ವಿಶ್ರಾಂತ ನ್ಯಾಯಾಧೀಶ ಹೆಚ್.ಬಿಲ್ಲಪ್ಪ ನಿವಾಸದಲ್ಲಿ ಸತ್ಸಂಗ ಕಾರ್ಯಕ್ರಮ.

by | 12/09/23 | ಸಾಮಾಜಿಕ


ಹೊಸದುರ್ಗ ಸೆ.12.ಪ್ರತಿಯೊಬ್ಬರೂ ಪ್ರೀತಿ, ವಿಶ್ವಾಸದಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು’ ಎಂದು ಜಪಾನಂದ ಮಹರಾಜ್ ಸ್ವಾಮೀಜಿ ಸಲಹೆ ನೀಡಿದರು.
ಹೊಸದುರ್ಗ ಭಗೀರಥ ನಗರದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಎಚ್ ಬಿಲ್ಲಪ್ಪ ರವರ ಮನೆಯ ಆವರಣದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಿವೃತ್ತ ನ್ಯಾಯಾಧೀಶರ ಮನೆಯಲ್ಲಿ ಸುಂಧರವಾದ ಸತ್ಸಂಗ ಕೊಠಡಿಯನ್ನು ನಿರ್ಮಿಸಿರುವುದು ಶ್ಲಾಘನೀಯ. ಸತ್ಸಂಗದಲ್ಲಿ ಭಾಗವಹಿಸುವುದರಿಂದಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ ಮನಸ್ಸಿಗೆ ನೆಮ್ಮದಿ.ಶಾಂತಿದೊರೆಯುತ್ತದೆ. ಆಡಂಬರದ ಭಕ್ತಿಯಿಂದ ಯಾವುದೇ ಪ್ರಯೋಜನವಿಲ್ಲ. ಸತ್ಯದ ಹಾದಿಯಲ್ಲಿ ಸಾಗಬೇಕು. ಧರ್ಮದ ನಡೆಯಲ್ಲಿಯೇ ಪಯಣಿಸಬೇಕು. ಎಲ್ಲರಲ್ಲೂ ವಿವೇಚನಾ ಶಕ್ತಿ ಇದೆ. ಆದರೆ ಸಾವಿರಾರು ಬಗೆಯ ಮನಸ್ಸುಗಳ ನಡುವೆ ಹೊಂದಿಕೊಂಡು ಜೀವಿಸುವಾಗ ತಪ್ಪುಗಳು ಸಂಭವಿಸಬಹುದು. ಅಂತಹ ಸಂದರ್ಭದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡು ಸಮಚಿತ್ತದಿಂದ ವರ್ತಿಸಬೇಕಿದೆ’ ಎಂದರು.
ಸಮಚಿತ್ತದಿಂದ ಬದುಕಲು ಏಕಾಗ್ರತೆಯ ಅವಶ್ಯಕತೆಯಿದೆ. ವಿಶ್ರಾಂತ ನ್ಯಾಯಮೂರ್ತಿ ಶ್ರೀ ಹೆಚ್ ಬಿಲ್ಲಪ್ಪ ರವರ ಅಹ್ವಾನದ ಮೇರೆಗೆ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ ಎಂದರು ನಿವೃತ್ತ ನ್ಯಾಯಾಧೀಶ ಹೆಚ್.ಬಿಲ್ಲಪ್ಪನವರ ಮನೆಯಲ್ಲಿ ಸುಂದರವಾದ ಆದ್ಯಾತ್ಮಿಕ ಕೇಂದ್ರ ಸ್ಥಾಪನೆ ಮಾಡಿದ್ದು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಂಡು ನೆಮ್ಮದಿಯ ಜೀವನ ನಡೆಸುವಂತೆ ತಿಳಿಸಿದರು. . ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿಲ್ಲಪ್ಪ ಪ್ಪ ಮಾತನಾಡಿ ಶ್ರೀರಾಮಕೃಷ್ಣ ಸೇವಾಶ್ರಮದ ಅತ್ಯಂತ ನನಗೆ ನಿಕಟವರ್ತಿಗಳು ಹಾಗೂ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಮತ್ತು ಶ್ರೀ ಶಾರದಾದೇವಿ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಗಳ ಕಾನೂನು ಹಾಗೂ ಆಡಳಿತಾತ್ಮಕ ವಿಚಾರಗಳ ಮುಖ್ಯ ಸಲಹೆಗಾರರಾಗಿ ಪೂಜ್ಯ ಸ್ವಾಮೀಜಿ ಜಪಾನಂದ ಜಿ ಮಹಾರಾಜರವರಿಗೆ ಎಲ್ಲ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಹೊಸದುರ್ಗದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸತ್ಸಂ ಗ ಕಾರ್ಯಕ್ರಮದ ಸ್ವಾಗತ ಮಾಡಿದರು. ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರು ಮಹಾ ಮಾತೆ ಶ್ರೀ ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರಿಗೆ ಪೂಜೆಯನ್ನು ಸಲ್ಲಿಸಿ ನ್ಯಾಯಮೂರ್ತಿಗಳು ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ತಮ್ಮ ಸಿರಿ ಕಂಠದಿಂದ ಶುಶ್ರಾವ್ಯವಾಗಿ ಅನೇಕ ಭಕ್ತಿಗೀತೆಗಳನ್ನು ಹಾಗೂ ಗೌರವಾನ್ವಿತ ನ್ಯಾಯಮೂರ್ತಿಗಳ ಇಚ್ಛೆಯಂತೆ ಸ್ವಾಮಿ ವಿವೇಕಾನಂದರು ರಚಿಸಿದ ಸನ್ಯಾಸಿ ಗೀತೆಗಳನ್ನು ವೇದಘೋಷ ಹಾಗೂ ದಾಸರ ಪದಗಳನ್ನು ಸಹ ಹಾಡಲಾಯಿತು ಸತ್ಸಂಗ ಕಾರ್ಯಕ್ರಮದಲ್ಲಿ ಹಲವರು ಭಾವವಹಿಸಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *