ಚಳ್ಳಕೆರೆ ಜ.1:ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸವನ್ನು ಮೋಜು ಮಸ್ತಿಗಾಗಿ ಬಳಸದೆ ಶೈಕ್ಷಣಿಕ ಮತ್ತು ಭೌಗೋಳಿಕ ಸಂಗತಿಗಳನ್ನು ಅರಿಯುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಮತ್ತು ಜ್ಞಾನಾತ್ಮಕವಾಗಿ ಬೆಳವಣಿಗೆ ಹೊಂದಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಿಳಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಕರ್ನಾಟಕ ದರ್ಶನ ಕಾರ್ಯಕ್ರಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಪ್ರವಾಸವನ್ನು ಹಮ್ಮಿಕೊಂಡಿದ್ದು 4 ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ 181 ವಿದ್ಯಾರ್ಥಿಗಳು ಈ ಯೋಜನೆಯ ಅಡಿಯಲ್ಲಿ ಪ್ರವಾಸವನ್ನು ಕೈಗೊಂಡಿದ್ದು ಈ ವೇಳೆ ವಿದ್ಯಾರ್ಥಿಗಳು ಹಂಪೆ,ಬಾದಾಮಿ, ಪಟ್ಟದಕಲ್ಲು, ಹೊಸಪೇಟೆ ಬನಶಂಕರಿ, ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವರು ಪ್ರತಿ ಬಸ್ಸಿನಲ್ಲಿ ಒಬ್ಬ ಮಹಿಳಾ ಮತ್ತು ಪುರುಷ ಶಿಕ್ಷಕರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿದ್ದು ಒಟ್ಟು ಹತ್ತು ಜನ ಶಿಕ್ಷಕರು ಮಕ್ಕಳ ಬಗ್ಗೆ ಜಾಗೃತಿ ವಹಿಸುವರು ಶಿಕ್ಷಕರು ಮಕ್ಕಳ ಮತ್ತು ತಮ್ಮ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ ಸುರಕ್ಷಿತವಾಗಿ ಪ್ರವಾಸವನ್ನು ಕೈಗೊಂಡು ಮರಳಬೇಕು ಫೋಷಕರು ಮಕ್ಕಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು
ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮಹೇಶ್ವರಪ್ಪ ಮಾತನಾಡಿ ರಾಜ್ಯ ಸರ್ಕಾರದ ಆದೇಶದಂತೆ ಈ ಪ್ರವಾಸವನ್ನು ಹಮ್ಮಿಕೊಂಡಿದ್ದು ಮಕ್ಕಳಿಗೆ ಇಲಾಖೆ ವತಿಯಿಂದ ತಿಂಡಿ ಊಟ ವ್ಯವಸ್ಥೆಯನ್ನು ನೋಡಿಕೊಳ್ಳಲಿದೆ ಕರ್ನಾಟಕ ದರ್ಶನ ಕಾರ್ಯಕ್ರಮವು ಗ್ರಾಮೀಣ ಪ್ರದೇಶದ ಹಿಂದುಳಿದ ಮತ್ತು ಬಡ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
![](https://janadhwani.in/wp-content/uploads/2024/01/IMG-20240101-WA0342.jpg)
![](https://janadhwani.in/wp-content/uploads/2024/01/IMG-20240101-WA0347.jpg)
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿಧ್ಯಾರ್ಥಿಗಳ ಫೋಷಕರು ಹಾಜರಿದ್ದರು.
![](https://janadhwani.in/wp-content/uploads/2024/01/Picsart_24-01-01_09-32-47-055-scaled.jpg)
![](https://janadhwani.in/wp-content/uploads/2024/01/Picsart_24-01-01_10-08-26-317-scaled.jpg)
![](https://janadhwani.in/wp-content/uploads/2024/01/Picsart_24-01-01_07-05-12-249.jpg)
0 Comments