ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸವನ್ನು ಮೋಜು ಮಸ್ತಿಗಾಗಿ ಬಳಸದೆ ಶೈಕ್ಷಣಿಕ ಮತ್ತು ಭೌಗೋಳಿಕ ಸಂಗತಿಗಳನ್ನು ಅರಿಯುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಮತ್ತು ಜ್ಞಾನಾತ್ಮಕವಾಗಿ ಬೆಳವಣಿಗೆ ಹೊಂದಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ .

by | 01/01/24 | ಸುದ್ದಿ


 ಚಳ್ಳಕೆರೆ ಜ.1:ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸವನ್ನು ಮೋಜು ಮಸ್ತಿಗಾಗಿ ಬಳಸದೆ ಶೈಕ್ಷಣಿಕ ಮತ್ತು ಭೌಗೋಳಿಕ ಸಂಗತಿಗಳನ್ನು ಅರಿಯುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಮತ್ತು ಜ್ಞಾನಾತ್ಮಕವಾಗಿ ಬೆಳವಣಿಗೆ ಹೊಂದಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಿಳಿಸಿದರು.


ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಕರ್ನಾಟಕ ದರ್ಶನ ಕಾರ್ಯಕ್ರಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಪ್ರವಾಸವನ್ನು ಹಮ್ಮಿಕೊಂಡಿದ್ದು 4 ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ 181 ವಿದ್ಯಾರ್ಥಿಗಳು  ಈ ಯೋಜನೆಯ ಅಡಿಯಲ್ಲಿ ಪ್ರವಾಸವನ್ನು ಕೈಗೊಂಡಿದ್ದು ಈ ವೇಳೆ ವಿದ್ಯಾರ್ಥಿಗಳು ಹಂಪೆ,ಬಾದಾಮಿ, ಪಟ್ಟದಕಲ್ಲು, ಹೊಸಪೇಟೆ ಬನಶಂಕರಿ, ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವರು ಪ್ರತಿ ಬಸ್ಸಿನಲ್ಲಿ ಒಬ್ಬ ಮಹಿಳಾ ಮತ್ತು ಪುರುಷ ಶಿಕ್ಷಕರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿದ್ದು ಒಟ್ಟು ಹತ್ತು ಜನ ಶಿಕ್ಷಕರು ಮಕ್ಕಳ ಬಗ್ಗೆ ಜಾಗೃತಿ ವಹಿಸುವರು ಶಿಕ್ಷಕರು ಮಕ್ಕಳ ಮತ್ತು ತಮ್ಮ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ ಸುರಕ್ಷಿತವಾಗಿ ಪ್ರವಾಸವನ್ನು ಕೈಗೊಂಡು ಮರಳಬೇಕು ಫೋಷಕರು ಮಕ್ಕಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮಹೇಶ್ವರಪ್ಪ ಮಾತನಾಡಿ ರಾಜ್ಯ ಸರ್ಕಾರದ ಆದೇಶದಂತೆ ಈ ಪ್ರವಾಸವನ್ನು ಹಮ್ಮಿಕೊಂಡಿದ್ದು ಮಕ್ಕಳಿಗೆ ಇಲಾಖೆ ವತಿಯಿಂದ ತಿಂಡಿ ಊಟ ವ್ಯವಸ್ಥೆಯನ್ನು ನೋಡಿಕೊಳ್ಳಲಿದೆ‌ ಕರ್ನಾಟಕ ದರ್ಶನ ಕಾರ್ಯಕ್ರಮವು ಗ್ರಾಮೀಣ ಪ್ರದೇಶದ ಹಿಂದುಳಿದ ಮತ್ತು ಬಡ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು‌‌.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿಧ್ಯಾರ್ಥಿಗಳ ಫೋಷಕರು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page