ಬೆಳಗಾವಿ ನ.26. ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಸಿಲುಕಿ ತಾಯಿ ಮಗು ಸಾವನ್ನಪ್ಪಿದ ಘಟನೆ ಇನ್ನು ಕಣ್ಣುಮುಂದೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಮೃತ ರ್ದುದೈವಿಗಳು. ಪ್ರೀತಮ್ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡುಹೋಗಿದ್ದ. ಈ ವೇಳೆ ಮೋಟಾರ್ ಆನ್ ಮಾಡಿ ವಾಟರ್ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಮಗ, ತಂದೆಯನ್ನು ರಕ್ಷಿಸಲು ಕೈ ಹಿಡಿದಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments