ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪರಶುರಾಂಪುರ ನಾಡಕಚೇರಿ ಮುಂದೆ ಅಖಂಡ ಕರ್ನಾಟಕ. ರಾಜ್ಯ ರೈತ ಸಂಘ ಪ್ರತಿಭಟನೆ.

by | 20/05/24 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ಯೆ ಮೇ20 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪರಶುರಾಂಪುರ ನಾಡಕಚೇರಿ ಮುಂದೆ ಅಖಂಡ ಕರ್ನಾಟಕ. ರಾಜ್ಯ ರೈತ ಸಂಘ ಪ್ರತಿಭಟನೆ ಮಾಡಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಸರಕಾರ ಬರಗಾಲ ಎಂದು ಘೋಷಣೆ ಮಾಡಿ ಬೆಳೆ ಪರಿಹಾರ.ಬೆಳೆವಿಮೆ ಸರ್ಕಾರ ಪ್ರೋತ್ಸಾಹ ಧನ ಅಥವಾ ಸಹಾಯ
ಧನವನ್ನು ರೈತರ, ಜನರ ಜೀವನೋಪಾಯಕ್ಕೆ
ನೀಡುತ್ತದೆ. ಹೀಗಾಗಿ ಬರ ಪರಿಹಾರ ಹಣ ಸೇರಿ
ಸರ್ಕಾರದ ಯಾವುದೇ ಪ್ರೋತ್ಸಾಹ ಧನ,
ಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ)
ಸಂದಾಯ ಮಾಡುವ ಹಣವನ್ನು ಬ್ಯಾಂಕ್ ಸಾಲದ
ಖಾತೆಗೆ ಜಮೆ ಮಾಡಬಾರದು ಎಂದು ಈಗಾಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಹ ಬ್ಯಾಂಕ್ ಅಧಿಕಾರಿಗಳು ಮಾತ್ರ ಇವರ ಮಾತಿಗೆ ಕವಡೆಕಾಸು ಬೆಲೆ ಕೊಡದೆ ರೈತರ ಖಾತೆಗಳಲ್ಲಿ ಹಣವನ್ನು ಮುಟ್ಟುಗೋಲು ಹಾಕಿ ಬ್ಯಾಕ್ ಖಾತೆಯನ್ನು ಲಾಕ್ ಮಾಡಲಾಗಿದೆ ಕೂಡಲೆ ರೈತರ ಬ್ಯಾಕ್ ಖಾತೆ ಓಪನ್ ಮಾಡಬೇಕು ಬ್ಯಾಂಕ್ ಸಾಲಕ್ಕೆ ಜಮ ಮಾಡಿಕೊಳ್ಳದಂತೆ ಸೂಚನೆ ನೀಡಬೇಕು. ಇನ್ನು ಸಾಕಷ್ಟು ರೈತರು ಬೆಳೆ ವಿಮೆ.ಬೆಳೆ ಪರಿಹಾರ ಬಾರದ ರೈತರು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದಾರೆ ಬೆಳೆ ವಿಮೆ ಬೆಳೆ ಪರಿಹಾರ ಬಾರದ ರೈತರ ಖಾತೆಗೆ ಹಣ ಜಮೆ ಮಾಡಬೇಕು.ಗ್ರಾಮ ಲೆಕ್ಕ ಅಧಿಕಾರಿಗಳು ಗ್ರಾಮೀಣ ಪ್ರದೇಶಕ್ಕೆ ಬಾರದೆ ನಾಡ ಕಚೇರಿಯಲ್ಲಿರುತ್ತಾರೆ ದಿನಕ್ಕೆ ಎರಡು ಗಂಟೆಯಾದರೂ ಹಳ್ಳಿಯಲ್ಲಿರ ಬೇಕು. ರೈತರ ದಾಖಲೆ ಸಂಗ್ರಹ ಮಾಡಿರು ನಾಡ ಕಚೇರಿ ಶಿಥಿಲವಾಗಿದ್ದು ಸೋರುತ್ತಿದೆ ಸೋರುವುದನ್ನು ತಡೆಯಲು ತಾಡಪಾಲ್ ಹಾಕಲಾಗಿದೆ ಕೂಡಲೆ ನೂತನಕಚೇರಿ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದಾರೆ.

ತಹಶೀಲ್ದಾರ್ ರೇಹಾನ್ ಪಾಷ ಮನವಿ ಸ್ವೀಕರಿಸಿ ಮಾತನಾಡಿ ನಾಳೆಯಿಂದಲೇ ಗ್ರಾಮಳಲ್ಲಿ ಕರ್ತವ್ಯ ನಿರ್ವಹಿಸುವಂತೆ ನೋಟಿಸ್ ಜಾರಿಮಾಡಲಾಗುವುದು. ಬ್ಯಾಂಕ್ ವ್ಯವಸ್ಥಾಪಕರನ್ನು ಕರೆಸಿ ಬೆಳೆ ಪರಿಹಾರ ಬೆಳೆವಿಮೆ.ಸಾಮಾಜಿಕ ಭದ್ರತಾಪಿಂಚಿಣಿ ಹಣವನ್ನು ರೈತರ ಖಾತೆಗೆ ಜಮ ಮಾಡಿಕೊಳ್ಳದಂತೆ ಸೂಚನೆ ನೀಡಿದರು ಬೆಳೆ ವಿಮೆ ಬೆಳೆ ಪರಿಹಾರ ಬಾರದ ರೈತರ ಮಾಹಿತಿಯನ್ನು ಸಂಬಂದ ಪಟ್ಟ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಅದ್ಯಕ್ಷ ಚಿಕ್ಕಣ್ಣ.ಚೌಳೂರು ಪ್ರಕಾಶ್.ಜಂಪಣ್ಣ.ಹನುಮಂತರಾಯ.ವೆಂಕರಮಣ್ಣಪ್ಪ.ಖಾದರ್ ಬಾಷ.ನಾಗೇಂದ್ರಪ್ಪ.ನವೀನ್ ಗೌಡ.ತಿಮ್ಮಣ್ಣ.ಪರಮೇಶ್ವರಪ್ಪ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page