ಹಿರಿಯೂರು :
ಬ್ರಾಹ್ಮಣ ಸಮಾಜದ ಯುವಕರು ನಮ್ಮ ಸಮಾಜದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ತಪ್ಪದೇ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಬ್ರಾಹ್ಮಣ ಸಮಾಜದೊಂದಿಗೆ ಕೈಜೋಡಿಸಬೇಕಿದೆ ಎಂಬುದಾಗಿ ಬ್ರಾಹ್ಮಣ ಸಮಾಜದ ಅಧ್ಯಕ್ಷರಾದ ಶ್ರೀಸ್ವಾಮಿನಾಥ್ ಹೇಳಿದರು.
ನಗರದ ಶಂಕರಮಠದಲ್ಲಿ ಬುಧವಾರದಂದು ತಾಲ್ಲೂಕು ಬ್ರಾಹ್ಮಣ ಸಮಾಜದ ವತಿಯಿಂದ ಕಾರ್ತಿಕ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ವೈಭವದ ಕಡೆಕಾರ್ತಿಕ ದೀಪೋತ್ಸವ” ಹಾಗೂ “ಪ್ರತಿಭಾಪುರಸ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಬ್ರಾಹ್ಮಣ ಸಮಾಜದ ಮಕ್ಕಳು ಹೆಚ್ಚು ಪರಿಶ್ರಮ ವಹಿಸಿ, ವಿದ್ಯಾಭ್ಯಾಸ ಮಾಡುವ ಮೂಲಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು, ಉನ್ನತ ವ್ಯಾಸಂಗ ಮಾಡಿ, ಉನ್ನತ ಉದ್ಯೋಗವನ್ನು ಪಡೆಯುವ ಮೂಲಕ ಸಮಾಜದ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವಂತಹ ಸೇವಾಮನೋಭಾವವನ್ನು ಬೆಳಿಸಿಕೊಳ್ಳಬೇಕು, ಮಕ್ಕಳ ಪ್ರಗತಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂಬುದಾಗಿ ಹೇಳಿದರು.
ಬ್ರಾಹ್ಮಣ ಸಮಾಜದ ಉಪಾಧ್ಯಕ್ಷರಾದ ನರಸಿಂಹಮೂರ್ತಿ ಮಾತನಾಡಿ, ನಮ್ಮ ಬ್ರಾಹ್ಮಣ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಪ್ರತಿವರ್ಷವೂ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿದ್ದು, ಈ ವರ್ಷವೂ ಸಹ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಕ್ಷೇತ್ರದಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ,
ಈ ವರ್ಷ ನಮ್ಮ ಸಮಾಜದ ನಂಜುಂಡರಾವ್ ಮತ್ತು ಶ್ರೀಮತಿ ವಸಂತಾ ಇವರ ಮಗಳಾದ ರಶ್ಮಿ ಎನ್. ಇವರು ಕಳೆದ 10 ವರ್ಷಗಳಿಂದ ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿ, 10 ನೇ ತರಗತಿಯ ಪರೀಕ್ಷೆಯಲ್ಲಿ ಶೇ.90.56 ರಷ್ಟು ಅಂಕಗಳನ್ನು ಪಡೆದಿದ್ದು, ಇವರಿಗೆ ನಮ್ಮ ಬ್ರಾಹ್ಮಣ ಸಮಾಜದ ವತಿಯಿಂದ ಪ್ರೋತ್ಸಾಹಧನ ನೀಡಿ, ಗೌರವಿಸಲಾಗುತ್ತಿದೆ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಹಿರಿಯರು ಹಾಗೂ ರವಿ ಮೆಲೋಡಿ ಸಂಗೀತ ಸಂಸ್ಥೆಯ ಮುಖ್ಯಸ್ಥರಾದ ಶ್ರೀರವಿಶಂಕರ್ ಹಾಗೂ ಶ್ರೀನಿವಾಸ್ ರಾವ್ ಸಂಗೀತ ಮನೋರಂಜನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಾಹ್ಮಣ ಸಮಾಜದ ಕಾರ್ಯದರ್ಶಿಗಳಾದ ಶ್ರೀವೆಂಕಟೇಶ ದೀಕ್ಷಿತ್ ರವರು 31 ದಿನಗಳ ಕಾರ್ತೀಕ ಪೂಜೆ ಸಲ್ಲಿಸಿದ ಸೇವಾಕರ್ತರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರುಗಳಾದ ಕೆ.ಬಾಲಸುಬ್ರಹ್ಮಣ್ಯ ಅಯ್ಯರ್, ಚಂದ್ರಶೇಖರ್, ಮಂಜುನಾಥ್, ಶ್ರೀನಿವಾಸರಾವ್, ಪಾಂಡುರಂಗರಾವ್, ಮೈಲಾರಲಿಂಗಮ್, ಶ್ರೀಪಾದ್ ವಸಿಷ್ಠ, ಸೇರಿದಂತೆ ಚೈತನ್ಯ ವಿಪ್ರಮಹಿಳಾ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments