ಚಳ್ಳಕೆರೆ ಡಿ.3 ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ಪ್ರಥಮ ಪಿಯುಸಿ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ಅನಿಮೀಯ ಮುಕ್ತಪೌಷ್ಟಿಕ ಕರ್ನಾಟಕ ಯೋಜನೆಯಡಿ ರಕ್ತಹೀನತೆ ಪರೀಕ್ಷೆಯನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಎಂ ರವೀಶ್ ಕುಮಾರ್ ಇತ್ತೀಚಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರಗಳಿಗೆ ಆಗಮಿಸುವುದರಿಂದ ಬೆಳಗ್ಗೆಯಿಂದ ಸಂಜೆಯವರೆಗೂ ಸರಿಯಾದ ಊಟ ಉಪಹಾರ ಸೇವಿಸದೆ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಪ್ರಕರಣಗಳು ಹೆಚ್ಚುತ್ತಿದ್ದು ಇದರಿಂದಾಗಿ ರಕ್ತಹೀನತೆ ಸೇರಿದಂತೆ ಹಲವು ರೋಗಗಳಿಗೆ ವಿದ್ಯಾರ್ಥಿಗಳು ತುತ್ತಾಗುತ್ತಿದ್ದಾರೆ ಇದನ್ನು ಹೋಗಲಾಡಿಸುವ ದೃಷ್ಟಿಯಿಂದ ಮತ್ತು
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ, ಆರೋಗ್ಯ ಅತಿ ಮುಖ್ಯ ವಾಗಿರುವುದರಿಂದ, ಎಲ್ಲಾ ವಿದ್ಯಾರ್ಥಿಗಳಿಗೆ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಅಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೈದ್ಯರ ಮೂಲಕ ಉತ್ತಮ ಚಿಕಿತ್ಸೆ ಕೊಡಿಸಲಾಗುತ್ತಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯಬೇಕು ಎಂದು ತಿಳಿಸಿದರು.
ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾತನಾಡಿ ಯಾವುದೇ ವಿದ್ಯಾರ್ಥಿಗಳು ಹಿಮೋಗ್ಲೋಬಿನ್ ಸಮಸ್ಯೆಯಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರದಿಂದ ಕಬ್ಬಿಣಾಂಶಯುಕ್ತ ಮಾತ್ರೆಗಳನ್ನು ಹೀಮೋಗ್ಲೋಬಿನ್ 7ಕ್ಕಿಂತ ಕಡಿಮೆ ಇದ್ದ ವಿದ್ಯಾರ್ಥಿಗಳಿಗೆ ಐರನ್-ಸುಕ್ರೋಸ್ ಇಂಜಕ್ಷನ್ ಹಾಗೂ ಹಿಮೋಗ್ಲೋಬಿನ್ 5ಕ್ಕಿಂತ ಕಡಿಮೆ ಕಂಡುಬರುವ ಮಕ್ಕಳಿಗೆ ರಕ್ತವನ್ನು ನೀಡಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಎಂ ರವೀಶ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಯಾದ ಶಾಂತಕುಮಾರಿ ಬಿ, ಡಾ//ರಮೇಶ್, ಡಾ//ಮಂಜುನಾಥ್, ಉಪನ್ಯಾಸಕರಾದ ಪುಟ್ಟರಂಗಪ್ಪ, ರವಿಕುಮಾರ್, ರಾಜಶೇಖರ್, ಮಹಾಂತೇಶ್, ಮಧು, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ರೇಖ, ಅಕ್ಷತಾ ಉಪಸ್ಥಿತರಿದ್ದರು.
0 Comments