೆ ತಂತ್ರಜ್ಞಾನ ಹೆಚ್ಚಿದಂತೆಲ್ಲ ನಿರುದ್ಯೋಗ ಸಮಸ್ಯೆ ಉಂಟಾಗುತ್ತಿದ್ದು ಕೂಲಿ ಕಾರ್ಮಿಕರ ಜೀವನವನ್ನು ಕಸಿದುಕೊಳ್ಳುತ್ತಿದೆ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಕಳೆದುಕೊಳ್ಳುತ್ತಿದ್ದು ವಿದ್ಯಾರ್ಥಿಗಳಿಗೆ ಕಲೆ ವಾಣಿಜ್ಯ ವಿಜ್ಞಾನ ಎಂಬ ಮೂರು ವಿಷಯಗಳನ್ನು ಮಾತ್ರ ಬೋಧಿಸಲಾಗುತ್ತಿತ್ತು ಆದರೆ ಈಗ ಹೊಸ ತಂತ್ರಜ್ಞಾನ ಆಧಾರಿತ ವಿಷಯಗಳನ್ನು ಕಲಿತುಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯ ತಂತ್ರಜ್ಞಾನ ಏನೇ ಮುಂದುವರೆದರು ಸಾಮಾನ್ಯ ಜ್ಞಾನ ಇಲ್ಲದಿದ್ದರೆ ಮನುಷ್ಯ ಅಭಿವೃದ್ಧಿ ಹೊಂದುವುದು ಕಷ್ಟಸಾಧ್ಯ ಆದ್ದರಿಂದ ವಿದ್ಯಾರ್ಥಿಗಳು ತಾಂತ್ರಿಕವಾಗಿ ಎಷ್ಟೇ ಬೆಳವಣಿಗೆ ಹೊಂದಿದರೂ ಸಹ ಸಾಮಾಜಿಕವಾಗಿ ತಮ್ಮ ಜೀವನವನ್ನು ನಡೆಸುವ ಜವಾಬ್ದಾರಿ ಬೆಳೆಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಪ್ರಾಂಶುಪಾಲ ಬಿ.ಎಸ್ ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ನಾಲ್ಕುಗೋಡೆಗಳ ಮಧ್ಯೆ ಪಠ್ಯ ಚಟುವಟಿಕೆಗೆ ಮಾತ್ರ ಸೀಮಿತವಾಗದ ತನ್ನಲ್ಲಿರುವ ಪ್ರತಿಭೆಯನ್ನು ಹೊರ ಹೊಮ್ಮಲು ಹಾಗೂಕೌಲ್ಯವನ್ನು ಹೆಚ್ಚಿಸಿಕೊಳ್ಳಲು ಕಾಲೇಜು ಶಿಕ್ಷಣ ಈ ಯೋಜನೆಯನ್ನು ಜಾರಿಗೆ ತಂದಿದ್ದು ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುವ ಮೂಲಕ ಸೋಲು ಗೆಲುವು ಸಮಾನಾಗಿ ಸ್ವೀಕರಿಸಬೇಕು.
ಇಂದಿನ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಇಡೀ ವಿಶ್ವದ ವಿಷಯಗಳನ್ನು ತನ್ನ ಅಂಗೈಯಲ್ಲಿ ನೋಡಬಹುದಾಗಿದ್ದು ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ್ದು ಚಳ್ಳಕೆರೆ ತಾಲೂಕು ಒಂದು ಕಾಲದಲ್ಲಿ ಆಯಿಲ್ ಸಿಟಿ ಎಂಬ ಹೆಸರು ಪಡೆದಿತ್ತು ಆದರೆ ಈಗ ಬಾರ್ಕ್ ಡಿ ಆರ್ ಡಿ ಓ ಗಳಂತಹ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದರಿಂದ ವಿಜ್ಞಾನ ನಗರ ಎಂಬ ಖ್ಯಾತಿ ಪಡೆದಿದೆ ವಿದ್ಯಾರ್ಥಿಗಳು ಅಥರ್ವ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಸೋಲು ಗೆಲುವು ಸಹಜವಾದದ್ದು ತೀರ್ಪುಗಾರರ ತೀರ್ಪಿಗೆ ತಲೆಬಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗಣಕಯಂತ್ರ ಮತ್ತು ವಿಜ್ಞಾನ ವಿಭಾಗದ ಮುಖ್ಯಸ್ಥ ಚನ್ನಕೇಶವ, ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿದರು.
ಗ್ರಂಥಾಲಯ ಮೇಲ್ವಿಚಾರಕ ಡಾ. ಪಾಪಣ್ಣ, ಕನ್ನಡ ಪ್ರಾಧ್ಯಾಪಕ ಡಾ. ಚಿತ್ತಯ್ಯ ಸೇರಿದಂತೆ ಉಪನ್ಯಾಸಕ ವರ್ಗ ಹಾಗೂ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
0 Comments