ವೈದ್ಯರ ಸಲಹೆ ಇಲ್ಲದೆ ರೋಗ ನಿರೋಧಕ ಔಷಧಿಗಳನ್ನು ಸೇವಿಸಬೇಡಿ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರೆಡ್ಡಿ

by | 18/11/23 | ಆರೋಗ್ಯ


ಬಳ್ಳಾರಿ,ನ.18
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಚಾಲ್ತಿಯಲ್ಲಿರುವ ರೋಗ ನಿರೋಧಕ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸವರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆಂಟಿಮೈಕ್ರೋಬಿಯಲ್ ಜಾಗೃತಿ ಸಪ್ತಾಹ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಜ್ಞಾವಿಧಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಂಭೀರ ಕಾಯಿಲೆಗಳ ರೋಗ ನಿಯಂತ್ರಣಕ್ಕಾಗಿ ಬ್ಯಾಕ್ಟೀರಿಯ ವೈರಸ್‍ಗಳು, ಶೀಲಿಂಧ್ರಗಳು ಮತ್ತು ಸೂಕ್ಷ್ಮಾಣು ಜೀವಿಗಳನ್ನು ಔಷಧಿ ರೂಪದಲ್ಲಿ ಬಳಸಲಾಗುತ್ತದೆ. ಕೆಲವು ಬಾರಿ ಅಗತ್ಯವಿಲ್ಲದ ಔಷಧಿಗಳನ್ನು ಬಳಸಿದಾಗ ಅಥವಾ ಹೆಚ್ಚು ಡೋಸ್ ಬಳಸಿದಾಗ ಔಷಧಿಗಳು ದುಷ್ಪರಿಣಾಮಕಾರಿಯಾಗಿ ಬದವಲಾವಣೆಯಾಗುವ ಸಂಭವ ಇರುತ್ತದೆ ಎಂದು ತಿಳಿಸಿದರು.
ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲದೇ ಪ್ರಾಣಿಗಳಿಗೂ ಮತ್ತು ಸುತ್ತಲಿನ ಪರಿಸರಕ್ಕೂ ಇದರ ಪ್ರಭಾವ ಉಂಟಾಗಿ ಹಾನಿಕಾರಕವಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುವಾಗ ವೈದ್ಯರ ಸಲಹೆ ಮೇರೆಗೆ ಮಾತ್ರ ಬಳಸಬೇಕು ಎಂದು ಅವರು ವಿನಂತಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಅವರು ಮಾತನಾಡಿ, ಇತ್ತೀಚಿಗೆ ಕೋವಿಡ್ ಸನ್ನಿವೇಶದಲ್ಲಿ ಚಿಕಿತ್ಸೆ ಪಡೆಯುವ ಕ್ಷಯರೋಗಿಗಳು ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಔಷಧಿಯನ್ನು ಮಧ್ಯದಲ್ಲಿ ನಿಲ್ಲಿಸಿದಾಗ ರೋಗಿಗೆ ಪುನಃ ಕ್ಷಯರೋಗ ಬಂದಲ್ಲಿ ಬಹು ನಿರೋಧಕ ಔಷಧಿಯನ್ನು ಬಳಸಿದಾಗ ಅಡ್ಡಪರಿಣಾಮ ಉಂಟಾಗುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದರು.
ಬಹು ನಿರೋಧಕ ಔಷಧಿಗಳ ಉತ್ಪತ್ತಿ ಮಾಡುವಾಗಲೂ ಸಹ ಪರಿಸರ ಮೇಲೆ ಹಾನಿಕಾರಕವಾಗುವ ಸಾಧ್ಯತೆಗಳಿರುವುದರಿಂದ ದಯವಿಟ್ಟು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ಸೇವಿಸಬಾರದು ಎಂದು ತಿಳಿಸಿದ ಅವರು, ರೋಗಗಳು ಬರದಂತೆ ತಡೆಯಲು ಮುಂಜಾಗೃತೆ ವಹಿಸಬೇಕು, ಆಗಾಗ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಸ್ವಚ್ಛಗೊಳಿಸಬೇಕು, ಜನಸಾಂದ್ರತೆಯಲ್ಲಿ ಮಾಸ್ಕ್ ಧರಿಸಿರಿ, ವಯೋವೃದ್ಧರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ವಿಎಸ್‍ಕೆ ವಿವಿಯ ಕುಲಸಚಿವ ಎಸ್.ಎನ್.ರುದ್ರೇಶ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆಸ್ಪತ್ರೆ ತಜ್ಞ ವೈದ್ಯರಾದ ಡಾ.ಯೋಗಾನಂದ ರೆಡ್ಡಿ, ಡಾ.ಸಂಗೀತಾ, ಡಾ.ಬಾಲ ವೆಂಕಟೇಶ್, ಡಾ.ವಿಶಾಲಾಕ್ಷಿ, ಡಾ.ಸುನಿಲ್, ಡಾ.ಶ್ರೀಧರ್, ಡಾ.ವಿಜಯಲಕ್ಷ್ಮಿ, ಡಾ.ಭಾವನಾ, ಡಾ.ಬಸವಪ್ರಭು, ಡಾ.ಪ್ರಶಾಂತ, ಡಾ.ವಿಶಾಲಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಆಡಳಿತ ಅಧಿಕಾರಿ ಮೆಹಬೂಬ್ ಖಾನ್, ಅಧೀಕ್ಷಕ ರವಿಚಂದ್ರನ್, ವಾಹನ ಅಭಿಯಂತರರ ವಿಜಯಕುಮಾರ್, ಶೂಶ್ರುಷಕ ಅಧೀಕ್ಷಕಿ ಸೇಲಿನಾ, ಎಕ್ಸ್-ರೇ ತಂತ್ರಜ್ಞೆ ಚಿತ್ರಶೇಖರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page