ವ್ಯಾಪ್ತಿಯ ಖುಷ್ಕಿ-ನೀರಾವರಿ ಜಮೀನುಗಳುಳ್ಳ ಎಲ್ಲಾ ವರ್ಗದ ರೈತರಿಗೂ ಸರ್ಕಾರ ಬೆಳೆನಷ್ಟ ಪರಿಹಾರ ಮತ್ತು ಬೆಳೆವಿಮೆ ಮಂಜೂರು ಮಾಡಬೇಕು ಎಂಬ ಮನವಿ ಪತ್ರವನ್ನು ಚಿತ್ರದುರ್ಗ ಡಿಸಿ ವೆಂಕಟೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು

by | 22/05/24 | ಪ್ರತಿಭಟನೆ


ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆ ಮತ್ತು ಹೊಳಲ್ಕೆರೆ ತಾಲೂಕು ವ್ಯಾಪ್ತಿಯ ಖುಷ್ಕಿ-ನೀರಾವರಿ ಜಮೀನುಗಳುಳ್ಳ ಎಲ್ಲಾ ವರ್ಗದ ರೈತರಿಗೂ ಸರ್ಕಾರ ಬೆಳೆನಷ್ಟ ಪರಿಹಾರ ಮತ್ತು ಬೆಳೆವಿಮೆ ಮಂಜೂರು ಮಾಡಬೇಕು ಎಂಬ ಮನವಿ ಪತ್ರವನ್ನು ಚಿತ್ರದುರ್ಗ ಡಿಸಿ ವೆಂಕಟೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಹೊಳಲ್ಕೆರೆ ತಾಲೂಕಿನ ರೈತರಿಗೂ ಕೂಡ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿದ್ದರೂ ಕಂದಾಯ ಮತ್ತು ಪಂಚಾಯತ್ ರಾಜ್, ಕೃಷಿ ಇಲಾಖೆಗಳ ನಿರ್ಲಕ್ಯö್ಯವೇ ಕಾರಣ ಕೂಡಲೇ ಈ ಭಾಗದ ಎಲ್ಲಾ ರೈತರಿಗೂ ಹಣ ಮಂಜೂರು ಮಾಡಬೇಕು ಕಂದಾಯ ಇಲಾಖೆಯ ಗ್ರಾಮಾಡಳಿತಾಧಿಕಾರಿ ಮತ್ತು ಕ್ಷೇತ್ರಮಟ್ಟದ ಕೃಷಿ ಇಲಾಖೆಯ ಅಧಿಕಾರಿಗಳು ಬೆಳೆನಷ್ಟ ಪರಿಹಾರ ಮತ್ತು ಬೆಳೆವಿಮೆ ಮಂಜೂರಾತಿಯಲ್ಲೂ ವ್ಯತ್ಯಾಸವಾಗಿದೆ ಕೆಲ ರೈತರಿಗೆ ಹೆಚ್ಚು ಕೆಲವರಿಗೆ ಕಡಿಮೆ ಹಣ ಜಮೆಯಾಗಿದೆ ಎಂದು ಆರೋಪಿಸಿದ್ದಾರೆ
ಸರ್ಕಾರವೇ ಸ್ಥಾಪಿಸಿರುವ ಸಹಾಯವಾಣ ಕೇಂದ್ರದ ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ದೂರವಾಣ ಕರೆ ಮಾಡಿದರೆ ಉಡಾಫೆ ಉತ್ತರ ನೀಡುತ್ತಾರೆ ಗೋಮಾಳ, ಅರಣ್ಯಭೂಮಿ, ಬಗರ್‌ಹುಕುಂ, ಹುಲ್ಲುಬನ್ನಿ, ಖರಾಬು ಸೇರಿದಂತೆ ಖುಷ್ಕಿ ಮತ್ತು ನೀರಾವರಿ ಜಮೀನುಗಳ ರೈತರು ಮತ್ತು ಪೌತಿ ಖಾತೆದಾರರು ಬಿತ್ತನೆ ಮಾಡಿ ಬೆಳೆನಷ್ಟಕ್ಕೆ ಒಳಗಾಗಿದ್ದಾರೆ ಈ ಹಿನ್ನೆಲೆ ಎಲ್ಲರಿಗೂ ಬೆಳೆನಷ್ಟ ಪರಿಹಾರ ಮಂಜೂರು ಮಾಡಬೇಕು ಎಂದರು
ಸರ್ಕಾರ ಖುಷ್ಕಿ ಮತ್ತು ನೀರಾವರಿ ಜಮೀನುಳ್ಳ ರೈತರಿಗೆ ಉಚಿತವಾಗಿ ಬೀಜ ಗೊಬ್ಬರ ಲಘು ಪೋಷಕಾಂಶಗಳನ್ನು ವಿತರಿಸಲು ಕ್ರಮ ವಹಿಸಲಿ; ಕಳೆದ ಹತ್ತಾರು ವರ್ಷಗಳ ಕಾಲ ಬೆಳೆನಷ್ಟಕ್ಕೆ ಒಳಗಾದ ಚಳ್ಳಕೆರೆ ತಾಲೂಕಿನ ಎಲ್ಲಾ ವರ್ಗದ ರೈತರಿಗೂ ರೈತ ಸಂಪರ್ಕ ಕೇಂದ್ರದಲ್ಲಿ ಆಯಾ ಭಾಗದ ರೈತರಿಗೆ ಮುಂಗಾರು ಬಿತ್ತನೆಗೆ ಬೀಜ, ಗೊಬ್ಬರ, ಲಘುಪೋಷಕಾಂಶಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಮನವಿ ಸಲ್ಲಿಸಿದರು
ಖುಷ್ಕಿ ಮತ್ತು ನೀರಾವರಿ ಜಮೀನುಗಳಲ್ಲಿನ ಸೂರ್ಯಕಾಂತಿ, ಹೂವು, ಹತ್ತಿ, ಸಜ್ಜೆ, ರಾಗಿ, ಈರುಳ್ಳಿ, ಮೆಕ್ಕೆಜೋಳ, ಶೇಂಗಾ, ತೊಗರಿ ಮತ್ತು ಎಲ್ಲಾ ಬಗೆಯ ತೋಟಗಾರಿಕಾ ಬೆಳೆಗಳಿಗೂ ಬೆಳೆವಿಮೆ ಮತ್ತು ಬೆಳೆ ನಷ್ಟಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಡಾ ವಾಸುದೇವ ಮೇಟಿ ಬಣದ ಪದಾಧಿಕಾರಿಗಳಾದ ಡಾ ವಾಸುದೇವ ಮೇಟಿ, ಈ ಎನ್ ಲಕ್ಷಿö್ಮÃಕಾಂತ್, ಓಂಕಾರಪ್ಪ, ಪಿ ನಾಗರಾಜು, ಎಚ್ ಶಿವಮ್ಮ, ಶ್ರೀಧರರೆಡ್ಡಿ, ಸಿದ್ದೇಶಯಾದವ್, ಕುಮಾರ ಸತ್ಯಪ್ಪ, ಟಿ ಮೋಹನ್ ಎಚ್‌ಡಿಪುರ, ಕೆರೆಯಾಗಳಹಳ್ಳಿ, ಉಪ್ಪರಿಗೇನಹಳ್ಳಿ, ಮತ್ತು ಹೊಳಲ್ಕೆರೆ ತಾಲೂಕಿನ ರೈತ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ
(

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page