ಹಿರಿಯೂರು :
ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಜೊತೆಗೆ ಮೌಲ್ಯಗಳನ್ನು, ಸಂಸ್ಕಾರ-ಸಂಸ್ಕತಿಯನ್ನು ಸಹ ಅಳವಡಿಸಿಕೊಳ್ಳುವುದು ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಹೊರಬರಬೇಕು, ಈ ನಿಟ್ಟಿನಲ್ಲಿ ಶ್ರೀರಂಗನಾಥ ಪಿಯು ಕಾಲೇಜು ಗುಣಮಟ್ಟ ಶಿಕ್ಷಣವನ್ನು ಕೊಡುವ ಮೂಲಕ ನಗರದಲ್ಲಿ ಹೆಸರುಮಾಡಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ಶ್ರೀ ರಂಗನಾಥ ಪಿ.ಯು ಕಾಲೇಜಿನ ಆವರಣದಲ್ಲಿ ಭಾರತೀಯ ಎಜುಕೇಶನ್ ಮತ್ತು ಕಲ್ಚರಲ್ ಅಸೋಸಿಯೇಷನ್ ನಿಂದ 2023-24ನೇ ಸಾಲಿನ ಕ್ರೀಡೆ ಮತ್ತು ಸಾಂಸ್ಕೃತಿಕ ಹಾಗೂ ಸಿ.ಇ.ಟಿ ನೀಟ್, ಜೆ.ಇ.ಇ ತರಬೇತಿ ಕಾರ್ಯಾಗಾರ ಮತ್ತು ಪ್ರಥಮ ಪಿ.ಯು. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಕಳೆದ ವರ್ಷ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಡಾಕ್ಟರ್ ಹಾಗೂ ಇಂಜಿನಿಯರ್ ವೃತ್ತಿಕೋರ್ಸ್ ಆಯ್ಕೆಮಾಡಿಕೊಳ್ಳಲು ಪಿಯುಸಿ ಶಿಕ್ಷಣದ ಜೊತೆಜೊತೆಗೆ ಸಿ.ಇ.ಟಿ ನೀಟ್, ಜೆ.ಇ.ಇ ತರಬೇತಿ ಸಹ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕಾಲೇಜಿನ ಆಡಳಿತ ಮಂಡಳಿಗಳು ಆರಂಭದಿಂದಲೇ ತಮ್ಮ ಕಾಲೇಜಿನಲ್ಲಿಯೇ ವಿದ್ಯಾರ್ಥಿಗಳಿಗೆ ಈ ತರಬೇತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾಕ್ಟರ್ ಶ್ರೀಶ್ರೀಬಸವರಮಾನಂದಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಆರಂಭದಿಂದಲೇ ಸತತ ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು, ಓದಿದ ಶಾಲೆಗೆ ಹೆತ್ತ ತಂದೆತಾಯಿಗಳಿಗೆ ಕೀರ್ತಿ ತರಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಟಿ.ವೀರಕರಿಯಪ್ಪ, ಆಯುರ್ವೇದ ಯೋಗ ತಜ್ಞ ಡಾ.ಗುರು ಬಸವರಾಜ್ ಯಲಗಚ್ಚಿನ, ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇಶ್ವರಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿ ಗೌಡ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಲ್ಲಟ್ಟಿ ತಿಪ್ಪೇಸ್ವಾಮಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜಯ ರಮೇಶ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಈರಲಿಂಗೇಗೌಡ, ಜಿಲ್ಲಾ ಪಂ. ಮಾಜಿ ಸದಸ್ಯ ನಾಗೇಂದ್ರ ನಾಯಕ್, ನಗರಸಭೆ ಮಾಜಿ ಅಧ್ಯಕ್ಷ ಶಿವರಂಜಿನಿ, ಎಂ.ಡಿ.ಸಣ್ಣಪ್ಪ, ಕಾಂಗ್ರೆಸ್ ಮುಖಂಡರಾದ ಪಿ.ಕೃಷ್ಣಮೂರ್ತಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments