ಚಳ್ಳಕೆರೆ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು ಇದರ ನಿರ್ಮೂಲನೆಗಾಗಿ ನಗರದ ಪೋಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಉದ್ದೇಶಿಸಿದ್ದು ಔಷಧಿ ಹಾಗೂ ಪುಸ್ತಕ ಮಳಿಗೆ ವ್ಯಾಪಾರಸ್ಥರು ಸಹಕರಿಸಬೇಕು ಎಂದು ವೃತ ನಿರೀಕ್ಷಕ ಆರ್ ಎಫ್ ದೇಸಾಯಿ ಮನವಿ ಮಾಡಿದರು.
ನಗರದ ಪೊಲೀಸ್ ಠಾಣೆಯಲ್ಲಿ ಔಷಧಿ ಅಂಗಡಿ ಪಂಚರ್ ಶಾಪ್ ಹಾಗೂ ಪುಸ್ತಕ ವ್ಯಾಪಾರಿಗಳ ಸಭೆ ನಡೆಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕೆಲ ಸಾಮಾಜಿಕ ಜಾಲತಾಣಗಳ ಮತ್ತು ದುಷ್ಟ ಸ್ನೇಹಿತರ ಸಹವಾಸದಿಂದ ತಮ್ಮ ವಿದ್ಯಾಭ್ಯಾಸದ ಒತ್ತಡಗಳ ನಿವಾರಣೆಗಾಗಿ ಅತಿ ವೇಗವಾಗಿ ಮಾದಕ ವ್ಯಸನಗಳತ್ತ ಗಮನಹರಿಸುತ್ತಿದ್ದಾರೆ ಇದರಿಂದಾಗಿ ಸಾವು ನೋವುಗಳ ಪ್ರಕರಣ ಸೇರಿದಂತೆ ದುಷ್ಚಟಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ತಪ್ಪಿಸುವ ದೃಷ್ಟಿಯಿಂದ ಪೊಲೀಸ್ ಇಲಾಖೆ ನಿಯಮಗಳನ್ನು ಜಾರಿಗೊಳಿಸಲಿದ್ದು ವಿದ್ಯಾರ್ಥಿಗಳು ಪುಸ್ತಕ ಮಳಿಗೆಗಳಿಗೆ ಹಾಗೂ ಔಷಧಿ ಅಂಗಡಿಗಳಿಗೆ ಬಂದು ತಪ್ಪು ಶಾಹಿ ಕೇಳುವುದು ವೈದ್ಯರ ಸಲಹೆ ಪಡೆಯದೆ ಮಾತ್ರೆಗಳನ್ನು ತೆಗೆದುಕೊಳ್ಳುವುದು ಇಂತಹ ಪ್ರಕರಣಗಳು ಹೆಚ್ಚಾಗಿದ್ದು ಪೋಷಕರೊಂದಿಗೆ ಬಂದರೆ ಮಾತ್ರ ವಿತರಿಸಬೇಕು ಅಂತಹ ಯುವಕರು ಅಥವಾ ವಿದ್ಯಾರ್ಥಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ವಿದ್ಯಾರ್ಥಿ ಬುಕ್ ಸ್ಟೋರ್ ಮಾಲಿಕ ಕೀರ್ತಿ ಮಾತನಾಡಿ ವಿದ್ಯಾರ್ಥಿಗಳಿಗೆ ತಪ್ಪು ಶಾಹಿ ತರಲು ಶಾಲೆಗಳ ಶಿಕ್ಷಕರು ಹೇಳಿ ಕಳುಹಿಸುತ್ತಿದ್ದಾರೆ ಹೀಗಾಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದಾಗ ಇಂತಹ ಪ್ರಕರಣಗಳನ್ನು ಮಟ್ಟ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಠಾಣೆಯ ಉಪನಿರೀಕ್ಷಕರಾದ ಧರ್ರೆಪ್ಪ ಶಿವರಾಜ್ ಬುಕ್ ಸ್ಟಾಲ್ ಮಾಲೀಕರಾದ ರವಿಚಂದ್ರ ಕೀರ್ತಿ ಫಣಿ ಸೇರಿದಂತೆ ಔಷಧಿ ಅಂಗಡಿಗಳ ಮಾಲೀಕರು ಪಂಚರ್ ಶಾಪ್ ಮಾಲೀಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments