ಹಿರಿಯೂರು:
ಜಾಗತಿಕ ತಾಪಮಾನದ ಅರಿವು ಈ ವರ್ಷ ಎಲ್ಲರಿಗೂ ಗೊತ್ತಾಗಿದೆ. ಮುಂದಿನ ದಿಗಳಲ್ಲಿ ಈ ಭೂಮಿಯ ಮೇಲೆ ಮಾನವ ಜೀವರಾಶಿ, ಸಸ್ಯರಾಶಿ ಪ್ರಾಣಿ- ಪಕ್ಷಿಗಳು ಉಳಿಯಬೇಕಾದರೆ ಪ್ರತಿಯೊಬ್ಬರೂ ಒಂದು ಸಸಿ ನೆಡುವ ಮೂಲಕ ನಮ್ಮ ಸುತ್ತಲಿನ ಪರಿಸರ ಕಾಪಾಡಿಕೊಳ್ಳಬೇಕು ಎಂಬುದಾಗಿ ವಾಣಿ ಸಕ್ಕರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಧರಣೇಂದ್ರಯ್ಯ ತಿಳಿಸಿದರು.
ತಾಲ್ಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರೌಢಶಾಲಾ ಅವರಣದಲ್ಲಿ ರೋಟರಿ ಸಂಸ್ಥೆ ಹಾಗೂ ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ವಾಟರ್ ಫಿಲ್ಟರ್ ಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದು ಭೂಮಿಯ ಮೇಲೆ ಶೇಕಡ 33 ರಷ್ಟು ಕಾಡು ಇರಬೇಕು. ಆದರೆ ಇಂದು ಇರುವುದು ಕೇವಲ ಶೇಕಡ 22 ರಷ್ಟು ಹಾಗಾಗಿ ಕಾಡನ್ನು ನಾಶ ಮಾಡದೆ, ಉಳಿಸುವುದು ಅನಿವಾರ್ಯವಾಗಿದೆ ಹಾಗೂ ಅಂತರ್ಜಲವನ್ನು ಹೆಚ್ಚಿಸಬೇಕಾಗಿದೆ ಎಂಬುದಾಗಿ ಅವರು ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಬಿ.ಕೆ. ನಾಗಣ್ಣ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಂಧ್ರಪ್ರದೇಶದ ಡಾ. ಮುಲ್ಲಂಗಿ ರಮೇಶ ಹಾಗೂ ಡಾ.ಮುಲ್ಲಂಗಿ ಜಗನ್ನಾಥ ಸ್ಮರಣಾರ್ಥ ಸುಮಾರು 70000 ರೂ. ಬೆಲೆ ಬಾಳುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದಾನ ಮಾಡಲಾಗಿದೆ ಇದನ್ನು ಅವರ ಬಂಧುಗಳಾದ ಶ್ರೀಮತಿ ಬಿ.ಕೆ.ಅಮೃತನಾಗಣ್ಣ ರವರಿಂದ ಉದ್ಘಾಟನೆ ಮಾಡಿಸಲಾಗಿದೆ ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಜವಗೊಂಡನಹಳ್ಳಿ ಪ್ರೌಢ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲರಾದ ರಂಗನಾಯ್ಕ ವಹಿಸಿದ್ದರು.ವೇದಿಕೆಯಲ್ಲಿ ರೋಟರಿ ಅಧ್ಯಕ್ಷರಾದ ದೇವರಾಜ ಮೂರ್ತಿ, ಶ್ರೀಮತಿ ಶಶಿಕಲಾ ರವಿಶಂಕರ್, ರೋಟರಿ ಕಾರ್ಯದರ್ಶಿ ಜೋಗಪ್ಪ, ಖಜಾಂಚಿ ಸಣ್ಣ ಭೀಮಣ್ಣ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments