ಚಿತ್ರದುರ್ಗ:
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಹೆಚ್ಚಾಗಿದ್ದರೂ ಪರಿಷತ್ತಿನಲ್ಲಿ ಬಹುಮತವಿಲ್ಲ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲಾ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯ ಪ್ರವೃತ್ತರಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಗ್ನೆಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಪಕ್ಷ ಚುನಾವಣೆಯನ್ನು ಗಂಭೀರವಾಗಿ ತಗೆದುಕೊಂಡಿದ್ದು, ಮೇಲ್ಮನೆಯಲ್ಲಿ ನಮ್ಮ ಸಂಖ್ಯೆ ಹೆಚ್ಚಾಗಲು ನಮ್ಮ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರನ್ನು ಗೆಲ್ಲಿಸಬೇಕು ಎಂಬುದಾಗಿ ಅಭಿಪ್ರಾಯ ಪಟ್ಟರು.
ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಸೀಮಿತವಾಗಿರುತ್ತದೆ. ಆದ್ದರಿಂದ ನಮ್ಮ ಕಾರ್ಯಕರ್ತರು , ಮುಖಂಡರು ತಮ್ಮ ಊರಿನ ಶಿಕ್ಷಕರನ್ನು ಮಾತನಾಡಿಸಿ ಅವರನ್ನು ಕರೆತಂದು ಮತ ಹಾಕಿಸಿದರೆ ಸಾಕು ಎಂಬುದಾಗಿ ಅವರು ಸಲಹೆ ನೀಡಿದರು.
ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಮಾತನಾಡಿ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದರೂ, ವಿಧಾನಸಭೆಯಲ್ಲಿ ಪಾಸು ಮಾಡಿದ ಕಾಯ್ದೆಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡು ಕಾನೂನಾಗಲು ಬಹುಮತ ಮುಖ್ಯ. ಈ ನಿಟ್ಟಿನಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿದೆ ಎಂದರಲ್ಲದೆ,
ಈ ಹಿಂದೆ ಕಾಂಗ್ರೆಸ್ ವಿಧಾನಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ, ಈ ಬಾರಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ ಜಿಲ್ಲೆಗೆ ಉಸ್ತುವಾರಿ ಸಚಿವರು ಜವಬ್ದಾರರಾಗಿರುತ್ತಾರೆ ಹಾಗೆಯೇ ತಾಲ್ಲೂಕಿಗೆ ಶಾಸಕರು ಜವಬ್ದಾರಿ ತೆಗೆದುಕೊಳ್ಳಬೇಕು.
ನಾಳೆಯ ಒಳಿತಿಗಾಗಿ ಜಿಲ್ಲಾ ಮಟ್ಟದಲ್ಲಿ ವಾರ್ ರೂಂ ಸ್ಥಾಪಿಸಬೇಕು. ಪ್ರತಿ 5 ಶಿಕ್ಷಕರಿಗೆ ಒಬ್ಬ ಕಾರ್ಯಕರ್ತರನ್ನು ನಿಗದಿ ಮಾಡಬೇಕು ಎಂಬುದಾಗಿ ಅವರು ಸೂಚನೆ ನೀಡಿದರು.
ಶಿಕ್ಷಕರ ಕ್ಷೇತ್ರದ ಡಿ.ಟಿ.ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷ ಶಿಕ್ಷಕರ ಪರವಾಗಿದೆ. ಒಪಿಎಸ್ ಪರವಾಗಿ ಕಾಂಗ್ರೆಸ್ ಇದೆ. ಶಿಕ್ಷಕರು ನಿವೃತ್ತರಾದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಪಕ್ಷ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಎಂಬುದಾಗಿ ಅವರು ತಿಳಿಸಿದರು.
ಈವರೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಳಮಟ್ಟದ ಕಾರ್ಯಕರ್ತರು ಕೆಲಸ ಮಾಡಲು ಆಗಿಲ್ಲ. ಆದರೆ, ಈ ಬಾರಿ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಣೆ ಆಗಿರುವುದರಿಂದ ನಾನು ಮತ್ತು ಮಾಜಿ ಶಾಸಕಿ ಪೂರ್ಣಿಮಾ ಒಂದು ಸುತ್ತು ಪ್ರವಾಸ ಮಾಡಿದ್ದೇವೆ. ಈಗ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿರುವ ಶಿಕ್ಷಕ ಮತದಾರರ ಮನವೊಲಿಸಬೇಕು ಎಂಬುದಾಗಿ ಅವರು ತಿಳಿಸಿದರು.
ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯಧ್ಯಕ್ಷ ಬಿ.ಎನ್.ಚಂದ್ರಪ್ಪ, ಕ್ಷೇತ್ರದ ಉಸ್ತುವಾರಿ ಹುಸೇನ್, ಪ್ರಧಾನ ಕಾರ್ಯದರ್ಶಿ ಜೆ.ಜೆ. ಹಟ್ಟಿತಿಪ್ಪೇಸ್ವಾಮಿ, ಮುಖಂಡರುಗಳಾದ ಜಿ.ಎಸ್. ಮಂಜುನಾಥ್, ಹನುಮಲಿ ಷಣ್ಮುಖಪ್ಪ, ಯೋಗೀಶ್ ಬಾಬು, ರಘು, ಲಕ್ಷ್ಮಿಕಾಂತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments