ವಿಧಾನ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಹೇಳಿಕೆ ಶೇಂಗಾ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸಿ-ಭದ್ರಾ ಮೇಲ್ದಂಡೆ ಯೋಜನೆ : ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗದಿರಲಿ.

by | 14/12/23 | ಕರ್ನಾಟಕ


ಬೆಳಗಾವಿ ಸುವರ್ಣಸೌಧ,ಡಿ.14 ಭದ್ರಾ ಮೇಲ್ದಂಡೆ ಯೋಜನೆ ಘೋಷಣೆಯಾಗಿ 20 ವರ್ಷವಾಗುತ್ತಾ ಬಂದಿದೆ. ಇದರ ನಡುವೆ ಯೋಜನೆಯ ಮೇಲ್ಭಾಗದ ಪ್ರದೇಶದಲ್ಲಿ ಪರಿಷ್ಕøತ ಯೋಜನೆಗಳನ್ನು ಸೇರಿಸಿ, ಕೆರೆಗಳಿಗೆ ನೀರು ತುಂಬಿಸುವ ಹಾಗೂ ನೀರಾವರಿ ಯೋಜನೆಗಳನ್ನು ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಕಳವಳ ವ್ಯಕ್ತಪಡಿಸಿದರು.


ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆಯ ಚರ್ಚೆಯ ವೇಳೆ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಹಾಗೂ ಜಲಸಂಪನ್ಮೂಲ ಸಚಿವರು ಈ ಯೋಜನೆಗಳಿಗೆ ಮಿತಿ ನಿಗದಿ ಮಾಡಿ, ಶತ ಶತಮಾನಗಳಿಂದ ವಂಚಿತವಾಗಿರುವ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಿಗೆ ನ್ಯಾಯ ಒದಗಿಸಬೇಕು. ಆರಂಭದಲ್ಲಿ ರೂ.2,500 ಕೋಟಿ ಇದ್ದ ಭದ್ರಾ ಮೇಲ್ದಂಡೆ ಯೋಜನೆ ವೆಚ್ಚೆ ಇಂದು ರೂ.21,000 ಕೋಟಿಗೆ ಏರಿಕೆಯಾಗಿದೆ. ಇದುವರೆಗೂ ರೂ.7,500 ಕೋಟಿ ವೆಚ್ಚವಾಗಿದೆ. ಆದರೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಿಗೆ ಯೋಜನೆ ಲಾಭವಾಗಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯ ಆಧರಿಸಿ ಕ್ಷೇತ್ರದ 2,25,151 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಇದೇ ಯೋಜನೆಯಲ್ಲಿ ಕ್ಷೇತ್ರದ 367 ಕೆರೆಗಳಿಗೆ ನೀರು ತುಂಬಿಸಲಾಗುವುದು.
ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಭದ್ರಾ ಮೆಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ರೂ.5300 ಕೋಟಿ ಅನುದಾನ ಮೀಸಲು ಇರಿಸಿದೆ. ಇದುವರೆಗೂ ಈ ಅನುದಾನ ಹಣ ರಾಜ್ಯ ಸರ್ಕಾರಕ್ಕೆ ಬಿಡುಗಡೆಯಾಗಿಲ್ಲ. ಕೇಂದ್ರ ಅನುದಾನ ದೊರಕಿದರೆ ಯೋಜನೆ ಕಾಮಗಾರಿಗೆ ವೇಗ ದೊರಯಲಿದೆ ಎಂದು ಅಭಿಪ್ರಾಯಪಟ್ಟರು.

*ರೂ. 50 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ:*
2019-20ರ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಚಳ್ಳಕೆರೆ, ಮೊಳಕಾಲ್ಮೂರು, ಶಿರಾ, ಪಾವಗಡ ಹಾಗೂ ಮಧುಗಿರಿ ತಾಲ್ಲೂಕುಗಳ ಅಭಿವೃದ್ಧಿ ರೂ.50 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಮುಂದೆ ಬಂದ ಸರ್ಕಾರಗಳು ಅನುದಾನವನ್ನು ತಡೆ ಹಿಡಿದಿವೆ. ಕೂಡಲೇ ಈ ಅನುದಾನವನ್ನು ಒದಗಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಆಗ್ರಹಿಸಿದರು.

*ಶೇಂಗಾ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸಿ:* ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಬಾರಿ ಸಂಪೂರ್ಣ ಬರ ಆವರಿಸಿದೆ. ಒಟ್ಟು 85,680 ಹೆಕ್ಟೇರ್ ಕೃಷಿ ಭೂಮಿಯಲ್ಲಿ 72,650 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯುತ್ತಾರೆ. ಈ ಬಾರಿ ಬೆಳೆ ಸಂಪೂರ್ಣ ಹಾಳಗಿದ್ದು, ಸರ್ಕಾರ ಶೇಂಗಾ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಪರುಶುರಾಂಪುರವನ್ನು ತಾಲ್ಲೂಕು ಕೇಂದ್ರವಾಗಿ ಮಾಡಬೇಕು. ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ ಅನುದಾನ ನೀಡಬೇಕು. ತಾಲ್ಲೂಕಿ ಪ್ರತಿ ಹೋಬಳಿಯಲ್ಲೂ ಗೋಶಾಲೆ ತರೆಯಲು ಅನುಮತಿಸಿ ಸಹಾಯ ಒದಗಿಸಬೆಕು. ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳನ್ನು ಮಂಜೂರು ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕೋರಿದರು. ಬರಗಾಲದ ಪರಿಹಾರ ಮೊತ್ತವನ್ನು ಸ್ವಯಂಚಾಲಿತವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕಂದಾಯ ಸಚಿವ ಕೃಷ್ಣಭೈರೇಗೌಡ ಚಳ್ಳಕೆರೆ ತಾಲ್ಲೂಕು ಆಯ್ಕೆ ಮಾಡಿಕೊಂಡಿದ್ದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page