ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಸಹಾಯಧನ ವಿತರಣೆ

by | 08/05/24 | ಸುದ್ದಿ


ಹಿರಿಯೂರು :
ಸಾಮಾಜಿಕವಾಗಿ, ಜಾತ್ಯತೀತವಾಗಿ, ಆರ್ಥಿಕವಾಗಿ ಹಿಂದುಳಿದವರ ಆರೋಗ್ಯ ಸುರಕ್ಷತೆಗಾಗಿ ನಿರಂತರವಾಗಿ ಆರೋಗ್ಯ ಸೇವಾ ಶಿಬಿರಗಳನ್ನು ನಡೆಸುತ್ತಾ ಅನೇಕ ಸಾಮಾಜಿಕ ಸೇವೆಗಳನ್ನು ನಿಸ್ವಾರ್ಥ ಭಾವನೆಯಿಂದ ನಡೆಸುತ್ತಾ ಬಂದಿದೆ ಎಂಬುದಕ್ಕೆ ರಾಜ್ಯಪಾಲರು ಪ್ರಶಸ್ತಿ ಗೌರವಗಳನ್ನು ನೀಡಿರುವುದೇ ಸಾಕ್ಷಿಯಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಹೆಚ್.ಎಸ್. ಸುಂದರರಾಜ್ ಹೇಳಿದರು.
ನಗರದ ಗಾಂಧಿವೃತದ ಸತ್ಯಂ ಟೆಕ್ಸ್ ಟೈಲ್ಸ್ ಆವರಣದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಬೀದಿಬದಿಯಲ್ಲಿ ಕುಳಿತು ಪ್ರತಿನಿತ್ಯ ವ್ಯಾಪಾರ-ವ್ಯವಹಾರ ಮಾಡುವ ಹತ್ತುಜನ ವ್ಯಾಪಾರಿಗಳಿಗೆ ಸಹಾಯಧನ ವಿತರಿಸಿ ಅವರು ಮಾತನಾಡಿದರು.


ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ, ಇನ್ಹರ್ ವೀಲ್ ಸಂಸ್ಥೆ ಹಾಗೂ ದಾನಿಗಳ ಸಹಕಾರದಲ್ಲಿ ಅನೇಕ ಸಾಮಾಜಿಕ ಸೇವಾ ಕಾರ್ಯಗಳು, ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸಿಕೊಂಡು ಬಂದಿದ್ದೇವೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ನಂತರ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು, ಹಂಪಲುಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಆಸ್ಪತ್ರೆಗೆ ಬರುವವರಿಗೆ ಮತ್ತು ಅಲ್ಲಿನ ಒಳರೋಗಿಗಳಿಗೆ ಉಚಿತ ಉಪಹಾರ ಮತ್ತು ಮಜ್ಜಿಗೆಯನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಆರ್.ವೆಂಕಟೇಶ್, ವೈಸ್ ಚೇರ್ಮನ್ ಎ.ರಾಘವೇಂದ್ರ, ಸಣ್ಣಭೀಮಣ್ಣ, ಬಿ.ಕೆ.ನಾಗಣ್ಣ, ಟಿ.ಎಸ್.ಮಲ್ಲೇಶಪ್ಪ, ಕೆ.ಎಸ್.ಮಹಾಬಲೇಶ್ವರಶೆಟ್ಟಿ, ಪಿ.ಆರ್.ಸತೀಶ್ ಬಾಬು, ಓಂಕಾರ್, ರಾಜೇಶ್, ಪರಮೇಶ್ವರ ಭಟ್, ತ್ರೈಯಂಬಕಮೂರ್ತಿ, ಶಶಿಕಲಾರವಿಶಂಕರ್, ಗೀತಾರಾಧಾಕೃಷ್ಣ, ರವಿಕುಮಾರ್, ಹೆಚ್.ವೆಂಕಟೇಶ್, ವಿಶ್ವನಾಥ್, ಎಂ.ವಿ.ಹರ್ಷ, ಕೋ ಆರ್ಡಿನೇಟರ್ ಗಳಾದ ಸಿ.ನಾರಾಯಣ ಆಚಾರ್, ಎಚ್.ಎಸ್.ರಾಧಾಕೃಷ್ಣ, ಅಖಿಲ ಭಾರತ ವಿಶ್ವಕರ್ಮ ಪರಿಷತ್ ನವ ದೆಹಲಿ ರಾಜ್ಯ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಸೇರಿದಂತೆ ಬೀದಿಬದಿಯ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page