ವಿಶೇಷ ಕನ್ನಡ ರಾಜ್ಯೋತ್ಸವ ಆಚರಣೆಗೆ ಸುತ್ತೋಲೆ ಹೊರಡಿಸಿದ ಸರಕಾರ.

by | 30/10/23 | ಸುದ್ದಿ


ಚಳ್ಳಕೆರೆ ಅ.30.ನವಂಬರ್ 1ರಂದು ಕನ್ನಡ ರಾಜ್ಯೊತ್ಸವ ಆಷರಣೆಗೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ
ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು
ಉದ್ದೇಶಿಸಲಾಗಿದೆ. ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ
ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ
ವತಿಯಿಂದ ಈ ಕೆಳಕಂಡ ಅಂಶಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು
ಹಾಗೂ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಿದೆ.
. ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ
ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ
ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು.
ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ)
ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ
ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ
ಗೌರವ ಸಲ್ಲಿಸಲು ಮನವಿ ಮಾಡುವುದು.
. ನವೆಂಬರ್ 1 ರ ಸಂಜೆ 5.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ
ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ
ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು.
. ನವೆಂಬರ್ 1 ರ ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ
ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ)
ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.
ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ
ಎಲ್ಲಾ ನಾಗರಿಕರ
ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ
ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವರಾಜ ಎಸ್ ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ
ಮತ್ತು ಸಂಸ್ಕೃತಿ ಸಚಿವರು ಹಾಗೂ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *