ವಿದ್ಯುನ್ಮಾನ ಮತ ಯಂತ್ರಗಳ ಯಾದೃಚ್ಛಿಕರಣ ಪೂರ್ಣ : ವಿಧಾನಸಭಾ ಕ್ಷೇತ್ರವಾರು ಹಂಚಿಕೆ* -ಜಿಲ್ಲಾಧಿಕಾರಿ ಟಿ.ವೆಂಕಟೇಶ್.

by | 20/03/24 | ಲೋಕಸಭಾ ಚುನಾವಣೆ-2024

ಚಿತ್ರದುರ್ಗ ಮಾ.20:ಚುನಾವಣಾ ಆಯೋಗದ ನಿರ್ದೇಶನದಂತೆ ಮೊದಲ ಹಂತದ ವಿದ್ಯುನ್ಮಾನ ಮತ ಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಯಾದೃಚ್ಛಿಕರಣ ಮಾಡಾಗಿದೆ. ವಿಧಾನಸಭಾ ಕ್ಷೇತ್ರವಾರು ಈ ಯಂತ್ರಗಳನ್ನು ಭೌತಿಕವಾಗಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.


ಬುಧವಾರ ಮುಂಜಾನೆ ಬೆಳಿಗ್ಗೆ 7 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ತಂತ್ರಾಂಶ ಆಧಾರಿಸಿದ ಯಾದೃಚ್ಛಿಕರಣ(Randomization) ಕಾರ್ಯ ನಡೆಸಿ ಅವರು ಮಾತನಾಡಿದರು.  

ಹೆಚ್ಚುವರಿಯಾಗಿ ಶೇ.25 ರಷ್ಟು ವಿದ್ಯುನ್ಮಾನ ಮತಯಂತ್ರ (ಬ್ಯಾಲೆಟ್ ಯನಿಟ್) ಹಾಗೂ ನಿಯಂತ್ರಣ ಘಟಕಗಳು (ಕಂಟ್ರೋಲ್ ಯುನಿಟ್), ಶೇ.30 ರಷ್ಟು ಹೆಚ್ಚುವರಿ ಮತ ಖಾತ್ರಿ ಯಂತ್ರಗಳ(ವಿವಿಪ್ಯಾಟ್) ಒಳಗೊಂಡಂತೆ ತಂತ್ರಾಂಶ ಆಧಾರಿತ ಯಾದೃಚ್ಛಿಕರಣ ನಡೆಸಲಾಗಿದೆ. ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳಲ್ಲಿ 1661 ಮತಗಟ್ಟೆಗಳಿವೆ. ಈ ಸಂಖ್ಯೆಗೆ ಅನುಪಾತವಾಗಿ 2074 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕಗಳು, 2157 ಮತ ಖಾತ್ರಿ ಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. 944 ವಿದ್ಯುನ್ಮಾನ ಮತಯಂತ್ರ, 6 ನಿಯಂತ್ರಣ ಘಟಕ ಹಾಗೂ 28 ಮತಖಾತ್ರಿ ಯಂತ್ರಗಳನ್ನು ಹೆಚ್ಚುವರಿಯಾಗಿ ಮೀಸಲು ಇರಿಸಲಾಗಿದೆ. ಸೆಪ್ಟೆಂಬರ್ ಮಾಹೆಯಲ್ಲಿಯೇ ಮತಯಂತ್ರಗಳ ಮೊದಲ ಹಂತದ ಪರಿಶೀಲನೆ ಕಾರ್ಯ ನಡೆಸಲಾಗಿದೆ. ಎಲ್ಲಾ ಯಂತ್ರಗಳು ಸುಸ್ಥಿತಿಯಲ್ಲಿವೆ. ಚುನಾವಣೆ ವೀಕ್ಷಕರ ಸಮ್ಮುಖದಲ್ಲಿ ಎರಡನೇ ಹಂತದ ಯಾದೃಚ್ಛಿಕರಣ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.  


ಮೊಳಕಾಲ್ಮೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ 285 ಮತಗಟ್ಟೆಗಳಿವೆ. 356 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 370 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 260 ಮತಗಟ್ಟೆಗಳಿವೆ. 325 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 338 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 288 ಮತಗಟ್ಟೆಗಳಿವೆ. 360 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 374 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 287 ಮತಗಟ್ಟೆಗಳಿವೆ. 358 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 373 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 242 ಮತಗಟ್ಟೆಗಳಿವೆ. 302 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 314 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 299 ಮತಗಟ್ಟೆಗಳಿವೆ. 373 ವಿದ್ಯುನ್ಮಾನ ಮತಯಂತ್ರ ಹಾಗೂ ನಿಯಂತ್ರಣ ಘಟಕ ಹಾಗೂ 388 ಮತ ಖಾತ್ರಿಯಂತ್ರ ಹಂಚಿಕೆ ಮಾಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಗಳ ಯಾದೃಚ್ಛಿಕರಣ ಕಾರ್ಯ ತುಮಕೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜರುಗಲಿದೆ.
 
ತಂತ್ರಾಶ ಆಧಾರಿತ ಯಾದೃಚ್ಛಿಕರಣ ಕಾರ್ಯದ ಬಳಿಕ, ಕುಂಚಿಗನಾಳ್ ಗ್ರಾಮ ಸಮೀಪದ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ಮತಯಂತ್ರಗಳ ದಾಸ್ತಾನು ಇರಿಸಿದ ಕೊಠಡಿಗಳ ಬೀಗ ತೆರೆಯಲಾಯಿತು. ನಂತರ ಅವುಗಳನ್ನು ಎತ್ತುವಳಿ ಮಾಡಿ ಭೌತಿಕವಾಗಿ ಯಂತ್ರಗಳ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಹಾಯಕ ಚುನಾವಣೆ ಅಧಿಕಾರಿಗಳಾಗಿ ವಿವಿಧ ವಿಧಾನ ಸಭಾಕ್ಷೇತ್ರಗಳಿಗೆ ನೇಮಕವಾಗಿರುವ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಸನಗೌಡ ಕೋಟೂರ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಿ.ಆನಂದ, ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಹೆಚ್.ಎನ್.ಶಿವೇಗೌಡ, ಯೋಜನಾ ನಿರ್ದೇಶಕ ಎಂ.ಮಹೇಂದ್ರಕುಮಾರ್, ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ವಿವೇಕಾನಂದ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಯಶವಂತಕುಮಾರ್, ಗೌಸ್‌ಪೀರ್, ಲಕ್ಷ್ಮಮ್ಮ ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page